ಉಪವಿದ್ಯುತ್‌ ಕೇಂದ್ರ: ಸಾಮರ್ಥ್ಯ ಹೆಚ್ಚಳ

ಪುತ್ತೂರು: 20 ಮೆಗಾವ್ಯಾಟ್‌ ಸಾಮರ್ಥ್ಯದ ಹೆಚ್ಚುವರಿ ಪರಿವರ್ತಕ ಅಳವಡಿಕೆ

Team Udayavani, Mar 14, 2020, 4:36 AM IST

kadama-power

ಪುತ್ತೂರು ವಿದ್ಯುತ್‌ ಉಪಕೇಂದ್ರಕ್ಕೆ ಹೊಸ ಪರಿವರ್ತಕ ಆಗಮಿಸಿದೆ.

ಪುತ್ತೂರು: ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳ ವಿದ್ಯುತ್‌ ಸರಬರಾಜು ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿರುವ ಪುತ್ತೂರಿನ 110 ಕೆ.ವಿ. ವಿದ್ಯುತ್‌ ಉಪಕೇಂದ್ರದ ವಿದ್ಯುತ್‌ ಪ್ರಸರಣ ಸಾಮರ್ಥ್ಯ ಹೆಚ್ಚಳಗೊಳಿಸಲು ಹೆಚ್ಚುವರಿ 20 ಮೆಗಾ ವ್ಯಾಟ್‌ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಅಳವಡಿಸಲಾ ಗುತ್ತಿದ್ದು, ಮಾರ್ಚ್‌ ಅಂತ್ಯಕ್ಕೆ ಕಾರ್ಯಾರಂಭಿಸಲಿದೆ. ಪುತ್ತೂರು 110 ಕೆ.ವಿ. ವಿದ್ಯುತ್‌ ಉಪಕೇಂದ್ರವು ಹಾಲಿ 40 ಮೆ.ವ್ಯಾ. ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಹೆಚ್ಚುವರಿಯಾಗಿ 20 ಮೆ.ವ್ಯಾ. ಸಾಮರ್ಥ್ಯದ ವಿದ್ಯುತ್‌ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಕೆಪಿಟಿಸಿಎಲ್‌ ವತಿಯಿಂದ ಈ ಕಾಮಗಾರಿಗಳು ನಡೆಯುತ್ತಿದ್ದು, ಟ್ರಾನ್ಸ್‌ ಫಾರ್ಮರ್‌ ಅಳವಡಿಸುವ ಕಾಮಗಾರಿ ಮಾತ್ರ ಬಾಕಿಯಿದೆ.

ಕ್ರೇನ್‌ ಮೂಲಕ ಅಳವಡಿಕೆ
ವಿದ್ಯುತ್‌ ಪರಿವರ್ತಕಕ್ಕೆ 1.75 ಕೋಟಿ ರೂ. ಹಾಗೂ ಅಳವಡಿಕೆ ಮತ್ತು ಸಾಗಾಟ ವೆಚ್ಚವಾಗಿ 75 ಲಕ್ಷ ರೂ. ಸೇರಿ ಒಟ್ಟು 2.50 ಕೋಟಿ ರೂ. ವಿನಿಯೋಗವಾಗಲಿದೆ. 20 ಮೆಗಾವ್ಯಾಟ್‌ ವಿದ್ಯುತ್‌ ಪರಿವರ್ತಕ ಪುತ್ತೂರು ವಿದ್ಯುತ್‌ ಉಪಕೇಂದ್ರಕ್ಕೆ ಆಗಮಿಸಿದ್ದು ಕ್ರೇನ್‌ ಮೂಲಕ ಅಳವಡಿಸಲಾಗುತ್ತದೆ.

ಪೂರೈಕೆ ಬಹೂಪಯೋಗಿ
ಹೆಚ್ಚುವರಿ ಯೋಜನೆಯ ಮೂಲಕ ಪುತ್ತೂರು 110 ಕೆ.ವಿ. ವಿದ್ಯುತ್‌ ಉಪಕೇಂದ್ರವು 60 ಮೆ.ವ್ಯಾ. ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರವಾಗಿ ಮೇಲ್ದರ್ಜೆಗೇರಲಿದೆ. ಆ ಮೂಲಕ ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳ ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ಪ್ರಗತಿ ಕಾಣಲಿದೆ. 10 ವರ್ಷಗಳ ಹಿಂದೆ ಪುತ್ತೂರು 110 ಕೆ.ವಿ. ವಿದ್ಯುತ್‌ ಉಪಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿತ್ತು. ಅನಂತರದಲ್ಲಿ ಈಗ ಕಾಮಗಾರಿ ನಡೆಯುತ್ತಿರುವುದರಿಂದ ವಿದ್ಯುತ್‌ ಬಳಕೆದಾರರಲ್ಲಿ ಆಶಾಭಾವನೆ ಮೂಡಿಸಿದೆ.

ಕಡಿಮೆಯಾಗಲಿದೆ ಒತ್ತಡ
ಹಾಲಿ ತಾಲೂಕಿನ ಮಾಡಾವಿನಲ್ಲಿ 110 ಕೆ.ವಿ. ವಿದ್ಯುತ್‌ ಉಪಕೇಂದ್ರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಈ ಉಪಕೇಂದ್ರವು ಕಾರ್ಯಾರಂಭಗೊಂಡಲ್ಲಿ ಸುಳ್ಯ, ಕಡಬ ಭಾಗದ ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ಇನ್ನಷ್ಟು ಪ್ರಗತಿ ಕಾಣುವ ಜತೆಗೆ ಪುತ್ತೂರು ಉಪಕೇಂದ್ರದ ಒತ್ತಡವನ್ನೂ ಕಡಿಮೆ ಮಾಡಲಿದೆ. ಇದರ ಜತೆಗೆ ಮಾಡಾವು, ಕೈಕಾರ, ಉಪ್ಪಿನಂಗಡಿ ಸಬ್‌ಸ್ಟೇಷನ್‌ ವಿಚಾರಗಳು ಪ್ರಗತಿಯಲ್ಲಿರುವುದು ಕಾರ್ಯರೂಪಕ್ಕೆ ಬಂದರೆ ಬಹುತೇಕ ಸಮಸ್ಯೆಗಳು ಬಗೆಹರಿಯುವ ವಿಶ್ವಾಸದಲ್ಲಿ ಮೆಸ್ಕಾಂ ಇದೆ.

ಪ್ರಸರಣ ವ್ಯವಸ್ಥೆ ಉತ್ತಮ
ಮೂರು ತಾಲೂಕುಗಳ ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಹಂತ ಹಂತವಾಗಿ ಯೋಜನೆ ಹಾಕಿಕೊಳ್ಳಲಾಗಿದೆ. ಆ ಮೂಲಕ ವಿದ್ಯುತ್‌ ಪ್ರಸರಣ ವ್ಯವಸ್ಥೆಯನ್ನು ಉತ್ತಮಪಡಿಸಲಿದೆ. ಗುಣಮಟ್ಟದ ಹಾಗೂ ನಿರಂತರ ವಿದ್ಯುತ್‌ ಸರಬರಾಜು ಮಾಡಲು ಕ್ರಮಗಳನ್ನು ಕೈಗೊಳ್ಳಲಿದೆ.
– ಗಂಗಾಧರ್‌, ಕಾರ್ಯಪಾಲಕ ಎಂಜಿನಿಯರ್‌, ಕೆಪಿಟಿಸಿಎಲ್‌, ಮಂಗಳೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.