ಏಕಾಂಗಿಯಾಗಿ ರಸ್ತೆ ದುರಸ್ತಿ ಮಾಡಿದ ಹಿರಿ ಜೀವ!

ಶರವೂರು ಉಜುರ್ಲಿ ನಿವಾಸಿ ಸುಬ್ರಹ್ಮಣ್ಯ ಉಪಾಧ್ಯಾಯರ ಮಾನವೀಯ ಕಾರ್ಯ

Team Udayavani, Jul 18, 2019, 5:00 AM IST

u-14

ಆಲಂಕಾರು: ತಾನಾಯಿತು ತನ್ನ ಪಾಡಾಯಿತು ಎಂದು ಕೂರುವ ಈ ಸಮಾಜದಲ್ಲಿ ಇಳಿ ವಯಸ್ಸಲ್ಲೂ ಸಮಾಜಕ್ಕೆ ಏನಾದರೂ ಮಾಡಬೇಕು ಎನ್ನುವ ಇರಾದೆಯಿಂದ ಇಲ್ಲೊಬ್ಬರು ಏಕಾಂಗಿಯಾಗಿ ರಸ್ತೆ ನಿರ್ಮಿಸಿ ಮಾದರಿಯಾಗಿದ್ದಾರೆ. ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಉಜುರ್ಲಿ ನಿವಾಸಿ ಸುಬ್ರಹ್ಮಣ್ಯ ಉಪಾಧ್ಯಾಯ ಅವರ ಈ ಸೇವೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರತೀ ಬೇಸಗೆ ಹಾಗೂ ಮಳೆಗಾಲದಲ್ಲಿ ಇವರ ಮನೆಯನ್ನು ಸಂಪರ್ಕಿಸುವ ರಸ್ತೆಯ ಜತೆಗೆ ಗ್ರಾಮವನ್ನು ಸಂಪರ್ಕಿಸುವ ಪಾಂಜೋಡಿ ಕಕ್ವೆ ರಸ್ತೆಯನ್ನು ಯಾವುದೇ ಸಂಭಾವನೆ ಪಡೆಯದೆ ಏಕಾಂಗಿಯಾಗಿ ದುರಸ್ತಿ ಮಾಡುವುದು ಇವರ ಕಾಯಕ. ಬೇಸಗೆ ಅಥವಾ ಮಳೆಗಾಲವೇ ಇರಲಿ ಇವರ ಸೇವೆ ನಿರಂತರವಾಗಿ ನಡೆಯುತ್ತದೆ. ಪ್ರತೀ ದಿನ ಬೆಳಗ್ಗೆ ಕತ್ತಿ ಹಾರೆಯೊಂದಿಗೆ ರಸ್ತೆಯ ಉದ್ದಗಲಕ್ಕೂ ಸಂಚರಿಸಿ ರಸ್ತೆಯಲ್ಲಿ ಮಳೆ ನೀರಿನಿಂದಾಗಿ ಬಿದ್ದಿರುವ ಗುಂಡಿಗಳಿಗೆ ಮಣ್ಣು, ಕಲ್ಲು ತುಂಬಿಸಿ ರಸ್ತೆ ದುರಸ್ತಿಗೊಳಿಸಿ ಸಂಚಾರಕ್ಕೆ ಅಡಚಣೆ ಆಗದಂತೆ ಮಾಡುತ್ತಾರೆ.

