ಸಾಂಕ್ರಾಮಿಕ ರೋಗ ತಡೆಗೆ ಮುನ್ನೆಚ್ಚರಿಕೆ

ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಮಠಂದೂರು ಸೂಚನೆ

Team Udayavani, Jul 28, 2019, 5:00 AM IST

q1-4

ಪುತ್ತೂರು: ಡೆಂಗ್ಯೂ, ಮಲೇ ರಿಯಾ ಸಹಿತ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ತತ್‌ಕ್ಷಣ ರೋಗಗಳ ತಡೆಗೆ ಕ್ರಮ ಕೈಗೊಳ್ಳಬೇಕು ಮತ್ತು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಸಂಬಂಧಿಸಿ ಅಗತ್ಯವಾಗಿ ಬೇಕಾದ ಉಪಕರಣಗಳ ಕುರಿತು ಗಮನಕ್ಕೆ ತರಬೇಕು ಎಂದು ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದ್ದಾರೆ.

ಪುತ್ತೂರು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ವೈದ್ಯರಿಗೆ ಮತ್ತು ತಾಲೂಕು ಆರೋಗ್ಯಾಧಿಕಾರಿಯವರನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲೇ ಹೆಚ್ಚಿನ ಸಾಂಕ್ರಾ ಮಿಕ ರೋಗಗಳು ಪತ್ತೆಯಾಗಿವೆ. ನಿರ್ಮಾಣ ಹಂತದ ಕಟ್ಟಡಗಳು ಎಲ್ಲೆಲ್ಲಿ ಇವೆ ಎಂದು ಪಟ್ಟಿ ಮಾಡಿ. ನಗರಸಭೆ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕಟ್ಟಡದಲ್ಲಿ ನೀರು ತುಂಬಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ. ವಾಸ್ತವ್ಯದ ಕಟ್ಟಡದ ಮೇಲೂ ನೀರು ನಿಲ್ಲದಂತೆ ಜಾಗೃತಿ ಮೂಡಿಸಿ ಎಂದರು.

ಸ್ಕಾ ್ಯನಿಂಗ್‌ ಮೆಷಿನ್‌ಗೆ ಪ್ರಸ್ತಾವನೆ
ಆಸ್ಪತ್ರೆಯಲ್ಲಿ ಸ್ಕಾ ್ಯನಿಂಗ್‌ ಮೆಷಿನ್‌ ಕೊರತೆ ಕುರಿತು ಶಾಸಕರು ವೈದ್ಯರನ್ನು ಪ್ರಶ್ನಿಸಿದರು. ಉತ್ತರಿಸಿದ ವೈದ್ಯಾಧಿಕಾರಿ ಡಾ| ಆಶಾ ಪುತ್ತೂರಾಯ ಅವರು, ಸ್ಕಾ ್ಯನಿಂಗ್‌ ಮೆಷಿನ್‌ಗೆ ರೇಡಿಯೋಲಜಿಸ್ಟ್‌ ಬೇಕು ಎಂದರು. ಹೊರಗುತ್ತಿಗೆ ಆಧಾರ ದಲ್ಲಿ ಆರೋಗ್ಯ ರಕ್ಷಾ ಸಮಿತಿಯಿಂದ ರೇಡಿಯೋಲಜಿಸ್ಟ್‌ ಅವರ ನೇಮಕಾತಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ಸಲಹೆ ನೀಡಿದ ಶಾಸಕರು ಹೊಸ ಸ್ಕಾ ್ಯನಿಂಗ್‌ ಮೆಷಿನ್‌ಗೂ ಪ್ರಸ್ತಾವನೆ ಕಳುಹಿಸಿ ಎಂದರು. ಆಸ್ಪತ್ರೆಯಲ್ಲಿ ಕೆಲವೊಂದು ಸೌಲಭ್ಯ ಗಳಿಗೆ ಕೊರತೆ ಕಂಡುಬಂದಾಗ ಗಮನಕ್ಕೆ ತನ್ನಿ. ಅಧಿಕಾರಿಗಳ ಹಂತದಲ್ಲಿ ನಿಮಗೆ ಮೇಲಧಿಕಾರಿಗಳಲ್ಲಿ ಪ್ರಶ್ನಿಸಲು ಕಷ್ಟ ಆಗ ಬಹುದು. ಅದನ್ನು ನಾನು ಮಾಡುತ್ತೇನೆ ಎಂದು ಶಾಸಕರು ಹೇಳಿದರು.

