ಮತ್ಸ್ಯತಟಾಕದಲ್ಲಿ ನೀರು ಚಿಮ್ಮಿಸಿ ದೇವರ ಮೀನುಗಳ ರಕ್ಷಣೆ

ಮಹಷೀರ್‌ ಸಂತತಿ ಕಾಪಾಡಲು 2.5 ಕಿ.ಮೀ. ದೂರದಿಂದ ನೀರು ಹರಿಸುತ್ತಿರುವ ದೇಗುಲ ಸಮಿತಿ

Team Udayavani, Feb 25, 2020, 4:53 AM IST

majji-28

ಅರಂತೋಡು: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ಮತ್ಸ್ಯ ತೀರ್ಥ ಹೊಳೆಯಲ್ಲಿ ನೀರಿನ ಹರಿವು ಇಳಿಮುಖಗೊಂಡ ಹಿನ್ನೆಲೆಯಲ್ಲಿ ಈಗ ದೇವರ (ಮಹಷೀರ್‌) ಮೀನುಗಳನ್ನು ರಕ್ಷಿಸಲು ಮತ್ಸ್ಯ ತಟಾಕದಲ್ಲಿ ನೀರು ಸಂಗ್ರಹಿಸಲಾಗುತ್ತಿದೆ.

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪಕ್ಕದ ಮತ್ಸ್ಯ ತೀರ್ಥ ಹೊಳೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ದೇವರ ಮೀನುಗಳಿವೆ. ಪ್ರತಿ ವರ್ಷ ಬೇಸಗೆ ಕಾಲದಲ್ಲಿ ಹೊಳೆಯಲ್ಲಿ ನೀರಿನ ಹರಿವು ಕಡಿಮೆಯಾಗಿ ಮೀನುಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಈ ಬಾರಿಯೂ ಮೀನುಗಳಿಗೆ ಸಾಕಷ್ಟು ನೀರಿನ ಕೊರತೆ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಇದಕ್ಕೆ ದೇಗುಲದ ವತಿಯಿಂದ ಮತ್ಸ್ಯತಟಾಕದಲ್ಲಿ ನೀರು ಸಂಗ್ರಹಿಸಿ ನೀರಿನ ಕೊರತೆಯಾಗದಂತೆ ನಿಗಾ ವಹಿಸಲಾಗುತ್ತಿದೆ.

ಚರ್ಮ ರೋಗ ನಿವಾರಣೆ
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ಅತೀ ಪುರಾತನವಾಗಿದ್ದು, ಇದಕ್ಕೆ ಸಂಬಂಧಿಸಿ ಸಾಕಷ್ಟು ಐತಿಹ್ಯಗಳಿವೆ. ಪಾಂಡವರ ಕಾಲದ ಕಿರಾತಾರ್ಜುನ ಯುದ್ಧ ನಡೆದಿದ್ದು ಇಲ್ಲೇ ಎಂಬ ಉಲ್ಲೇಖವಿದೆ. ವಿಷ್ಣುವು ಮತ್ಸ್ಯ ರೂಪ ತಾಳಿ ಬಂದ ಕಾರಣಕ್ಕೆ ಇದಕ್ಕೆ “ಮತ್ಸ್ಯ ತಟಾಕ’ ಎನ್ನುವ ಹೆಸರು ಬಂದಿದೆ. ಇಲ್ಲಿ ಸಾವಿರಾರು ದೇವರ ಮೀನುಗಳಿವೆ. ಮೀನುಗಳಿಗೆ ಅಕ್ಕಿ ಹಾಕಿದರೆ ಚರ್ಮಕ್ಕೆ ಸಂಬಂಧಪಟ್ಟ ರೋಗಗಳು ವಾಸಿಯಾಗುತ್ತವೆ ಎನ್ನುವುದು ಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ಜಾತ್ರೆ ಹಾಗೂ ಇತರ ಸಂದರ್ಭದಲ್ಲಿ ಮೀನುಗಳಿಗೆ

