ರೆಂಜಿಲಾಡಿ: ತೋಡು ದಾಟಲು ಮರದ ಪಾಲವೇ ಗತಿ

ಮಳೆಗಾಲದಲ್ಲಿ ಮಕ್ಕಳು, ವೃದ್ಧರ ಪಾಡು ದುಸ್ತರ; ಸೇತುವೆ ನಿರ್ಮಾಣಕ್ಕೆ ನಾಗರಿಕರ ಆಗ್ರಹ

Team Udayavani, Sep 17, 2019, 5:43 AM IST

u-33

ಕಲ್ಲುಗುಡ್ಡೆ : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ನೂಜಿಬೈಲ್‌ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಬಳಿ ಹರಿ ಯುತ್ತಿರುವ ತೋಡಿಗೆ ಸೇತುವೆ ನಿರ್ಮಿಸು ವಂತೆ ಹಾಗೂ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ರೆಂಜಿಲಾಡಿ ಗ್ರಾಮದ ನೂಜಿಬೈಲ್‌ ದೈವಸ್ಥಾನದ ಬಳಿಯಲ್ಲಿರುವ ತೋಡು ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಕಲ್ಲುಗುಡ್ಡೆ – ಕಡ್ಯಕೊಣಾಜೆ ಭಾಗದಿಂದ ನೂಜಿ ರೆಂಜಿಲಾಡಿ ಅಂಗನವಾಡಿ, ಶಾಲೆಗೆ ಬರುವ ವಿದ್ಯಾರ್ಥಿಗಳು, ದೈವಸ್ಥಾನಕ್ಕೆ ಬರುವ ಭಕ್ತರು ಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ತೋಡಿಗೆ ತಾತ್ಕಾಲಿಕ ಮರದ ಪಾಲ ನಿರ್ಮಾಣ ಮಾಡಲಾಗುತ್ತಿದೆ. ಮಕ್ಕಳು, ವೃದ್ಧರು ಭಯದಿಂದಲೇ ಅದರಲ್ಲಿ ಸಂಚರಿಸಬೇಕಾಗಿದೆ. ಮಳೆಗಾಲದಲ್ಲಿ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಹೆತ್ತವರು ಮಕ್ಕಳನ್ನು ಪಾಲ ದಾಟಿಸಬೇಕಾಗಿದೆ. ಇಲ್ಲಿ ಸೇತುವೆ ಇಲ್ಲದೇ ಇರುವುದರಿಂದ ನೂಜಿ-ರೆಂಜಿಲಾಡಿ ಶಾಲೆ ವ್ಯಾಪ್ತಿಯ ಮಕ್ಕಳು ದೂರದ ಶಾಲೆಗಳಿಗೆ ತೆರಳುತ್ತಿದ್ದು, ಮಕ್ಕಳ ಸಂಖ್ಯೆ ಕಡಿಮೆಗೊಳ್ಳುವ ಭೀತಿ ಯನ್ನು ಶಾಲಾ ಸಮಿತಿ ತೋಡಿಕೊಂಡಿದೆ.

ಸೇತುವೆಗೆ ಆಗ್ರಹ
ಇಲ್ಲಿಂದ ನೂಜಿ-ರೆಂಜಿಲಾಡಿ ಅಂಗನ ವಾಡಿ, ಶಾಲೆಗೆ ಎಳುವಾಲೆ, ಮಾರಪ್ಪೆ, ಕೊಣಾಜೆ ಇತರೆಡೆಯಿಂದ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಪ್ರಸಿದ್ಧ ನೂಜಿ ದೈವಸ್ಥಾನದ ಬಳಿ ಹರಿಯುತ್ತಿರುವ ತೋಡಿಗೆ ಸೇತುವೆ ನಿರ್ಮಿಸು ವಂತೆ ಹಲವು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಬೇಸಗೆ ಯಲ್ಲಿ ತೋಡಿನಲ್ಲಿ ನೀರಿನಲ್ಲದೇ ಇರುವುದರಿಂದ ತೋಡಿಗೆ ಮಣ್ಣು ಹಾಕಿ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತದೆ. ಮಳೆಗಾಲದಲ್ಲಿ ತೊಂದರೆಪಡುವ ಸ್ಥಿತಿ ನಿರ್ಮಾಣವಾಗುತ್ತಿದೆ.

