ಪಿಯುಸಿ: ತುಳು ಪಠ್ಯ ಸೇರ್ಪಡೆ ಭರವಸೆ
Team Udayavani, Jun 23, 2019, 5:00 AM IST
ಪುತ್ತೂರು: ಪಿಯುಸಿ ವಿಭಾಗದಲ್ಲೂ ತುಳು ಪಠ್ಯ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರಕ್ಕೆ ತುಳು ಅಕಾಡೆಮಿ ವತಿಯಿಂದ ಮನವಿ ಸಲ್ಲಿಸಲಾಗಿದೆ. ಪಿಯುಸಿಗೂ ತುಳು ಪಠ್ಯ ಮಾಡುವ ಭರವಸೆ ದೊರೆತಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.
ಅಖೀಲ ಭಾರತ ತುಳು ಒಕ್ಕೂಟ, ಪುತ್ತೂರು ತುಳುಕೂಟ ಹಾಗೂ ಶ್ರೀ ರಾಮಕೃಷ್ಣ ಪ್ರೌಢ ಶಾಲಾ ವತಿಯಿಂದ ಶನಿವಾರ ಕೊಂಬೆಟ್ಟು ಬಂಟರ ಭವನದಲ್ಲಿ ತುಳು ಭಾಷೆಯಲ್ಲಿ 10ನೇ ತರಗತಿಯಲ್ಲಿ ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಸಾಧಕ ಸಮ್ಮಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಕಾಲೇಜುಗಳಲ್ಲಿ ತುಳು ಪಠ್ಯ ಮಾಡುವ ಮೂಲಕ ತುಳು ಭಾಷೆಯ ಬೆಳವಣಿ ಗೆಗೆ ಸ್ಪಂದಿಸಿದೆ. ಇಂತಹ ಹಲವು ಕಾರ್ಯ ಕ್ರಮಗಳಿಂದ ತುಳು ಭಾಷೆಯ ಜತೆಗೆ ತುಳು ಸಂಸ್ಕೃತಿಯನ್ನು ಬೆಳೆಸುವ ಜಾಗೃತಿ ಜನತೆಯಲ್ಲಿ ಹೆಚ್ಚಾಗುತ್ತಿದೆ ಎಂದರು.
ರಾಜಕೀಯ ಒತ್ತಡ ಬೇಕು
ಜಗತ್ತಿನಲ್ಲಿ 1.50 ಕೋಟಿ ಮಂದಿ ತುಳು ಭಾಷೆಯನ್ನು ಮಾತನಾಡುತ್ತಿದ್ದಾರೆ. ಎಲ್ಲ ಅರ್ಹತೆಗಳಿದ್ದರೂ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ರಾಜಕೀಯದ ಒತ್ತಡ ಬೇಕಾಗಿದೆ. ಈ ಭಾಗದ ಸಂಸದರು ಮನಸ್ಸು ಮಾಡಿದರೆ ಬಹು ವರ್ಷಗಳ ಕನಸು ನನಸಾಗಬಹುದು ಎಂದರು.
ಜನಜಾಗೃತಿ ಆಂದೋಲನ
ಮುಖ್ಯ ಅತಿಥಿಯಾಗಿದ್ದ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಎ. ಹೇಮನಾಥ ಶೆಟ್ಟಿ, ತುಳು ಭಾಷಾ ಬೆಳವಣಿಗೆ ಬಲಿಷ್ಠವಾಗಲು ಜನ ಜಾಗೃತಿಯ ಆಂದೋಲನ ನಡೆಯಬೇಕಾ ಗಿದೆ. ತುಳು ಪಠ್ಯ ಕೇವಲ ಪುಸ್ತಕಕ್ಕೆ ಸೀಮಿತವಾಗದೆ ತುಳು ಶಬ್ದ ಸಂಪತ್ತನ್ನು ಬೆಳೆಸುವಂತಿರಬೇಕು. ತುಳು ಪಠ್ಯಕ್ಕೆ ಉತ್ತಮ ಶಿಕ್ಷಕರ ನೇಮಕಾತಿಯತ್ತ ಅಕಾ ಡೆಮಿ ಗಮನ ಹರಿಸಬೇಕಾಗಿದೆ ಎಂದರು.
ಮುಂದಿನ ಬಾರಿ ರಾಮಕೃಷ್ಣ ಪ್ರೌಢಶಾಲೆಯ 10ನೇ ತರಗತಿಯಲ್ಲಿ ತುಳು ಪಠ್ಯದಲ್ಲಿ ಶೇ. 100 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ತಲಾ 1,000 ರೂ. ನಗದು ಬಹುಮಾನ ನೀಡುವುದಾಗಿ ಅವರು ಘೋಷಣೆ ಮಾಡಿದರು.
ಸಮ್ಮಾನ
ಬರೋಡಾ ತುಳು ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಬಿ. ಅವರನ್ನು ಸಮ್ಮಾನಿ ಸಲಾಯಿತು. 10ನೇ ತರಗತಿ ಪರೀಕ್ಷೆಯಲ್ಲಿ ತುಳು ಪಠ್ಯದಲ್ಲಿ ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದಿಲ್ಲಿಯ ದಕ್ಷಿಣ ಭಾರತೀಯ ಸಾಂಸ್ಕೃತಿಕ ಸಂಘದ ಸಂಚಾಲಕ ನರೇಂದ್ರ ರೈ ಎಂ.ಬಿ., ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿರಂಜನ ರೈ ಮಠಂತಬೆಟ್ಟು, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ರಾಮಕೃಷ್ಣ ಪ್ರೌಢಶಾಲಾ ಮುಖ್ಯಗುರು ರೂಪಕಲಾ, ತುಳು ಅಕಾಡೆಮಿ ಸದಸ್ಯರಾದ ಕಾಂತಿ ಶೆಟ್ಟಿ ಬೆಂಗಳೂರು, ಶೀನಪ್ಪ ಆಳ್ವ, ವಿಜಯಕುಮಾರ್ ಕುಲಶೇಖರ, ತುಳು ಸಂಘಟನೆಯ ಹರಿಣಿ ವಿಜಯ್, ಚಂದ್ರಶೇಖರ ಸುವರ್ಣ ಭಾಗವಹಿಸಿದ್ದರು.
ಕಾರ್ಯಕ್ರಮ ಸಂಯೋಜಕ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಸ್ವಾಗತಿಸಿ, ಅಖೀಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ರೈ ಪ್ರಾಸ್ತಾವಿಸಿದರು. ಪುತ್ತೂರು ತುಳುಕೂಟದ ಅಧ್ಯಕ್ಷ ವಿಜಯಕುಮಾರ್ ಹೆಬ್ಟಾರಬೈಲು ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಶಿಕ್ಷಕಿ ಲತಾ ರೈ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