‘ಕರಾವಳಿಗೆ ಪ್ರತ್ಯೇಕ ಮರಳು ನೀತಿ ಅನಿವಾರ್ಯ’


Team Udayavani, Mar 6, 2019, 9:29 AM IST

6-march-13.jpg

ಬೆಳ್ತಂಗಡಿ : ಕರಾವಳಿ ಜಿಲ್ಲೆಗಳಲ್ಲಿ ಮರಳು ಅಭಾವದಿಂದ ಕಾಮಗಾರಿಗಳ ಅಭಿವೃದ್ಧಿಗೆ ಹೊಡೆತ ಬೀಳುತ್ತಿದೆ. ಆದ್ದರಿಂದ ಸರಕಾರ ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸುವುದು ಅಗತ್ಯ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಕಚೇರಿ ಸಭಾಭವನದಲ್ಲಿ ಜರಗಿದ ಟ್ರಸ್ಟ್‌ನ ಸಮಾವೇಶದಲ್ಲಿ ಮಂಡಿಸಿದ್ದ 22 ನಿರ್ಣಯ (ಹಕ್ಕೊತ್ತಾಯ)ಗಳಿಗೆ ಸ್ಪಂದಿಸಿ ಅವರು ಮಾತನಾಡಿದರು. ಕೇಂದ್ರಕ್ಕೆ ಸಂಬಂಧಪಟ್ಟ ಹಲವು ವಿಷಯಗಳ ಬಗ್ಗೆ ಈಗಾಗಲೇ ಸ್ಪಂದಿಸಿದ್ದೇವೆ, ಹೋರಾಟವನ್ನೂ ಮಾಡಿದ್ದೇವೆ. ಪಕ್ಷದ ಪ್ರಣಾಳಿಕೆಯಲ್ಲಿ ಹಿರಿಯರೊಂದಿಗೆ ಮಾತುಕತೆ ಮಾಡಿ ಸೇರಿಸುತ್ತೇವೆ ಎಂದರು. ಯುವಜನರಿಗೆ, ಮಹಿಳೆಯರಿಗೆ, ಎಸ್‌ಸಿ, ಎಸ್‌ಟಿಗಳಿಗೆ ಉದ್ಯೋಗ ಒದಗಿಸಲು ಉದ್ಯಮಶೀಲತೆ ಬೆಳೆಸಿ ಉದ್ಯೋಗಾವಕಾಶ ಸೃಷ್ಟಿಸುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ಥಿತಿಗತಿ ಕುರಿತು ಟ್ರಸ್ಟ್‌ನ ಅಧ್ಯಯನ ವರದಿ ಪರಿಶೀಲಿಸಿ ವಿಶೇಷ ಗಮನ ಹರಿಸುವುದಾಗಿ ಅವರು ತಿಳಿಸಿದರು.

ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ ಟ್ರಸ್ಟ್‌ನ ಜನರ ಪ್ರಣಾಳಿಕೆ, ಮುಖಾಮುಖೀ ಕಾರ್ಯಾಚರಣೆಗಳ ವಿವರ ನೀಡಿದರು. ಕಾರ್ಯದರ್ಶಿ ಜಯಪ್ರಕಾಶ್‌ ಭಟ್‌ ಸಿ.ಎಚ್‌. ಸ್ವಾಗತಿಸಿ, ಸಹಕಾರ್ಯದರ್ಶಿ ನಾರಾಯಣ ಕಿಲಂಗೋಡಿ ವಂದಿಸಿದರು. ಉಪಾಧ್ಯಕ್ಷ ಕೆ. ರಮಾನಂದ ಸಾಲ್ಯಾನ್‌ ಮತ್ತು ಸಹಕಾರ್ಯದರ್ಶಿ ವನಿತಾ ಜೈನ್‌ ಉಪಸ್ಥಿತರಿದ್ದರು. ಟ್ರಸ್ಟಿಗಳು ಮತ್ತು ತುಳುವೆರೆ ಪರ್ಬದ ಸಂಚಾಲಕರು ಭಾಗವಹಿಸಿದ್ದರು.

ನಿರ್ಣಯಗಳಿಗೆ ಸಹಮತ
ತುಳು ಭಾಷೆಯನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು 3 ಬಾರಿ ನಿಯೋಗದೊಂದಿಗೆ ಪ್ರಯತ್ನ ಮಾಡಿದ್ದೇನೆ. ಇದನ್ನು ಗಂಭೀರವಾಗಿ ಮುಂದುವರಿಸುತ್ತೇನೆ. ಕಲಾಕಾರರಿಗೆ ಪಿಂಚಣಿ ಮತ್ತಿತರ ನಿರ್ಣಯಗಳಿಗೆ ನನ್ನ ಸಹಮತ ಇದೆ.
– ನಳಿನ್‌ ಕುಮಾರ್‌ ಕಟೀಲು
   ಸಂಸದರು

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.