ದುರಸ್ತಿಗೊಂಡಿಲ್ಲ ರಸ್ತೆ
ಕಲ್ಲುಗುಡ್ಡೆ ಮಾವಿನಕಟ್ಟೆಯಿಂದ ರೆಂಜಿಲಾಡಿ ನೂಜಿಬೈಲ್‌ ದೈವಸ್ಥಾನ ರಸ್ತೆಗೆ ಡಾಮರು ಹಾಕಲಾಗಿದ್ದು, ದೈವಸ್ಥಾನದ ಬಳಿಯಿಂದ ಕಲ್ಲುಗುಡ್ಡೆ-ಕಡ್ಯಕೊಣಾಜೆ ಸಂಪರ್ಕ ರಸ್ತೆಯವರೆಗೆ ಸುಮಾರು 400 ಮೀ. ದೂರದವರೆಗಿನ ಸಾರ್ವಜನಿಕ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ನೂಜಿಬೈಲ್‌ ಜಾತ್ರೆಯ ಸಂದರ್ಭ ಕೆಲವೊಮ್ಮೆ ದುರಸ್ತಿಗೊಂಡರೆ, ಉಳಿದಂತೆ ಬೇಸಗೆಯಲ್ಲಿ ಧೂಳಿನಿಂದ, ಮಳೆಗಾಲದಲ್ಲಿ ಕೆಸರಿನಿಂದ ಕೂಡಿ ಸಂಚಾರ ದುಸ್ತರಗೊಂಡಿರುತ್ತದೆ.

 ಶಾಸಕರು, ಸಂಸದರ ಬಳಿಗೆ ನಿಯೋಗ
ಇಲ್ಲಿ ಸೇತುವೆ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಆಗಿನ ಬಿಎಂಟಿಸಿ ಅಧ್ಯಕ್ಷ ನಾಭಿರಾಜ್‌ ಜೈನ್‌ ಅವರ ಪ್ರಯತ್ನದಿಂದ 35 ಲಕ್ಷ ರೂ. ಅನುದಾನ ಮಂಜೂರಾಗಿದ್ದರೂ, ಬಳಿಕ ಬಂದ ಸಮ್ಮಿಶ್ರ ಸರಕಾರ ಅದನ್ನು ರದ್ದುಪಡಿಸಿತ್ತು. ಪಂಚಾಯತ್‌ ಅನುದಾನದಿಂದ ಸೇತುವೆ ನಿರ್ಮಾಣ ಅಸಾಧ್ಯವಾಗಿರುವುದರಿಂದ, ಶೀಘ್ರದಲ್ಲಿ ಸ್ಥಳೀಯ ಪ್ರಮುಖರೊಂದಿಗೆ ನಾವು ಈ ಭಾಗದ ಶಾಸಕರ, ಸಂಸದರ ಬಳಿ ತೆರಳಿ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲು ತೀರ್ಮಾನಿಸಿದ್ದೇವೆ.
– ಸದಾನಂದ ಗೌಡ ಸಾಂತ್ಯಡ್ಕ, ಅಧ್ಯಕ್ಷರು ನೂಜಿಬಾಳ್ತಿಲ ಗ್ರಾ.ಪಂ.

ಶೀಘ್ರ ಸೇತುವೆ ನಿರ್ಮಾಣವಾಗಲಿ
ನೂಜಿಬೈಲ್‌ ದೈವಸ್ಥಾನ ಬಳಿ ಸೇತುವೆ ಇಲ್ಲದಿರುವುದರಿಂದ ಅನೇಕರು ತಮ್ಮ ಮಕ್ಕಳನ್ನು ದೂರದ ಶಾಲೆಗಳಿಗೆ ಕಳುಹಿಸುತ್ತಿದ್ದು, ಇಲ್ಲಿ ಸೇತುವೆ ನಿರ್ಮಿಸುವಂತೆ ಗ್ರಾ.ಪಂ.ಗೆ, ಶಿಕ್ಷಣ ಇಲಾಖೆ ಯವರಿಗೂ ಹಲವು ಮನವಿ ಸಲ್ಲಿಸ ಲಾಗಿದೆ. ಆದರೆ ಇಲ್ಲಿವರೆಗೆ ಯಾವುದೇ ಸ್ಪಂದನೆ ಸಿಗದಿರುವುದು ವಿಪರ್ಯಾಸ. ಇನ್ನಾದರೂ ಶೀಘ್ರವಾಗಿ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳ ಬೇಕೆಂಬುದೇ ನಮ್ಮ ಆಗ್ರಹ.
ರವಿಪ್ರಸಾದ್‌ ಕರಿಂಬಿಲ, ನೂಜಿ-ರೆಂಜಿಲಾಡಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷರು

ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.