ನೀರು ದುರ್ಬಳಕೆ ವಿರುದ್ಧ ಕ್ರಮಕ್ಕೆ ಆಗ್ರಹ

ಮಳವೂರು: ಜಂಟಿ ಸಮಿತಿ ಸಭೆ

Team Udayavani, Jul 17, 2019, 5:00 AM IST

n-13

ಮಳವೂರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಜಂಟಿ ಸಮಿತಿ ಸಭೆ ಜರಗಿತು.

ಬಜಪೆ: ಮಳವೂರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಜಂಟಿ ಸಮಿತಿ ಸಭೆಯು ಜೋಕಟ್ಟೆ ಗ್ರಾ. ಪಂ. ಅಧ್ಯಕ್ಷೆ ಹಾಗೂ ಜಂಟಿ ಸಮಿತಿಯ ಅಧ್ಯಕ್ಷೆ ಪ್ರಸಿಲ್ಲಾ ಮೊಂತೇರೋ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಮಳವೂರು ಗ್ರಾ.ಪಂ. ಸಭಾಭವನದಲ್ಲಿ ಜರಗಿತು.

ಪ್ರದೇಶದಲ್ಲಿ ಈಗಾಗಲೇ ಮಳೆ ಬಂದರೂ ಕೂಡ ವೆಂಟೆಡ್‌ ಡ್ಯಾಂನ ನೀರಿನ ಬಳಕೆ ಕಡಿಮೆಯಾಗಿಲ್ಲ. ಕೆಲವೆಡೆ ವೆಂಟೆಡ್‌ ಡ್ಯಾಂನ ನೀರನ್ನು ಬಾವಿಗೆ ಬಿಡಲಾಗುತ್ತಿದ್ದು ಇದರಿಂದ ಅನಾವಶ್ಯಕವಾಗಿ ಪೋಲಾಗುತ್ತಿದೆ. ಇಂತಹ ನೀರು ದುರ್ಬಳಕೆಯ ವಿರುದ್ಧ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಂಟಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

ವಿದ್ಯುತ್‌ ಬಿಲ್‌ ಬಾಕಿ ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ 14 ಗ್ರಾಮಗಳನ್ನೊಳಗೊಂಡ 9 ಗ್ರಾಮ ಪಂಚಾಯತ್‌ಗಳು ಮೂರುವರೆ ವರ್ಷಗಳಲ್ಲಿ ಒಟ್ಟು 19ಲಕ್ಷರೂ. ವಿದ್ಯುತ್‌ ಬಿಲ್‌ನ್ನು ಮಾತ್ರ ಕಟ್ಟಿವೆ. ಆದರೆ ಸದ್ಯ 65 ಲಕ್ಷ ರೂ. ಬಾಕಿ ಇದೆ. ಅದಷ್ಟು ಬೇಗ ಗ್ರಾಮ ಪಂಚಾಯತ್‌ಗಳು ಬಿಲ್‌ನ್ನು ಕಟ್ಟಬೇಕು ಎಂದು ಕಾವೂರು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೋಹರ್‌ ಶೆಟ್ಟಿ ಸಭೆಯಲ್ಲಿ ತಿಳಿಸಿದರು.

ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಬಳಕೆಯಾದ ವಿದ್ಯುತ್‌ನ ಒಟ್ಟು ಯೂನಿಟ್‌ ಹಾಗೂ ಮೊತ್ತದ ಬಿಲ್‌ನ್ನು ಎಲ್ಲ ಗ್ರಾಮ ಪಂಚಾಯತ್‌ಗೆ ಕೊಡಬೇಕು ಎಂದು ಸಭೆಯಲ್ಲಿ ಅಗ್ರಹಿಸಲಾಯಿತು. ಒಂದು ಕೊಳವೆಬಾವಿಯ ಪಂಪ್‌ಗೆ ವಿದ್ಯುತ್‌ ಬಿಲ್‌ ಒಂದು ತಿಂಗಳಿಗೆ 2.25ಲಕ್ಷ ರೂ. ಬಂದಿದೆ. ಈ ಸಮಸ್ಯೆಯ ಪರಿಹಾರಕ್ಕೆ ಬಗ್ಗೆ ಮೆಸ್ಕಾಂ ಸಭೆಯಲ್ಲಿ ಮನವಿ ಮಾಡಲಾಯಿತು.

