ಕುಕ್ಕೆ: ಮಠದ ಅಂಗಡಿ ಮುಂಗಟ್ಟು ಹೊರತು ಪಡಿಸಿ ನಗರ ಬಂದ್
Team Udayavani, Mar 7, 2019, 5:13 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠಕ್ಕೆ ಸೇರಿದ ಅಂಗಡಿ ಮುಂಗಟ್ಟುಗಳನ್ನು ಹೊರತು ಪಡಿಸಿ ಉಳಿದೆಲ್ಲವು ಗುರುವಾರ ಸ್ವಯಂ ಪ್ರೇರಿತ ಬಂದ್ ಆಗಿದೆ.
ನಾಗಾರಾಧನೆಗೆ ಪ್ರಸಿದ್ದಿ ಪಡೆದ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ದೇವಸ್ಥಾನವನ್ನು ಸಂಪುಟ ಶ್ರೀ ಮಠಕ್ಕೆ ಹಸ್ತಾಂತರಿಸುವಂತೆ ಮಠದ ಪರ ನೀಡಿರುವ ನೊಟೀಸ್ ವಿರೋಧಿಸಿ ಮತ್ತು ದೇವಸ್ಥಾನವನ್ನು ಮಠಕ್ಕೆ ಹಸ್ತಾಂತರ ಮಾಡದಂತೆ ಸರಕಾರವನ್ನು ಒತ್ತಾಯಿಸಿ ಗುರುವಾರ ಕುಕ್ಕೆ ಶ್ರೀ ಭಕ್ತರ ಹಿತ ರಕ್ಷಣಾ ವೇದಿಕೆ ಕರೆ ನೀಡಿರುವ ಗುರುವಾರದ ಕುಕ್ಕೆ ನಗರ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಗುರುವಾರದ ಬಂದ್ ಕಾನೂನು ಬಾಹಿರವಾಗಿದ್ದು, ಬಂದ್ ಗೆ ತಡೆ ನೀಡುವಂತೆ ಮಠದ ಪರ ವಕೀಲರು ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ವಿಚಾರಣೆ ವೇಳೆ ನ್ಯಾಯಾಲಯವು ಬಂದ್ ವಿಚಾರದಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಲು ನಿರಾಕರಿಸಿತು. ಮತ್ತು ಬಂದ್ ವೇಳೆ ಬಲತ್ಕಾರದ ಬಂದ್ ಗೆ ಅವಕಾಶ ನೀಡದೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಗೃಹ ಇಲಾಖೆ ಪೊಲೀಸ್ ಇಲಾಖೆಗೆ ಸೂಚಿಸಿತ್ತು.
ಅದರಂತೆ ಬಂದ್ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೊಂದರೆಯಾಗದಂತೆ ಕಾನೂನಿನ ತೊಡಕಿಗೆ ಅಡ್ಡಿಯಾಗದ ರೀತಿಯಲ್ಲಿ ಬಂದ್ ಆಚರಿಸುವಂತೆ ಪೊಲೀಸ್ ಇಲಾಖೆ ಸಂಘಟಕರಿಗೆ ಕಟ್ಟುನಿಟ್ಟಾಗಿ ತಿಳಿಸಿತ್ತು. ಅದರಂತೆ ನಗರದಲ್ಲಿ ಭಾರಿ ಬಿಗು ಬಂದೋಬಸ್ತ್ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ. ಸಂಜೆ ರಥ ಬೀದಿಯಲ್ಲಿ ಶಾಂತಿಯುತ ಜನಾಂದೋಲನ ಸಭೆ ನಡೆಯಲಿದೆ. ಭಕ್ತರಿಗೆ ತೊಂದರೆ ಆಗದಂತೆ ದೇವಸ್ಥಾನದ ವತಿಯಿಂದ ಭಕ್ತರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