ಪ್ಲಾಸ್ಟಿಕ್‌ ಸೌಧವಿದ್ದರೂ ಬಳಸಲು ಸಾರ್ವಜನಿಕರ ನಿರಾಸಕ್ತಿ!


Team Udayavani, May 28, 2019, 6:00 AM IST

w-16

ನರಿಮೊಗರು: ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳ ಪೈಕಿ ಮುಂಡೂರು ಗ್ರಾಮವೂ ಸೇರಿಕೊಂಡಿದೆ. ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಸಾಕಷ್ಟು ಪ್ರೋತ್ಸಾಹವನ್ನು ನೀಡುತ್ತಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಪ್ಲಾಸ್ಟಿಕ್‌ ಅನ್ನು ಭೂಮಿಯ ಮೇಲೆ ಹಾಕಬೇಡಿ. ಪರಿಸರವನ್ನು ಕಾಪಾಡಿ ಎಂದು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭದಿಂದಲೇ ಮಾಡಿಕೊಂಡು ಬರಲಾಗುತ್ತಿದೆ.

ಮುಂಡೂರು ಗ್ರಾ.ಪಂ. ಅಥವಾ ಪೇಟೆಯ ಸುತ್ತಮುತ್ತಲ ಅಂಗಡಿಗಳು, ಮನೆಗಳಿಂದ ಉತ್ಪತ್ತಿಯಾಗುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ದಾಸ್ತಾನಿರಿಸಲು ಗ್ರಾ.ಪಂ. ವತಿಯಿಂದ ಗ್ರಾ.ಪಂ. ಕಚೇರಿ ಎದುರು ಪ್ಲಾಸ್ಟಿಕ್‌ ಸೌಧವನ್ನು ನಿರ್ಮಿಸಿದೆ. ಆದರೆ ಈ ಸೌಧಕ್ಕೆ ಪ್ಲಾಸ್ಟಿಕ್‌ ತಂದು ಹಾಕುವುದೇ ಇಲ್ಲ! ಗ್ರಾಮಸ್ಥರ ನಿರಾಸಕ್ತಿಯಿಂದ ಪ್ಲಾಸ್ಟಿಕ್‌ ಸೌಧ ನನೆಗುದಿಗೆ ಬಿದ್ದಿದೆ.

ಅಚ್ಚುಕಟ್ಟಾದ ವ್ಯವಸ್ಥೆ
ಗ್ರಾ.ಪಂ. ವತಿಯಿಂದ ನಿರ್ಮಿಸಲಾದ ಪ್ಲಾಸ್ಟಿಕ್‌ ಸೌಧ ಒಂದು ಅಚ್ಚುಕಟ್ಟಾದ ವ್ಯವಸ್ಥೆಯಾಗಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲಾಗಿ ಸೌಧದೊಳಗೆ ತಂದು ಹಾಕಿ ಅದನ್ನು ನಾವು ಬೇರೆ ಕಡೆ ಸಾಗಾಟ ಮಾಡುತ್ತೇವೆ ಎಂದು ಗ್ರಾ.ಪಂ. ಮನವಿಯನ್ನು ಮಾಡುವ ಮೂಲಕ ಹೊಸ ವ್ಯವಸ್ಥೆಯನ್ನು ಪ್ರಾರಂಭ ಮಾಡಿತ್ತು. ಐದು ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ಸೇವೆಯನ್ನು ಮೊದಮೊದಲು ಜನ ಉಪಯೋಗಿಸುತ್ತಿದ್ದರು. ಆ ಬಳಿಕ ಬಳಕೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಈಗ ಸೌಧದೊಳಗೆ ಕಸ ಹಾಕುವುದೇ ಇಲ್ಲ. ಇದರಿಂದ ಗ್ರಾ.ಪಂ. ಸ್ವತ್ಛತೆಯ ಕುರಿತು ಇದ್ದ ಕನಸು ನನಸಾಗಿಲ್ಲ.

ರಸ್ತೆ ಬದಿಯಲ್ಲೇ ಎಸೆಯುತ್ತಾರೆ
ಮುಂಡೂರು ಗ್ರಾ.ಪಂ. ಎದುರಿನ ರಸ್ತೆಯ ಪಕ್ಕದಲ್ಲೇ ಪ್ಲಾಸ್ಟಿಕ್‌ ಸೌಧ ಇದ್ದರೂ ಅದಕ್ಕೆ ಕಸ ಹಾಕುವುದು ಕಡಿಮೆ. ಕಸ ರಸ್ತೆಯ ಬದಿಯಲ್ಲೇ ಇದೆ. ಕೂಡುರಸ್ತೆ -ಮುಂಡೂರು ರಸ್ತೆಯ ಬದಿಯಲ್ಲೂ ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿಸಿ ಎಸೆದ ಕಸ ಕಾಣಸಿಗುತ್ತದೆ. ಪರಿಸರವನ್ನು ಹಾಳುಮಾಡುವ ಷಡ್ಯಂತ್ರ ಇದರಲ್ಲಿದೆ ಎನ್ನುತ್ತಾರೆ ಗ್ರಾಮಸ್ಥರು. ಕಸ ಹಾಕಲು ವ್ಯವಸ್ಥೆ ಇದ್ದರೂ ಕಸ ಹಾಕುತ್ತಿಲ್ಲ. ರಾತ್ರಿ ವೇಳೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕಸವನ್ನು ರಸ್ತೆ ಬದಿ ಎಸೆಯುತ್ತಾರೆ. ಕಸವನ್ನು ಯಾರು ಎಸೆಯುತ್ತಾರೆ ಎಂಬುದನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ.

