ಆರೋಗ್ಯ, ವಿದ್ಯುತ್, ನಿವೇಶನ ಸಮಸ್ಯೆ ಪರಿಹರಿಸಿ
Team Udayavani, Jul 3, 2019, 5:00 AM IST
ಬೆಳ್ಳಾರೆ: ಕಾಲನಿ ನಿವಾಸಿಗಳಿಗೆ ಹಕ್ಕುಪತ್ರ, ಕಿರಿಯ ಆರೋಗ್ಯ ಸಹಾಯಕಿಯ ಕೊರತೆ, ಜಿಯೋ ಗುಂಡಿಯಿಂದ ಹದಗೆಟ್ಟ ರಸ್ತೆ, ಸಾರ್ವಜನಿಕ ರಸ್ತೆಗೆ ಬೇಲಿ, ಕಸದ ಸಮಸ್ಯೆ ಸೋಮವಾರ ನಡೆದ ಕಲ್ಮಡ್ಕ ಗ್ರಾಮಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.
ಕಲ್ಮಡ್ಕ ಗ್ರಾಮ ಪಂಚಾಯತ್ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಪಡ್ಪಿನಂಗಡಿಯ ಶಿವ ಗೌರಿ ಕಲಾಮಂದಿರದಲ್ಲಿ ಗ್ರಾ.ಪಂ. ಅಧ್ಯಕ್ಷ ಧರ್ಮಣ್ಣ ನಾಯ್ಕ ಜಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಕ್ಕುಪತ್ರಕ್ಕೆ ಆಗ್ರಹ
ಧರ್ಮಡ್ಕ ಕಾಲನಿಯ ಕೆಲವು ಮನೆಗಳಲ್ಲಿ ಫಲಾನುಭವಿಗಳಲ್ಲದವರು ಬಂದು ವಾಸ ಮಾಡುತ್ತಿದ್ದಾರೆ. ಕೆಲವು ಮನೆಗಳು ಮಾರಾಟವಾಗಿವೆ. ನಿವೇಶನದ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಹಕ್ಕುಪತ್ರ ನೀಡಿ ಎಂದು ಜಯರಾಜ ನಡ್ಕ ಆಗ್ರಹಿಸಿದರು. ಇದಕ್ಕೆ ತಾ.ಪಂ. ಸದಸ್ಯ ಗಫೂರ್ ಸಾಹೇಬ್ ಉತ್ತರಿಸಿ, ಧರ್ಮಡ್ಕ ಕಾಲನಿಯಲ್ಲಿ 13 ಮನೆಗಳಿವೆ. ಇವುಗಳ ಪೈಕಿ 8 ಮನೆಗಳಲ್ಲಿ ಫಲಾನುಭವಿಗಳಲ್ಲದವರು ಇದ್ದಾರೆ. ತಾ.ಪಂ. ಸಭೆಯಲ್ಲೂ ಇದನ್ನು ಗಮನಕ್ಕೆ ತಂದಿದ್ದೇನೆ. ಇಲ್ಲಿ ವಾಸ ಇರುವವರಿಗೆ ಮಾತ್ರ ಹಕ್ಕುಪತ್ರ ನೀಡಬೇಕು ಎಂದು ತಹಶೀಲ್ದಾರರಿಗೂ ಹೇಳಿದ್ದೇನೆ. ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಮಂಚಿಕಟ್ಟೆಯಲ್ಲೂ ಹಕ್ಕುಪತ್ರ ನೀಡಿಲ್ಲ. ಹಕ್ಕುಪತ್ರವಿಲ್ಲದೆ ಉದ್ಯೋಗ ಖಾತರಿಗೂ ಅರ್ಜಿ ಸಲ್ಲಿಸಲಾಗುತ್ತಿಲ್ಲ ಎಂದು ಮಹಿಳೆಯೊಬ್ಬರು ಹೇಳಿದರು. ನಿವೇಶನಕ್ಕೆ ಅರ್ಜಿ ಕೊಟ್ಟು ಎಷ್ಟು ವರ್ಷವಾದರೂ ಸಿಗುತ್ತಿಲ್ಲ. ಮುಂದಿನ ಗ್ರಾಮಸಭೆಗೆ ಮೊದಲು ನಿವೇಶನ ನೀಡಿ ಎಂದು ಗ್ರಾಮಸ್ಥ ಹಮೀದ್ ಆಗ್ರಹಿಸಿದರು.
