ಅನಾರು ಸಂಪರ್ಕಕ್ಕೂ ಸ್ಟೀಲ್ ಬ್ರಿಡ್ಜ್ ಯೋಜನೆ
15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ; 75 ಕುಟುಂಬಕ್ಕೆ ಅನುಕೂಲ
Team Udayavani, Sep 12, 2019, 5:00 AM IST
ಪ್ರವಾಹಕ್ಕೆ ಸಿಲುಕಿ ಕುಸಿದ ಅನಾರು ಸೇತುವೆ. ಇಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಗೊಳ್ಳಲಿದೆ.
ಬೆಳ್ತಂಗಡಿ: ನೆರೆಗೆ ಸಿಲುಕಿ ಆ. 9ರಂದು ಬಾಂಜಾರುಮಲೆ ಮತ್ತು ಅನಾರು ಸೇತುವೆ ಕೊಚ್ಚಿಹೋದ ಪರಿಣಾಮ ತಿಂಗಳೊಳಗೆ ತಾತ್ಕಾಲಿಕ ನೆಲೆಯಲ್ಲಿ ಸುರಕ್ಷಿತ ಹಾಗೂ ಬಲಿಷ್ಠ ಸಂಪರ್ಕ ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಶಕ್ತವಾಗಿದೆ.
ಬಾಂಜಾರುಮಲೆಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾದ ಬೆನ್ನಲ್ಲೇ ಅನಾರು ಸೇತುವೆಗೂ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಇಲಾಖೆ ಸ್ಟೀಲ್ ಬ್ರಿಡ್ಜ್ ಅಳವಡಿಸಲು ಪೂರ್ವ ತಯಾರಿ ನಡೆಸಿದೆ.
50 ಮೀ. ಉದ್ದ, 4 ಅಡಿ ಅಗಲ
ಸುಮಾರು 50 ಮೀ. ಉದ್ದ, 4 ಅಡಿ ಅಗಲದ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗಲಿದ್ದು, ಪಾದಚಾರಿಗಳಿಗೆ, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ. ಮಾಸ್ಟರ್ ಪ್ಲಾನರಿಯಿಂದ ಯೋಜನೆ ಸಿದ್ಧಗೊಂಡಿದೆ. 3 ಪಿಲ್ಲರ್ ಅಳವಡಿಸಲಿದ್ದು, ಮಧ್ಯ ಭಾಗದಲ್ಲಿ ಬಂಡೆ ಕೊರೆದು ಪಿಲ್ಲರ್ ಅಳವಡಿಸಲಾಗುತ್ತದೆ. ಕಾರ್ಯಪಾಲಕ ಅಭಿಯಂತ ಯಶವಂತ್, ಶಾಸಕರು, ಸ. ಕಾರ್ಯ ಪಾಲಕ ಅಭಿಯಂತ ಶಿವಪ್ರಸಾದ್ ಅಜಿಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನೀರಿನ ಹರಿವು ಕಡಿಮೆಯಾದ ತತ್ಕ್ಷಣ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಕಾಮಗಾರಿ ನಡೆಯಲಿದೆ.
ಸೇತುವೆ ಹಾನಿಯಿಂದ ಈ ಭಾಗದ ಸುಮಾರು 75 ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ 25 ಕಿ.ಮೀ. ಸುತ್ತುಬಳಸಿ ಬರಬೇಕಾದ ಕತ್ತರಿಗುಡ್ಡೆ, ಅನಾರು, ನಳ್ಳಿಲಿ, ಸಾತಿಲು ನಿವಾಸಿಗಳಿಗೆ ಅನುಕೂಲವಾಗಲಿದೆ. ಮಕ್ಕಳು ಶಾಲೆಗೆ ತೆರಳಲು ಅನುಭವಿಸುತ್ತಿರುವ ಸಮಸ್ಯೆ ಮನಗಂಡು ಶಾಸಕ ಹರೀಶ್ ಪೂಂಜ ಎರಡು ಹೊತ್ತು ಬಾಡಿಗೆ ನೆಲೆಯಲ್ಲಿ ಜೀಪ್ ವ್ಯವಸ್ಥೆಗೊಳಿಸಿದ್ದು, ಇದರಿಂದ ಮಕ್ಕಳು ಶಾಲೆಗೆ ತೆರಳಲು ಅನುಕೂಲವಾಗಿದೆ.
ಶೀಘ್ರ ಕಾಮಗಾರಿ
ಅನಾರು ಸೇತುವೆ ಹಾನಿಗೊಳಗಾದ ಸ್ಥಳದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ 3 ಪಿಲ್ಲರ್ ಸಹಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗಲಿದೆ. ನೀರು ಕಡಿಮೆಯಾದ ತತ್ಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು.
– ಶಿವಪ್ರಸಾದ್ ಅಜಿಲ
ಸಹಾಯಕ ಕಾರ್ಯಪಾಲಕ ಅಭಿಯಂತ, ಪಿಡಬ್ಲ್ಯುಡಿ, ಬೆಳ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