ಸರ್ವರ್‌ ಸಮಸ್ಯೆ: ಸರಕಾರಿ ಕಚೇರಿಗಳಲ್ಲಿ ಸರತಿ ಸಾಲು

ಆಧಾರ್‌ ನೋಂದಣಿಗೆ ಸಮಸ್ಯೆ, ಸರಕಾರಿ ಕೆಲಸಗಳಲ್ಲೂ ವಿಳಂಬ

Team Udayavani, Jul 20, 2019, 5:00 AM IST

p-31

ಪುತ್ತೂರು: ಸಾರ್ವಜನಿಕ ಸರಕಾರಿ ಸೇವಾ ಕಚೇರಿಗಳಲ್ಲಿ ಸರ್ವರ್‌ ಡೌನ್‌ ಸಮಸ್ಯೆ ಕೆಲವು ದಿನಗಳಿಂದ ತೀವ್ರಗೊಂಡಿದ್ದು, ಅಗತ್ಯಗಳಿಗಾಗಿ ಕಚೇರಿ ಬರುವ ಸಾರ್ವಜನಿಕರು ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗದೆ ಹಿಂತಿರುಗುವ ಸ್ಥಿತಿ ನಿರ್ಮಾಣವಾಗಿದೆ.

ಪುತ್ತೂರು ಮಿನಿ ವಿಧಾನಸೌಧ, ಸರಕಾರಿ ಆಸ್ಪತ್ರೆ, ತಾ.ಪಂ., ತಾಲೂಕು ಕಚೇರಿ ಸಹಿತ ಎಲ್ಲ ಸರಕಾರಿ ಕಚೇರಿಗಳಲ್ಲಿ ಈ ಸಮಸ್ಯೆ ಬಿಗಡಾಯಿಸಿದೆ. ನಗರದ ಆಧಾರ್‌ ಕೇಂದ್ರದಲ್ಲಿ ಎರಡು ದಿನಗಳಿಂದ ಕೆಲವೇ ಮಂದಿಗೆ ಆಧಾರ್‌ ನೋಂದಣಿಯಾಗಿದೆ. ಖಾಸಗಿ ಸೇವಾ ಕೇಂದ್ರಗಳಲ್ಲೂ ನೋಂದಣಿ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ತಾಂತ್ರಿಕ ದೋಷ
ಪುತ್ತೂರಿನ ಹೆಚ್ಚಿನ ಸರಕಾರಿ ಕಚೇರಿಗೆ ಬಿಎಸ್ಸೆನ್ನೆಲ್ ಇಂಟರ್‌ನೆಟ್ ಇದೆ. ಅವರ ತಾಂತ್ರಿಕ ದೋಷದಿಂದಾಗಿ ಸಮಸ್ಯೆಯಾಗುತ್ತಿದೆ ಎಂದು ಸರಕಾರಿ ಕಚೇರಿಗಳ ಸಿಬಂದಿ ಆರೋಪಿಸಿದರೆ, ಇಲಾಖೆಗಳು ವೆಬ್‌ಸೈಟ್ ನಿರ್ವಹಣೆಗೆ ಹಾಗೂ ಇ-ತಂತ್ರಾಂಶದ ಸೇವೆಗೆ ಬಳಕೆಗೆ ಅನುಗುಣವಾಗಿ ಸರ್ವಿಸ್‌ ಪ್ರೊವೈಡರ್‌ಗೆ ಇಂತಿಷ್ಟು ಹಣ ನೀಡಬೇಕು. ನಿಗದಿಗಿಂತ ಹೆಚ್ಚುವರಿಯಾಗಿ ಇ-ತಂತ್ರಾಂಶಗಳನ್ನು ಬಳಸಿಕೊಂಡಾಗ ಸರ್ವರ್‌ ಡೌನ್‌ ಆಗುತ್ತದೆ. ಬಿಎಸ್ಸೆನ್ನೆಲ್ ಸಂಸ್ಥೆಗೂ ಇದಕ್ಕೂ ಸಂಬಂಧವಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಸೇವೆಗೆ ತೊಂದರೆ
ಸರ್ವರ್‌ ಡೌನ್‌ ಇರುವ ಕಾರಣದಿಂದ ಸರಕಾರಿ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುವ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಕಾರ್ಡ್‌ ಮೂಲಕ ಪರಿಶೀಲನೆ ಹಾಗೂ ಇಲಾಖಾ ದಾಖಲೆಗಳ ನಮೂದೀಕರಣ ಕೆಲಸಗಳು ಸರ್ವರ್‌ ವೇಗವಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ವ್ಯತ್ಯಯವಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ.

ನಗರಸಭಾ ಕಚೇರಿಯಲ್ಲಿ ಇ-ತಂತ್ರಾಂಶ ಸಮರ್ಪಕವಾಗಿ ಕೆಲಸ ಮಾಡದ ಕಾರಣ ನೀರಿನ ಬಿಲ್ ಪಾವತಿಗೂ ತೊಂದರೆಯಾಗಿದೆ. ಸರ್ವರ್‌ ಡೌನ್‌ ಕಾರಣಕ್ಕಾಗಿ ಪುತ್ತೂರು ಮಿನಿ ವಿಧಾನಸೌಧದೊಳಗೆ ಬಹುತೇಕ ಜನರು ಕಾದು ನಿರಾಸೆಯಿಂದ ಹಿಂದಿರುಗುತ್ತಿದ್ದ ದೃಶ್ಯಗಳು ಕಂಡುಬಂದಿದೆ.

ಶೀಘ್ರ ಸರಿಪಡಿಸಲಾಗುವುದು
ಸರಕಾರಿ ಕಚೇರಿಗಳಲ್ಲಿ ಆಂತರಿಕ ವಿಭಾಗಗಳಲ್ಲಿ ಕೆಲಸ ಮಾಡುವವರಿಗೆ ಈ ಸರ್ವರ್‌ ಸಮಸ್ಯೆ ಇಲ್ಲ. ಆದರೆ ಸಾರ್ವಜನಿಕ ಸೇವಾ ವಿಭಾಗದಲ್ಲಿ ಮಾತ್ರ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿದೆ. ಇಲಾಖೆಗಳ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಬಿಎಸ್ಸೆನ್ನೆಲ್ ನೆಟ್ವರ್ಕ್‌ ಪ್ರೊವೈಡ್‌ ಮಾಡಲಾಗುತ್ತಿದೆ. ಸರ್ವರ್‌ ಡೌನ್‌ನ ತಾಂತ್ರಿಕ ತೊಂದರೆಯ ಕುರಿತು ಸಂಬಂಧಪಟ್ಟವರಲ್ಲಿ ವಿಚಾರಿಸಿ ಶೀಘ್ರ ಸರಿಪಡಿಸಲಾಗುವುದು.
– ಅನಂತ ಶಂಕರ್‌ ತಹಶೀಲ್ದಾರ್‌, ಪುತ್ತೂರು

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.