ಜಿಯೋ ಗುಂಡಿಯಿಂದ ಹಾಳಾದ ರಸ್ತೆ
ಕಲ್ಮಡ್ಕದಿಂದ ಕಾಪಡ್ಕದ ವರೆಗೆ ಜಿಯೋ ಸಂಸ್ಥೆ ಗುಂಡಿ ತೆಗೆದು ರಸ್ತೆ ಹಾಗೂ ಮೋರಿಯನ್ನು ಹಾಳುಗೆಡವಿದೆ. ರಸ್ತೆ ಬದಿಯ ಗುಂಡಿಯನ್ನೂ ಮುಚ್ಚದೆ ಸಂಚಾರವೇ ದುಸ್ತರವಾಗಿದೆ. ರಸ್ತೆಗೆ ಹಾಕಿರುವ ನಾಲ್ಕು ಮೋರಿಗಳನ್ನು ಹಾಳು ಮಾಡಿದ್ದಾರೆ ಎಂದು ಜಯರಾಜ್ ನಡ್ಕ ಹೇಳಿದರು. ಇದಕ್ಕೆ ತಾ.ಪಂ. ಸದಸ್ಯ ಗಫೂರ್ ಧ್ವನಿಗೂಡಿಸಿ, ಅವೈಜ್ಞಾನಿಕವಾಗಿ ಗುಂಡಿ ತೆಗೆಯಲು ಅವಕಾಶ ನೀಡಬಾರದೆಂದು ಹೇಳಿದ್ದೆ. ಜಿ.ಪಂ. ಎಂಜಿನಿಯರಿಂಗ್ ಇಲಾಖೆ ಸ್ಪಂದಿಸದ ಕಾರಣ 700 ಮೀಟರ್ ರಸ್ತೆಯೇ ಹಾಳಾಗಿ ಹೋಗಿದೆ. ಕಾನೂನು ಪ್ರಕಾರ ಯಾವುದನ್ನೂ ಮಾಡಿಲ್ಲ. ಕಂಪೆನಿಯ ವಿರುದ್ಧ ಕ್ರಮ ಕೈಗೊಳ್ಳಲು ದಾಕ್ಷಿಣ್ಯ ಏಕೆ? ಎಂದು ಜಿ.ಪಂ. ಎಂಜಿನಿಯರ್ ಸುಳ್ಯ ಉಪವಿಭಾಗದ ಎಚ್.ಎಸ್. ಹುಕ್ಕೇರಿ ಅವರನ್ನು ಪ್ರಶ್ನಿಸಿದರು.
ಜಿಯೋ ಸಂಸ್ಥೆಗೆ ಬೇಸಗೆಯಲ್ಲಿ ಗುಂಡಿ ತೆಗೆಯಲು ಅನುಮತಿ ನೀಡಿದ್ದೇವೆ. ಮಳೆಗಾಲದಲ್ಲೂ ಅವರು ಕಾಮಗಾರಿ ನಡೆಸುತ್ತಿದ್ದು, ನೋಟಿಸ್ ಮಾಡಿದ್ದೇನೆ. ಕಾರ್ಯ ನಿರ್ವಾಹಕ ಅಭಿಯಂತರರಲ್ಲೂ ಮಾತನಾಡಿದ್ದೇನೆ ಎಂದು ಹುಕ್ಕೇರಿ ಉತ್ತರಿಸಿದರು.