ಪರಿಸರ ಪ್ರೇಮ
ರಸ್ತೆ ಬದಿಯಲ್ಲಿ ನೆಟ್ಟಿರುವ ನೆಡುತೋಪುಗಳ ಗಿಡಗಳಿಗೆ ಮಣ್ಣು ಹಾಕಿ ರಕ್ಷಣೆ ಮಾಡುವುದರ ಮೂಲಕ ಪರಿಸರ ಪ್ರೇಮವನ್ನೂ ತೋರ್ಪಡಿಸಿದ್ದಾರೆ. ಉಪಾಧ್ಯಾಯರು 27 ವರ್ಷಗಳಿಂದ ನಿರಂತರ ಎಲೆಮರೆಯ ಕಾಯಿಯಂತೆ ಈ ಸೇವೆಯನ್ನು ಮಾಡುತ್ತಿದ್ದಾರೆ. ಯಾವುದೇ ಸಂಘ ಸಂಸ್ಥೆಯಾಗಲೀ ಸ್ಥಳೀಯಾಡಳಿತವಾಗಲೀ ಅವರ ಸೇವೆಯನ್ನು ಗುರುತಿಸಿಲ್ಲ. ಅಂಥ ಅಪೇಕ್ಷೆಯೂ ಈ ಹಿರಿ ಜೀವಕ್ಕಿಲ್ಲ. ಸುಮಾರು ಮೂರು ಕಿ.ಮೀ. ದೂರದ ರಸ್ತೆಯುದ್ದಕ್ಕೂ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳಿ ಕಾಮಗಾರಿ ನಡೆಸುತ್ತಾರೆ.

ರಸ್ತೆಗಳು ದೇಹದ ನರಗಳಿದ್ದಂತೆ
ಊರನ್ನು ಸಂಪರ್ಕಿಸುವ ರಸ್ತೆಗಳು ಮಾನವನ ದೇಹದ ನರ ನಾಡಿಗಳಿಗೆ ಸಮಾನ. ಒಂದು ನರ ಸರಿಯಾಗಿ ಕೆಲಸ ನಿರ್ವಹಿಸದೇ ಇದ್ದರೆ ದೇಹದ ಆರೋಗ್ಯವೇ ಹದಗೆಡುತ್ತದೆ. ಗ್ರಾಮ ವನ್ನು ಸಂಪರ್ಕಿಸುವ ಒಂದು ರಸ್ತೆ ಸರಿಯಾಗಿ ಇಲ್ಲವಾದರೆ ಆ ಊರು ಎಲ್ಲ ಮೂಲ ಸೌಕರ್ಯಗಳಿಂದ ವಂಚಿತ ವಾಗುತ್ತದೆ. ಈ ಕಾರಣಕ್ಕಾಗಿ ನನ್ನಿಂದಾಗು ವಂತಹ ಅಳಿಲ ಸೇವೆಯನ್ನು ಗ್ರಾಮಕ್ಕೆ ನೀಡುತ್ತಿದ್ದೇನೆ ಎಂದು ಸುಬ್ರಹ್ಮಣ್ಯ ಉಪಾಧ್ಯಾಯ ಹೇಳುತ್ತಾರೆ.

ಮಾದರಿ ಸೇವೆ
ಶ್ರಮದಾನ ಎನ್ನುವುದು ಇಂದಿನ ಕಾಲಘಟ್ಟದಲ್ಲಿ ಮರೀಚಿಕೆಯಾಗಿದೆ. ಸುಬ್ರಹ್ಮಣ್ಯ ಉಪಾಧ್ಯಾಯರ ಸೇವೆ ಮಾದರಿಯಾಗಿದೆ. ರಸ್ತೆಯನ್ನೇ ಕಬಳಿಸುವ ಜನರ ನಡುವೆ ಇಂತಹ ವ್ಯಕ್ತಿ ಇರುವುದೇ ನಮ್ಮೆಲ್ಲರ ಭಾಗ್ಯ. ಇಂತಹ ವ್ಯಕ್ತಿಗಳು ಪ್ರತೀ ವಾರ್ಡಿನಲ್ಲೂ ಇದ್ದರೆ ಗಾಂಧೀಜಿ ಕಂಡ ರಾಮ ರಾಜ್ಯದ ಕನಸು ನನಸಾಗಬಹುದು. ಇಂತಹವರ ಸಾಧನೆಯನ್ನು ಮಾಡಿದ ಸಾಧಕರನ್ನು ಮುಂದಿನ ದಿನಗಳಲ್ಲಿ ಸಾರ್ವಜನಿಕವಾಗಿ ಸಮ್ಮಾನಿಸಲಾಗುವುದು.
– ಕೇಶವ ಗೌಡ ಆಲಡ್ಕ, ವಾರ್ಡ್‌ ಸದಸ್ಯರು.

ಸದಾನಂದ ಆಲಂಕಾರು

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.