ಮನೆಗಳಲ್ಲಿ ಮಳೆಕೊಯ್ಲು, ಜಲ ಮರುಪೂರಣ

 ಕುಂತೂರು ಎರ್ಮಾಳದ ಶಿಕ್ಷಕ ಸುಬ್ರಹ್ಮಣ್ಯ ಅವರ ಮನೆಯಲ್ಲಿ ಅನುಷ್ಠಾನ

Team Udayavani, Jul 14, 2019, 5:00 AM IST

y-21

ಸವಣೂರು: ಕಳೆದ ಬೇಸಗೆಯ ಬಿಸಿಲಿನ ತಾಪ, ನೀರಿನ ಬವಣೆ ನಮ್ಮ ಕಣ್ಣ ಮುಂದೆ ಇರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಅಭಾವ ದೂರಮಾಡಲು ಈಗಿಂದಲೇ ಮನೆ ಮನೆಗಳಲ್ಲಿ ಮಳೆಕೊಯ್ಲು ಘಟಕ ಅಥವಾ ಜಲ ಮರುಪೂರಣ ಘಟಕ ನಿರ್ಮಾಣಕ್ಕೆ ಮುಂದಾಗಬೇಕಿದೆ.

ಹಲವು ವರ್ಷಗಳಿಂದ ಕುಂತೂರು ಗ್ರಾಮದ ಎರ್ಮಾಳದ ಶಿಕ್ಷಕ ಸುಬ್ರಹ್ಮಣ್ಯ ಅವರು ತಮ್ಮ ಮನೆಯಲ್ಲಿ ಮಳೆಕೊಯ್ಲು ಘಟಕವನ್ನು ನಿರ್ಮಿಸಿ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತನ್ನ ಮನೆಯ ಬಾವಿಗೆ ಇಂಗಿಸುತ್ತಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಭವಿಷ್ಯಕ್ಕೆ ಪ್ರಯೋಜನ
ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ಭೂಮಿಯೊಳಗೆ ಇಂಗಿದ ನೀರು ಬ್ಯಾಂಕಿನಲ್ಲಿಟ್ಟ ನಿರಖು ಠೇವಣಿಯಂತೆ ಎನ್ನುತ್ತಾರೆ ಹಿರಿಯರು. ಹಿಂದೆಲ್ಲ ಎಂತಹ ಬೇಸಗೆಯಲ್ಲೂ ಕುಡಿಯುವ ನೀರಿಗೆ, ಕೃಷಿಗೆ ಅಷ್ಟೊಂದು ತಾಪತ್ರಯ ಇರಲಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ಮಳೆಗಾಲದಲ್ಲಿ ಸುರಿಯುವ ಮಳೆ ನೀರು ಕೆರೆ, ಬಾವಿ, ಮಣ್ಣಿನ ಕಟ್ಟಗಳಲ್ಲಿ ಶೇಖರಣೆಯಾಗುತ್ತಿತ್ತು.

ಆದರೆ ಈಗ ಹೆಚ್ಚಿನ ಕಡೆಗಳಲ್ಲಿ ಕೆರೆ, ಬಾವಿ, ಮಣ್ಣಿನ ಕಟ್ಟಗಳು ಕಾಣಸಿಗುವುದೇ ಅಪರೂಪ. ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ನಮ್ಮ ಅಂತರ್ಜಲ ಮಟ್ಟ ಹೆಚ್ಚಳಗೊಂಡು ಭವಿಷ್ಯದ ದಿನಗಳಿಗೆ ಪ್ರಯೋಜನವಾಗಲಿದೆ. ಸ್ವಯಂ ಪ್ರೇರಣೆಯಿಂದ ಅಳವಡಿಕೆ ಮನೆಯ ಮಳೆ ಕೊಯ್ಲು ಘಟಕದಿಂದ ಕೊಳವೆ ಬಾವಿಯಲ್ಲಿ ಬೇಸಗೆಯಲ್ಲೂ ನೀರಿನ ಮಟ್ಟ ಕುಸಿತವಾಗಿಲ್ಲ. ಮಳೆ ಕೊಯ್ಲಿನ ಮೂಲಕ ಮಳೆ ನೀರನ್ನು ಬಾವಿಗೆ ಇಂಗಿಸಿದ್ದರಿಂದ ಬಿರು ಬೇಸಗೆಯಲ್ಲೂ ನೀರು ಸಿಗುತ್ತದೆ. ನಾನು ಸ್ವಯಂ ಪ್ರೇರಣೆಯಿಂದ ಈ ಕಾರ್ಯ ಮಾಡಿದ್ದು, ಮುಂದಿನ ದಿನಗಳಲ್ಲಿ ನೀರಿಂಗಿಸುವಿಕೆ ಅನಿವಾರ್ಯವಾಗಲಿದೆ ಎನ್ನುತ್ತಾರೆ ಶಿಕ್ಷಕ ಸುಬ್ರಹ್ಮಣ್ಯ.

