ನೆಟ್ಟಾರು: ಉಪಯೋಗವಿಲ್ಲದ ಬಸ್ ತಂಗುದಾಣ
ಹೆಂಚು ಹಾರಿ ಹೋಗಿ ಕಟ್ಟಡ ಕುಸಿದು ಬೀಳುವ ಭೀತಿ, ದುರಸ್ತಿಗೆ ಆಗ್ರಹ
Team Udayavani, Jun 2, 2019, 6:00 AM IST
ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ಗೆ ಒಳಪಟ್ಟ ನೆಟ್ಟಾರು ಪ್ರಯಾಣಿಕರ ಬಸ್ ತಂಗುದಾಣ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಬಸ್ ನಿಲ್ದಾಣದ ಛಾವಣಿಯ ಮರದ ಪಕ್ಕಾಸು ಮುರಿದಿದ್ದು, ಹೆಂಚು ಹಾರಿ ಹೋಗಿದೆ. ಬಸ್ ನಿಲ್ದಾಣದ ಸುತ್ತ ಪೊದೆ ಬೆಳೆದು ನಿಂತಿದ್ದು, ಬಸ್ ನಿಲ್ದಾಣವನ್ನು ಗುರುತಿಸುವುದೇ ಅಸಾಧ್ಯವಾಗಿದೆ. ಪುತ್ತೂರಿನಿಂದ ಬೆಳ್ಳಾರೆಗೆ ಹಾಗೂ ಪೆರ್ಲಂಪಾಡಿಯಂದ ಬೆಳ್ಳಾರೆಗೆ ಸಂಪರ್ಕಿಸುವ ನೆಟ್ಟಾರು ಜಂಕ್ಷನ್ನಲ್ಲಿರುವ ಈ ಬಸ್ ನಿಲ್ದಾಣ ಹಲವು ವರ್ಷಗಳಿಂದ ಪಾಳು ಬಿದ್ದ ಸ್ಥಿತಿಯಲ್ಲಿದ್ದರೂ ಸರಿಪಡಿಸದಿರುವುದರಿಂದ ಪ್ರಯಾಣಿಕರು ರಸ್ತೆ ಬದಿಯಲ್ಲಿ ಬಸ್ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳಾಂತರಕ್ಕೆ ಆಗ್ರಹ
ಪೆರ್ಲಂಪಾಡಿ ಹಾಗೂ ಮಾಡಾವು ಮೂಲಕ ಪುತ್ತೂರಿಗೆ ಸಂಪರ್ಕ ಕಲ್ಪಿಸುವ ನೆಟ್ಟಾರು ಪ್ರಮುಖ ಜಂಕ್ಷನ್ ಆಗಿದ್ದು, ದಿನಂಪ್ರತಿ ಹತ್ತಾರು ಬಸ್ಗಳು ಸಂಚರಿಸುತ್ತವೆ. ಆದರೆ ಈಗ ಇರುವ ಬಸ್ ನಿಲ್ದಾಣ ಯಾವ ಕಡೆಯಿಂದ ಬಸ್ ಬಂದರೂ ಉಪಯೋಗಕ್ಕಿಲ್ಲ ಎಂಬಂತಾಗಿದೆ. ಬಸ್ ನಿಲ್ದಾಣ ಒಂದು ಕಡೆಯಾದರೆ ಬಸ್ ನಿಲ್ಲುವುದು ಬೇರೆಯೇ ಕಡೆ. ಆದ್ದರಿಂದ ವಿದ್ಯಾರ್ಥಿಗಳೂ ಸಹಿತ ಪ್ರಯಾಣಿಕರು ರಸ್ತೆ ಬದಿಯಲ್ಲೋ ಅಂಗಡಿ ಜಗಲಿಯಲ್ಲೋ ಬಸ್ಗಾಗಿ ಕಾಯುವುದು ಅನಿವಾರ್ಯವಾಗಿದೆ. ಬಸ್ ನಿಲ್ದಾಣವನ್ನು ಸ್ಥಳಾಂತರಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಾರ್ವಜನಿಕರು ಹಲವು ಬಾರಿ ಆಗ್ರಹಿಸಿದರೂ ಪ್ರಯೋಜನವಾಗಿಲ್ಲ. ಪ್ರಯಾಣಿಕರ ತಂಗುದಾಣ ಭಿಕ್ಷುಕರ ಆಶ್ರಯ ತಾಣವಾಗಿದೆ.
ಅಂಚೆ ಕಚೇರಿಗೂ ಅಪಾಯ
ಬಸ್ ನಿಲ್ದಾಣದ ಪಕ್ಕದಲ್ಲೇ ಮಣಿಕ್ಕಾರ ಅಂಚೆ ಕಚೇರಿ ಕಾರ್ಯಾಚರಿಸುತ್ತಿದ್ದು, ಬಸ್ ನಿಲ್ದಾಣದ ಛಾವಣಿ ಕುಸಿದಲ್ಲಿ ಅಂಚೆ ಕಚೇರಿಗೂ ಅಪಾಯ ತಪ್ಪಿದ್ದಲ್ಲ. ಪ್ರಯಾಣಿಕರ ವಿಶ್ರಾಂತಿ ಕೊಠಡಿಯ ಛಾವಣಿ ಮೂಲಕ ನೀರು ಸೋರುತ್ತಿದೆ. ಛಾವಣಿ ಕುಸಿದು ಬಿದ್ದಲ್ಲಿ ಅಂಚೆ ಕಚೇರಿಯ ಕಡತಗಳಿಗೂ ಹಾನಿಯಾಗುವ ಅಪಾಯವಿದೆ.
ಶೀಘ್ರ ದುರಸ್ತಿ
ಬೆಳ್ಳಾರೆ ಗ್ರಾಮ ಪಂಚಾಯತ್ವ್ಯಾಪ್ತಿಯ ಬಸ್ ನಿಲ್ದಾಣಗಳ ದುರಸ್ತಿಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು. ನೆಟ್ಟಾರು ಬಸ್ ನಿಲ್ದಾಣವನ್ನು ಪರಿಶೀಲಿಸಿ ಮಳೆಗಾಲಕ್ಕೆ ಮೊದಲು ಛಾವಣಿ ಸರಿಪಡಿಸಲಾಗುವುದು.
– ಶಕುಂತಳಾ ನಾಗರಾಜ್, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ
– ಉಮೇಶ್ ಮಣಿಕ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