ಪುಂಜಾಲಕಟ್ಟೆ: ಬ್ರಹ್ಮಕಲಶೋತ್ಸವ ಸಂಭ್ರಮ


Team Udayavani, May 16, 2019, 5:45 AM IST

7

ಪುಂಜಾಲಕಟ್ಟೆ: ತುಳುನಾಡಿನ ಗರೋಡಿಗಳಲ್ಲಿ ಅತ್ಯಂತ ಕಾರಣಿಕಗಳಲ್ಲೊಂದಾಗಿ, ಭಕ್ತರ ಇಷ್ಟಾರ್ಥ ಸಿದ್ಧಿಸುತ್ತಿರುವ ಪುಣ್ಯಕ್ಷೇತ್ರವೆಂದು ಪ್ರಸಿದ್ಧಿ ಪಡೆದಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬೈದರ್ಕಳ ಗರೋಡಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್‌ ನಿರ್ಮಾಣಗೊಂಡಿದ್ದು, ಮೇ 17ರಿಂದ ಬ್ರಹ್ಮಕಲಶೋತ್ಸವ ಜರಗಲಿದೆ

ಐತಿಹಾಸಿಕ ಹಿನ್ನೆಲೆ
ಕಕ್ಯಪದವು ಗರೋಡಿ ವಿಶೇಷ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಸುಮಾರು ನಾಲ್ಕು ನೂರು ವರ್ಷಗಳ ಹಿಂದೆ ಅಸಮಾನತೆ, ಅನ್ಯಾಯಗಳ ವಿರುದ್ಧ ಹೋರಾಡಿ ದೈವತ್ವವನ್ನು ಏರಿದ ಅವಳಿ ವೀರ ಪುರುಷ ರಾದ ಕೋಟಿ ಚೆನ್ನಯರು ಬಾಳಿ ಬದುಕುತ್ತಿದ್ದ ಕಾಲಘಟ್ಟದಲ್ಲಿ ಅವರಿಂದಲೇ ಸ್ಥಾಪಿಸಲ್ಪಟ್ಟಿತು ಎನ್ನ ಲಾದ ತುಳುನಾಡಿನ 66 ಮೂಲ ಗರೋಡಿಗಳಲ್ಲಿ ಕಕ್ಯಪದವು ಗರೋಡಿಯೂ ಒಂದು ಎನ್ನುವುದು ಇಲ್ಲಿನ ವಿಶೇಷತೆ. ಕ್ರೀಡಾಪ್ರೇಮಿಗಳಾಗಿದ್ದ ಅವರಿಂದ ಸ್ಥಾಪಿತವಾದ ಕ್ರೀಡಾ ಮೈದಾನದ ಸ್ವರೂಪದಲ್ಲಿರುವ ಏಕೈಕ ಗರೋಡಿ ಎನ್ನುವುದು ಇಲ್ಲಿನ ಹೆಗ್ಗಳಿಕೆ.

ಉಳಿ, ಮಣಿನಾಲ್ಕೂರು, ಸರಪಾಡಿ, ಕಾವಳ ಮೂಡೂರು, ದೇವಸ್ಯಪಡೂರು, ತೆಂಕಕಜೆಕಾರು, ಪುತ್ತಿಲ, ಬಾರ್ಯ, ತೆಕ್ಕಾರು ಗ್ರಾಮಗಳ ವ್ಯಾಪ್ತಿಯ ಭಕ್ತರ ಸಹಿತ ಊರಪರವೂರ ಅಪಾರ ಭಕ್ತರ ಆರಾಧನಾಲಯವಾಗಿ ಕಕ್ಯಪದವು ಗರೋಡಿ ಪ್ರಸಿದ್ಧಿ ಪಡೆದಿದೆ. ಸುತ್ತಮುತ್ತಲಿನ ಊರಿನ ಜನತೆಗೆ ಭಕ್ತಿಭಾವೈಕ್ಯದ, ಕಾರಣಿಕದ ಪವಿತ್ರ ತಾಣ. ಇಲ್ಲಿನ ಉತ್ಸವಗಳೆಂದರೆ ಊರಿಗೆ ಊರೇ ಹಬ್ಬದ ವಾತಾವರಣ. ಅಪಾರ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸಿ, ಪ್ರಾರ್ಥಿಸಿ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳುತ್ತಿರುವುದು ಅನಾದಿ ಕಾಲದಿಂದ ನಡೆದುಕೊಂಡ ಪದ್ಧತಿ. ಕ್ಷೇತ್ರದಲ್ಲಿ ಬೆರ್ಮೆರ್‌, ಕೋಟಿ ಚೆನ್ನಯರ ಜತೆಯಲ್ಲಿ ಗ್ರಾಮದೈವ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ದೈವೊಂಕುಲು, ಮಾಯಂದಾಲ್‌ ಪ್ರಧಾನ ಶಕ್ತಿಗಳಾಗಿ ಭಕ್ತರಿಂದ ಆರಾಧಿಸಲ್ಪಡುತ್ತಿದ್ದಾರೆ.

ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯರ ಮುಂದಾಳತ್ವದಲ್ಲಿ, ಶ್ರೀನಿವಾಸ ಅರ್ಮುಡ್ತಾಯರ ಮಾರ್ಗದರ್ಶನದಲ್ಲಿ, ತಾಂತ್ರಿಕ ತಜ್ಞ ಪ್ರಮಲ್‌ ಕುಮಾರ್‌ ಕಾರ್ಕಳ ಮತ್ತು ವಾಸ್ತುಶಿಲ್ಪಿ ಸದಾಶಿವ ಗುಡಿಗಾರ್‌ ಅವರ ಮಾರ್ಗದರ್ಶನದಲ್ಲಿ ವಿಶಿಷ್ಠ ವಿನ್ಯಾಸದ ಅತ್ಯಂತ ಅಪರೂಪದ ಕಲಾತ್ಮಕ ತೌಳವ ದ್ರಾವಿಡ ಶೈಲಿಯ ಗರೋಡಿ ನಿರ್ಮಾಣಗೊಂಡಿದ್ದು, ಪ್ರತಿಷ್ಠೆ, ಬ್ರಹ್ಮಕಲಶಾದಿಗಳನ್ನು ಅರ್ಥಪೂರ್ಣವಾಗಿ, ವೈಭವಪೂರ್ಣವಾಗಿ ನಡೆಸಲು ಸಮಿತಿ ತೀರ್ಮಾನಿಸಿದೆ.

ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುನರ್‌ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ, ಸೇಸಪ್ಪ ಕೋಟ್ಯಾನ್‌ ಪಚ್ಚಿನಡ್ಕ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಚಿತ್ತರಂಜನ್‌ ಕಂಕನಾಡಿ, ರೋಹಿನಾಥ ಪಾದೆ ಸಂಚಾಲಕರಾಗಿ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌ ಕಾರ್ಯಾಧ್ಯಕ್ಷರಾಗಿ, ಕೆ. ಮಾಯಿಲಪ್ಪ ಸಾಲ್ಯಾನ್‌ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿದ್ದು, ಜತೆಗೆ ವಿವಿಧ ಸಮಿತಿ ಸದಸ್ಯರು ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.