ನೀರಿಂಗಿಸುವಿಕೆ ಕಡ್ಡಾಯವಾಗಲಿ
ಮನೆ ಮನೆಗಳಲ್ಲಿ ನೀರಿಂಗಿಸುವಿಕೆಯನ್ನು ಸ್ಥಳೀಯಾಡಳಿತಗಳು ಕಡ್ಡಾಯ ಮಾಡ ಬೇಕಿದೆ. ಮಳೆ ಕೊಯ್ಲು ಅಳವಡಿಸುವವರಿಗೆ ಪ್ರೋತ್ಸಾಹ ನೀಡುವುದು ಆವಶ್ಯ. ಮನೆಗಳಲ್ಲಿ ಮಳೆ ಕೊಯ್ಲು ಘಟಕ ನಿರ್ಮಾಣಕ್ಕೆ 3ರಿಂದ 5 ಸಾವಿರ ರೂ.ಗಳ ವರೆಗೆ ವೆಚ್ಚವಾಗಬಹುದು. ಕೊಳವೆ ಬಾವಿಗಳಿಗೆ ಜಲ ಮರುಪೂರಣ ಘಟಕ ನಿರ್ಮಾಣಕ್ಕೆ ಕನಿಷ್ಠ 20 ಸಾವಿರ ರೂ. ವೆಚ್ಚವಾಗಬಹುದು. ಒಟ್ಟಿನಲ್ಲಿ ಮನೆ ಮನೆಯಲ್ಲಿ ಇಂತಹ ಯೋಜನೆಯನ್ನು ಅನುಷ್ಠಾನಕ್ಕೆ ತಂದರೆ ಗ್ರಾಮದಲ್ಲಿ ಜಲಸಮೃದ್ಧಿ ಸಾಧ್ಯ.

ಉದ್ಯೋಗ ಖಾತರಿಯಲ್ಲಿದೆ ಅವಕಾಶ
ಕೇಂದ್ರ ಸರಕಾರದ ಉದ್ಯೋಗ ಖಾತರಿ ಯೋಜನೆಯ ಮೂಲಕ ಕೊಳವೆ ಬಾವಿಗಳಿಗೆ ಜಲಮರುಪೂರಣ ಘಟಕ ನಿರ್ಮಾಣಕ್ಕೆ ಅವಕಾಶವಿದೆ. ಗ್ರಾ.ಪಂ.ನಲ್ಲಿ ಉದ್ಯೋಗ ಚೀಟಿ ಮಾಡಿಸಿಕೊಂಡು ಯೋಜನೆಯ ಕುರಿತಾದ ಕೆಲವು ದಾಖಲೆಗಳನ್ನು ನೀಡಿ ತಮ್ಮ ಮನೆಗಳಲ್ಲೂ ಈ ಘಟಕವನ್ನು ಆರಂಭಿಸಬಹುದು.

ಮನಸು ಬೇಕಷ್ಟೇ
ನೀರಿನ ಸಂರಕ್ಷಣೆಗೆ ಭಗೀರಥ ಪ್ರಯತ್ನವೇನೂ ಆಗಬೇಕೆಂದಿಲ್ಲ. ನೀರು ಸಂರಕ್ಷಣೆ ಮಾಡುವ ಮನಸ್ಸು ಇದ್ದರೆ ಸಾಕು. ಪೈಪ್‌ ಅಳವಡಿಸಿ ಸುಲಭ ವಿಧಾನದ ಮೂಲಕ ಛಾವಣಿ ನೀರನ್ನು ನೇರವಾಗಿ ಬಾವಿಗೆ ಇಳಿಸಬಹುದು. ತನ್ನ ಮನೆಯಲ್ಲಿ ಹಲವು ವರ್ಷ ಗಳಿಂದ ಮಳೆ ಕೊಯ್ಲು ಮಾಡುತ್ತಿದ್ದೇನೆ. ಇದರಿಂದ ಸಾಕಷ್ಟು ಪ್ರಯೋಜನವಾಗಿದೆ ಎಂದು ಕುಂತೂರು ಗ್ರಾಮದ ಎರ್ಮಾಳದಲ್ಲಿ ಶಿಕ್ಷಕ ಸುಬ್ರಹ್ಮಣ್ಯ ಅವರ ಅಭಿಮತ.

ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ
ಭವಿಷ್ಯದ ಹಿತದೃಷ್ಟಿಯಿಂದ ಮನೆ ಮನೆಯಲ್ಲಿ ನೀರಿಂಗಿಸುವಿಕೆಯನ್ನು ಗ್ರಾ.ಪಂ. ಕಡ್ಡಾಯಗೊಳಿಸದಿದ್ದರೂ ನಾಗರಿಕರು ಸ್ವಯಂ ಪ್ರೇರಣೆಯಿಂದ ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳನ್ನು ನಿರ್ಮಿಸಬೇಕು. ಇದರಿಂದ ಸಾಕಷ್ಟು ಪ್ರಯೋಜನವಾಗುತ್ತದೆ ಎಂಬುದನ್ನು ನಾನು ಕಂಡಿದ್ದೇನೆ. ಯುವಜನತೆ ಸಸ್ಯ ಸಂರಕ್ಷಣೆ ಹಾಗೂ ನೀರಿಂಗಿಸುವಿಕೆ ಕಾರ್ಯವನ್ನು ಮುುಂಚೂಣಿಯಲ್ಲಿ ನಿಂತು ಮಾಡಬೇಕಿದೆ ಎನ್ನುತ್ತಾರೆ ಸವಣೂರು ಗ್ರಾ.ಪಂ. ಸದಸ್ಯ ಗಿರಿಶಂಕರ ಸುಲಾಯ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.