ತಾತ್ಕಾಲಿಕ ಕಟ್ಟಡ
ಮರಣೋತ್ತರ ಪರೀ ಕ್ಷೆಯ ಬಳಿಕ ಮೃತರ ಸಂಬಂಧಿಕರು ಮತ್ತು ಪೊಲೀ ಸರಿಗೆ ಕರ್ತವ್ಯಕ್ಕೆ ನಿಲ್ಲಲು ಒಂದು ಶೆಡ್‌ನ‌ ಆವಶ್ಯಕತೆ ಇದೆ ಎಂದು ಆಸ್ಪತ್ರೆಯ ವೈದ್ಯರು ಪ್ರಸ್ತಾವಿಸಿದರು. ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ಸೂಚಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಹೊಸ ಮಾದರಿಯ ಮರಣೋತ್ತರ ಪರೀಕ್ಷೆಯ ಕಟ್ಟಡ ನಿರ್ಮಾಣ ಮಾಡಬೇಕೆಂದು ಚಿಂತನೆ ನಡೆಸಿದ್ದೇನೆ ಎಂದರು.

ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಡಾ| ರಾಘವೇಂದ್ರ ಪ್ರಸಾದ್‌ ಬಂಗಾರಡ್ಕ, ವಿದ್ಯಾ ಆರ್‌. ಗೌರಿ, ಕೃಷ್ಣ ನಾಯ್ಕ, ರಫೀಕ್‌ ದರ್ಬೆ, ರಾಜೇಶ್‌ ಬನ್ನೂರು, ವೈದ್ಯರಾದ ಡಾ| ಅಜೇಯ್‌, ಡಾ| ಜಗದೀಶ್‌, ಡಾ| ಸಂದೀಪ್‌, ಡಾ| ವಿಜಯ ಹಾಗೂ ಸಿಬಂದಿ ಉಪಸ್ಥಿತರಿದ್ದರು.

ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿ ಎಲಿಸಾ ಟೆಸ್ಟ್‌ಗಳನ್ನು ಮಾಡಬೇಕು. ಅದಕ್ಕೆ 10ರಿಂದ 15 ದಿನಗಳು ಬೇಕು. ಕಾರ್ಡ್‌ ಟೆಸ್ಟ್‌ನಿಂದ ಡೆಂಗ್ಯೂ ವರದಿ ಪಡೆದರೂ ಎಲಿಸಾ ಪರೀಕ್ಷೆ ಮುಖ್ಯ. ಆಸ್ಪತ್ರೆಯಲ್ಲಿ ಈಗಾಗಲೇ 7 ಶಂಕಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ರೋಗಿಯ ಪ್ಲೇಟ್ಲೆಟ್ 1 ಲಕ್ಷಕ್ಕಿಂತ ಕೆಳಗೆ ಬಂದರೆ ಡೆಂಗ್ಯೂ ಶಂಕೆ ಇರುತ್ತದೆ. ಡೆಂಗ್ಯೂವಿನಿಂದಾಗಿ ಪ್ರಸ್ತುತ ಆಸ್ಪತ್ರೆಯಲ್ಲಿ ಇಬ್ಬರು ದಾಖಲಾಗಿದ್ದಾರೆ. 15 ಮಲೇರಿಯಾ ಪ್ರಕರಣಗಳಿವೆ ಎಂದು ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.

ಎಲಿಸಾ ಟೆಸ್ಟ್‌
ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿ ಎಲಿಸಾ ಟೆಸ್ಟ್‌ಗಳನ್ನು ಮಾಡಬೇಕು. ಅದಕ್ಕೆ 10ರಿಂದ 15 ದಿನಗಳು ಬೇಕು. ಕಾರ್ಡ್‌ ಟೆಸ್ಟ್‌ನಿಂದ ಡೆಂಗ್ಯೂ ವರದಿ ಪಡೆದರೂ ಎಲಿಸಾ ಪರೀಕ್ಷೆ ಮುಖ್ಯ. ಆಸ್ಪತ್ರೆಯಲ್ಲಿ ಈಗಾಗಲೇ 7 ಶಂಕಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ರೋಗಿಯ ಪ್ಲೇಟ್ಲೆಟ್ 1 ಲಕ್ಷಕ್ಕಿಂತ ಕೆಳಗೆ ಬಂದರೆ ಡೆಂಗ್ಯೂ ಶಂಕೆ ಇರುತ್ತದೆ. ಡೆಂಗ್ಯೂವಿನಿಂದಾಗಿ ಪ್ರಸ್ತುತ ಆಸ್ಪತ್ರೆಯಲ್ಲಿ ಇಬ್ಬರು ದಾಖಲಾಗಿದ್ದಾರೆ. 15 ಮಲೇರಿಯಾ ಪ್ರಕರಣಗಳಿವೆ ಎಂದು ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.