ಆಹಾರ ನೀಡಲು ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿಯನ್ನು ಭಕ್ತರು ಸಮರ್ಪಿಸುತ್ತಾರೆ. ಮತ್ಸé ತಟಾಕದ ಪಕ್ಕದಲ್ಲಿ ಹೊಳೆಯಲ್ಲಿ ನೀರಿನ ಲಭ್ಯತೆ ಕಡಿಮೆ ಆದಾಗ ದೇವರ ಮೀನುಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗುತ್ತದೆ. ನೀರಿನ ಪ್ರಮಾಣ ನೋಡಿಕೊಂಡು ದೇವಾಲಯದ ವತಿಯಿಂದಲೇ ಮೀನುಗಳಿಗೆ ಆಹಾರ ನೀಡಲಾಗುತ್ತದೆ. ಪೈಪ್‌ ಮೂಲಕ ಹೊಳೆಗೆ ನೀರು ಸುಮಾರು 2.5 ಕಿ.ಮೀ. ದೂರದ ದೇವರಗುಂಡಿ ಗುಡ್ಡದಿಂದ ಪೈಪ್‌ ಮೂಲಕ ನೀರು ತಂದು ಹೊಳೆಗೆ ಬಿಡುವ ಯೋಜನೆ ಕೆಲವು ವರ್ಷಗಳಿಂದ ನಡೆಯುತ್ತಿದೆ. ಇದರಿಂದ ಮೀನುಗಳಿಗೆ ಸ್ವಲ್ಪ ಮಟ್ಟಿನ ನೀರಿನ ಕೊರತೆ ನೀಗುತ್ತದೆ. ಪೈಪ್‌ನಲ್ಲಿ ದೂರದ ಹೊಳೆಯಿಂದ ನೀರು ಬಂದು ಬೀಳುತ್ತಿದ್ದು, ಮೀನು ಗುಂಡಿಯಲ್ಲಿ ನೀರು ಸಾಕಷ್ಟು ಪ್ರಮಾಣದಲ್ಲಿ ಶೇಖರಣೆಗೊಂಡು ಮೀನುಗಳು ಉಲ್ಲಾಸಭರಿತವಾಗಿ ಓಡಾಡುತ್ತಿವೆ.

ಚಿಮ್ಮುವ ನೀರು
ದೂರದ ಗುಡ್ಡದಿಂದ ಬರುವ ನೀರಿಗೆ ಅಳವಡಿಸಿರುವ ಪೈಪ್‌ಗ್ಳಲ್ಲಿ ರಂಧ್ರಗಳನ್ನು ಮಾಡಿ ಆ ಮೂಲಕ ನೀರನ್ನು ಚಿಮ್ಮಿಸಲಾಗುತ್ತಿದೆ. ಚಿಮ್ಮುವ ನೀರಿನಲ್ಲಿ ಮೀನುಗಳು ಆಡುವುದನ್ನು ನೋಡುವುದು ಭಕ್ತರಿಗೂ ಆನಂದ ನೀಡುತ್ತದೆ.

ಕೊರತೆಯಾಗದಂತೆ ಕ್ರಮ
ದೇವರ ಮೀನು ಗುಂಡಿಗೆಯಲ್ಲಿ ನೀರಿನ ಕೊರತೆ ಎದುರಾಗದಂತೆ ಈ ವರ್ಷವೂ ಸುಮಾರು ಎರಡೂವರೆ ಕಿ.ಮೀ. ದೂರದ ದೇವರ ಗುಂಡಿಯಿಂದ ಪೈಪ್‌ ಮೂಲಕ ನೀರು ಹರಿಸಿ ಮೀನಿನ ಗುಂಡಿಗೆ ಚಿಮ್ಮಿಸಲಾಗುತ್ತಿದೆ. ದೇವರ ಮೀನುಗಳಿಗೆ ನೀರಿನ ಕೊರತೆ ಆಗದಂತೆ ಮುನ್ನೆಚ್ಚರ ವಹಿಸಿಕೊಳ್ಳುತ್ತಿದ್ದೇವೆ.
– ಆನಂದ ಕಲ್ಲಗದ್ದೆ, ದೇವಸ್ಥಾನದ ವ್ಯವಸ್ಥಾಪಕರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.