ಬೇಲಿ ತೆರವುಗೊಳಿಸಿಕೊಳ್ಸಿಗೆ ಎನ್ನುವಲ್ಲಿ 5-6 ಮನೆಗಳನ್ನು ಸಂಪರ್ಕಿಸುವ ರಸ್ತೆಯನ್ನು
ಖಾಸಗಿ ವ್ಯಕ್ತಿಯೊಬ್ಬರು ಬೇಲಿ ಹಾಕಿ ಮುಚ್ಚಿದ್ದಾರೆ. ಇದರಿಂದ ಸುತ್ತುಬಳಸು ದಾರಿಯೇ ಗತಿಯಾಗಿದೆ. ಕೂಡಲೇ ಬೇಲಿ ತೆರವುಗೊಳಿಸಬೇಕೆಂದು ಗ್ರಾಮಸ್ಥ ಸೋಮಪ್ಪ ಗೌಡ ಆಗ್ರಹಿಸಿದರು. ಈ ಮಧ್ಯೆ ಪೊಲೀಸ್ ದೂರಿನ ಪ್ರತಿ ಹಿಡಿದು ವೇದಿಕೆ ಏರಿ ಮನವಿ ಸಲ್ಲಿಸಿದ ಸೋಮಪ್ಪ ಗೌಡ ಹಾಗೂ ಸದಸ್ಯ ಲೋಕೇಶ್ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಬಳಿಕ ನೋಡಲ್ ಅಧಿಕಾರಿ ನ್ಯಾಯ ಸಮಿತಿಯಲ್ಲಿ ಒಂದು ವಾರದೊಳಗೆ ಸಮಸ್ಯೆ ಪರಿಹರಿಸಲು ಸೂಚನೆ ನೀಡಿ ಚರ್ಚೆ ಮುಗಿಸಿದರು.
ಪರಿಹಾರದ ಮೊತ್ತದ ಅನುಪಾತ ಹೇಗೆ?
ತೋಟಗಾರಿಕಾ ಇಲಾಖೆಯವರು ಮಾಹಿತಿ ನೀಡಿದಾಗ, ಗ್ರಾ.ಪಂ. ಸದಸ್ಯ ಲೋಕೇಶ್ ಅಕ್ರಿಕಟ್ಟೆ ಒಂದು ಎಕ್ರೆಗೆ 7,199.50 ರೂ. ಪರಿಹಾರ, 2 ಎಕ್ರೆಗೆ 2,500 ರೂ. ಪರಿಹಾರ ನೀಡಲಾಗಿದೆ. ಬೆಳೆ ನಷ್ಟ ಪರಿಹಾರದ ಅನುಪಾತ ಹೇಗೆ? ಎಂದು ಪ್ರಶ್ನಿಸಿದರು. 4 ಎಕ್ರೆಗೆ 5,000 ರೂ. ಪರಿಹಾರ ಕೊಟ್ಟಿದ್ದಾರೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.
ನೀರಿಂಗಿಸಲು ಅವಕಾಶ ಕೊಡಿ
ನೀರಿಂಗಿಸುವಿಕೆಯನ್ನು ಆದಷ್ಟು ಬೇಗ ಮಾಡಬೇಕು. ಸರಕಾರಿ ಜಾಗದಲ್ಲಿ ನೀರಿಂಗಿಸುವಿಕೆ ಮಾಡಿದರೆ ಅನುದಾನವಿಲ್ಲ ಎಂದು ಹೇಳುತ್ತಿದ್ದಾರೆ. ಎಲ್ಲಿ ಬೇಕಾದರೂ ನೀರಿಂಗಿಸಲು ಅವಕಾಶ ಕೊಡಿ. ಪ್ರತಿ ಗ್ರಾಮದಲ್ಲೂ ನೀರಿಂಗಿಸುವ ಮಾಹಿತಿ ಕೊಡಲು ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥ ಜಯರಾಜ ನಡ್ಕ ಕೃಷಿ ಇಲಾಖೆ ಅಧಿಕಾರಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಪಂಚಾಯತ್ ನಿರ್ಣಯ ಮಾಡಲು ನಿರ್ಧರಿಸಲಾಯಿತು.
ಕರಿಕ್ಕಳದಲ್ಲಿ ಮೆಸ್ಕಾಂ ಚರಂಡಿಯಲ್ಲೇ ಕಂಬ ಹಾಕಿದೆ. ಇದು ಅಪಾಯಕಾರಿಯಾಗಿದ್ದು, ಕೆಲವೆಡೆ ಬೀಳುವ ಸ್ಥಿತಿಯಲ್ಲಿವೆ ಎಂದು ಹಮೀದ್ ಹೇಳಿದರು. ಕಂಬ ತೆಗೆದ ಗುಂಡಿಗಳನ್ನೂ ಮುಚ್ಚದೆ ಹಲವು ಕಡೆ ಹೊಂಡಗಳು ನಿರ್ಮಾಣವಾಗಿವೆ ಎಂದು ಗ್ರಾಮಸ್ಥರು ದೂರಿದರು.
ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ನೋಡಲ್ ಅಧಿಕಾರಿ, ಸುಳ್ಯ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ಲಕ್ಷಿ ್ಮೕಶ ರೈ, ತಾ.ಪಂ. ಸದಸ್ಯ ಗಫೂರ್ ಸಾಹೇಬ್, ಗ್ರಾ.ಪಂ. ಉಪಾಧ್ಯಕ್ಷೆ ವಾರಿಜಾ ಪಿ.ಎಸ್., ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಪ್ರವೀಣ್ ಕುಮಾರ್ ಸ್ವಾಗತಿಸಿದರು.
ಕಲ್ಲೇರಿ ಸೇತುವೆಯ ಮೇಲಿಂದ ಹೊಳೆಗೆ ನಿರಂತರವಾಗಿ ಕಸ ಎಸೆಯುತ್ತಿದ್ದಾರೆ. ಅಲ್ಲಿ ಸಿಸಿ ಕೆಮರಾ ಅಳವಡಿಸಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು. ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಿ ಜೀವ ಹಾನಿಯಿಂದ ರಕ್ಷಿಸಬೇಕೆಂದು ಗ್ರಾಮಸ್ಥ ಜಿ.ಎ. ಮಹಮ್ಮದ್ ಮನವಿ ಮಾಡಿದರು. ಮೋಟಾರು ವಾಹನ ಕಾಯ್ದೆ ಹಾಗೂ ಅಪಘಾತ ರಹಿತ ವಾಹನ ಚಾಲನೆಗೆ ಸಹಕರಿಸುವಂತೆ ಬೆಳ್ಳಾರೆ ಠಾಣೆಯ ಪ್ರೊಬೆಷನರಿ ಪಿಎಸ್ಐ ಆಂಜನೇಯ ರೆಡ್ಡಿ ಮನವಿ ಮಾಡಿದರು. ಮನೆ ಕಟ್ಟುವ ಉದ್ದೇಶಕ್ಕೆ ಮರಳು ಸಾಗಾಣಿಕೆಗೆ ಅವಕಾಶ ನೀಡಬೇಕೆಂದು ಎಂ.ಕೆ. ಹನೀಫ್ ಮನವಿ ಮಾಡಿದರು.
ಕಲ್ಮಡ್ಕ ಹಾಗೂ ಪಂಬೆತ್ತಾಡಿಗೆ ಒಬ್ಬರೇ ಆರೋಗ್ಯ ಸಹಾಯಕಿ ಇದ್ದಾರೆ. ಇನ್ನೊಬ್ಬರು ಕಿರಿಯ ಆರೋಗ್ಯ ಸಹಾಯಕಿಯ ನೇಮಕಕ್ಕೆ ನಿರ್ಣಯ ಮಾಡಬೇಕು. ತಿಂಗಳಿಗೆ ಎರಡು ದಿನವಾದರೂ ಸಂಚಾರಿ ಆಸ್ಪತ್ರೆ ಬರಬೇಕು ಎಂದು ಹಮೀದ್ ಆಗ್ರಹಿಸಿದರು. ಗ್ರಾಮಸಭೆಯಲ್ಲಿ ಡೆಂಗ್ಯೂ ಜ್ವರದ ಮುನೆ್ನಚ್ಚರಿಕೆಯ ಬಗ್ಗೆ ಮಾಹಿತಿ ನೀಡಬೇಕೆಂದು ಎಂ.ಕೆ. ಹನೀಫ್ ಹೇಳಿದರು. ಬಳಿಕ ಪಂಜ ಆರೋಗ್ಯಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.
ಹೊಳೆಗೆ ಕಸ ಎಸೆಯುತ್ತಾರೆ
ಆರೋಗ್ಯ ಸಹಾಯಕಿ ನೇಮಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