ಜಾಗೃತಿ ಮುಖ್ಯ
ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಗ್ರಾಮಸ್ಥರು ಮನೆಯಲ್ಲೇ ಬಳಕೆ ಮಾಡುತ್ತಾರೆ. ಆದರೆ ಪ್ಲಾಸ್ಟಿಕ್‌ ವಸ್ತುಗಳನ್ನು ಏನು ಮಾಡಬೇಕು? ಏನು ಮಾಡಬಹುದು? ಎನ್ನುವ ಪರಿಜ್ಞಾನ ಕೆಲವರಿಗೆ ಇರುವುದಿಲ್ಲ. ಪ್ಲಾಸ್ಟಿಕ್‌ ಚೀಲಗಳನ್ನು ಮರು ಬಳಕೆ ಮಾಡುತ್ತಾರೆ ಎನ್ನುವ ವಿಚಾರವೂ ಗ್ರಾಮೀಣ ಜನರಿಗೆ ಮಾಹಿತಿ ಇರುವುದಿಲ್ಲ.

ಪ್ಲಾಸ್ಟಿಕ್‌ ವಸ್ತುಗಳನ್ನು ಸ್ವತ್ಛವಾಗಿಟ್ಟು ಒಣಗಿಸಿ ಅದನ್ನು ಸ್ಥಳೀಯ ಅಂಗನವಾಡಿಗೆ ನೀಡಿದರೆ ಅಲ್ಲಿಂದ ಬೇರೆ ಕಡೆ ರವಾನೆಯಾಗುತ್ತದೆ. ಪ್ಲಾಸ್ಟಿಕ್‌ ಚೀಲಗಳನ್ನು ಕ್ರೋಡೀಕರಿಸಿ ಎಂದು ಸರಕಾರವೇ ಮನೆ ಮನೆಗೆ ಮಾಹಿತಿ ನೀಡಿದೆ ಆದರೆ ಪ್ರಯೋಜನ ಮಾತ್ರ ಶೂನ್ಯ. ಯಾವ ಅಂಗನವಾಡಿಗೂ ಪ್ಲಾಸ್ಟಿಕ್‌ ಬರಲೇ ಇಲ್ಲ. ಪ್ಲಾಸ್ಟಿಕ್‌ ವಸ್ತುಗಳಿಂದ ಆಗುತ್ತಿರುವ ತೊಂದರೆಗಳ ಕುರಿತು ಜಾಗೃತಿ ಮೂಡಿಸುವುದೊಂದೇ ಇದಕ್ಕೆ ಪರಿಹಾರ ಎನ್ನುವಂತಿದೆ.

ಸ್ವತ್ಛ ಗ್ರಾಮವಾಗಬೇಕು. ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಕಡಿಮೆ ಮಾಡಿ ಜನ ಬಟ್ಟೆ ಚೀಲಗಳನ್ನೇ ಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ನಾವು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿ ಸರ್ವೆ ಷಣ್ಮುಖ ಯುವಕ ಮಂಡಲವು ರಾಜ್ಯದಲ್ಲಿ 2ನೇ ಸ್ಥಾನ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತು.

ಸತ್ತ ಕೋಳಿ ವಿಲೇ
ಇತ್ತೀಚೆಗೆ ಸ್ಥಳೀಯರೊಬ್ಬರು 500ರಷ್ಟು ಸತ್ತ ಕೋಳಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹಾಕಿದ್ದನ್ನು ಪತ್ತೆಹಚ್ಚಿ ಗ್ರಾ.ಪಂ.ಗೆ ದೂರು ನೀಡಿದ್ದರು. ಬಳಿಕ ಗ್ರಾ.ಪಂ.ನಿಂದ ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಸಹಕಾರ ಮುಖ್ಯ
ಸಾರ್ವಜನಿಕರ ಸಹಕಾರ ಇದ್ದಲ್ಲಿ ಮಾತ್ರ ಯಾವುದೇ ಸಾರ್ವಜನಿಕ ಕೆಲಸ ಯಶಸ್ವಿ ಕಾಣಲು ಸಾಧ್ಯವಾಗುತ್ತದೆ. ಸ್ವತ್ಛತೆಯನ್ನು ಅವಗಣಿಸಿ ಸಮಸ್ಯೆ ಉಂಟುಮಾಡುವವರ ವಿರುದ್ಧ ಗ್ರಾ.ಪಂ. ಕಾನೂನು ಕ್ರಮ ಕೈಗೊಳ್ಳಲಿದೆ. ಸ್ವತ್ಛ ಗ್ರಾಮವಾಗಿಡಲು ಎಲ್ಲರೂ ಸಹಕರಿಸಬೇಕು.
ಎಸ್‌.ಡಿ. ವಸಂತ, ಅಧ್ಯಕ್ಷರು ಮುಂಡೂರು ಗ್ರಾ.ಪಂ.

ಪ್ರವೀಣ ಚೆನ್ನಾವರ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.