ನೀರಿನ ಬೇಡಿಕೆಯಿದೆ
ಬಳಕೆಯಾಗದ ಕೊಳವೆ ಬಾವಿಯ ಬಗ್ಗೆ ಮೆಸ್ಕಾಂಗೆ ತಿಳಿಸಬೇಕು. ಇಲ್ಲದಿದ್ದಲ್ಲಿ ಮೆಸ್ಕಾಂನ ಕನಿಷ್ಟ ಬಿಲ್‌ ಬರುತ್ತದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವ್ಯಾಪ್ತಿಯ 4 ಎಸ್‌ಇಝಡ್‌ ಕಾಲನಿಗೂ ನೀರು ನೀಡಬೇಕಾಗಿದೆ. ವಿಮಾನ ನಿಲ್ದಾಣ ದಿನಕ್ಕೆ 2ಲಕ್ಷ ಲೀ. ನೀರಿನ ಬೇಡಿಕೆ ಇದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯವಾಹಕ ಎಂಜಿನಿಯರ್‌ ಪ್ರಭಾಕರ ಸಭೆಯಲ್ಲಿ ತಿಳಿಸಿದರು.

ಸಭೆಗೆ ಕೆಲವು ಪಂಚಾಯತ್‌ಗಳ ಅಧ್ಯಕ್ಷರು, ಪಿಡಿಒಗಳು ಸಭೆಗೆ ಬಾರದ ಕಾರಣ ಅವರಿಗೆ ಮಾಹಿತಿ ನೀಡಲು ವಾಟ್ಸಾಪ್‌ ಗ್ರೂಫ್ ತೆರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು. ಪೆರ್ಮುದೆ ಗ್ರಾ.ಪಂ. ಅಧ್ಯಕ್ಷೆ ಸರೋಜಾ, ಮಳವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್‌ ಅರ್ಬಿ, ತಾ.ಪಂ. ಸದಸ್ಯ ಬಶೀರ್‌ ಆಹಮದ್‌, ಬಜಪೆ ಗ್ರಾ.ಪಂ. ಅಧ್ಯಕ್ಷೆ ರೋಜಿ ಮಥಾಯಸ್‌, ಪಿಡಿಒ ಸಾಯೀಶ್‌ ಚೌಟ, ಪೆರ್ಮುದೆ ಗ್ರಾ.ಪಂ. ಪಿಡಿಒ ಶೈಲಜಾ, ಎಕ್ಕಾರು ಗ್ರಾ. ಪಂ. ಅಧ್ಯಕ್ಷ ಸುರೇಶ್‌ ಶೆಟ್ಟಿ, ಪಿಡಿಒ ದೀಪಿಕಾ, ಜೋಕಟ್ಟೆ ಪಿಡಿಒ ಅಸಫ್‌ ಮಹಮದ್‌, ಬಾಳ ಗ್ರಾ.ಪಂ.ಅಧ್ಯಕ್ಷ ಆದಂ, ನೀರಿನ ವ್ಯವಸ್ಥಾಪಕರು ಉಪಸ್ಥಿತರಿದ್ದರು. ಪಿಡಿಒ ವೆಂಕಟರಮಣ ಪ್ರಕಾಶ್‌ ಸಭೆ ನಿರ್ವಹಿಸಿದರು..

ವಿದ್ಯುತ್‌ ಬಿಲ್‌ ಕಟ್ಟಲು ಖಾತೆ ತೆರೆಯಲು ನಿರ್ಧಾರ
ಕೆಲವು ಪಂಚಾಯತ್‌ಗಳು ವಿದ್ಯುತ್‌ ಬಿಲ್‌ ಕಟ್ಟಿದ್ದಾರೆ. ಈ ಬಗ್ಗೆ ಮೆಸ್ಕಾಂಗೆ ತಿಳಿದಿಲ್ಲ. ಪಂಚಾಯತ್‌ಗಳು ವಿದ್ಯುತ್‌ ಬಿಲ್‌ ಕಟ್ಟಲು ಸಿದ್ಧವಿದ್ದು ಪ್ರಥಮವಾಗಿ ಮೆಸ್ಕಾಂ ಇಲಾಖೆಯು ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಂಟಿ ಸಮಿತಿಯ ಹೆಸರಲ್ಲಿ ಖಾತೆ ತೆರೆಯಬೇಕು. ಪಂಚಾಯತ್‌ನ 14ನೇ ಹಣಕಾಸು ಯೋಜನೆಯ ಖಾತೆಯೊಂದಿಗೆ ಇಂಗಿತ (ಫ್ರೀಜ್‌)ಮಾಡಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಬಗ್ಗೆ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೋಹರ್‌ ಶೆಟ್ಟಿ ಸಮ್ಮತಿಸಿದ್ದು ಅದಷ್ಟು ಬೇಗ ಖಾತೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.