ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ

ಇಲಾಖೆಯಿಂದ ಪ್ರಸ್ತಾವನೆ

Team Udayavani, Nov 27, 2019, 4:29 AM IST

as-15

ಸಾಂದರ್ಭಿಕ ಚಿತ್ರ

ಬಂಟ್ವಾಳ: ಹೈನುಗಾರಿಕೆ ಬೆಂಬಲಿಸುವ ನಿಟ್ಟಿನಲ್ಲಿ ಸರಕಾರ ಪಶು ಸಂಗೋಪನ ಇಲಾಖೆಯಿಂದ ವಿವಿಧ ಸೌಲಭ್ಯ ನೀಡುತ್ತಿದ್ದು, ಆದರೆ ಇಲಾಖೆ ಈ ತನಕ ಹೈನುಗಾರರಿಗೆ ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ ನೀಡಿಲ್ಲ. ಆದರೆ ಇದೀಗ ಬಂಟ್ವಾಳ ಪಶುಸಂಗೋಪನೆ ಇಲಾಖೆಯಿಂದ ಸಬ್ಸಿಡಿ ನೀಡುವ ಕುರಿತು ಪ್ರಸ್ತಾವನೆ ಹೋಗಿದ್ದು, ಸರಕಾರದಿಂದ ಸಕಾರಾತ್ಮಕ ಸ್ಪಂದನೆಯೂ ದೊರಕಿದೆ.

ಹೈನುಗಾರರಿಂದ ಹಾಲು ಖರೀದಿ ಕಾರ್ಯವನ್ನು ಕೆಎಂಎಫ್‌ ನಿರ್ವಹಿಸುತ್ತಿದ್ದು, ಹೀಗಾಗಿ ಕೆಎಂಎಫ್‌ನಿಂದಲೇ ಯಂತ್ರಕ್ಕೆ ಸಬ್ಸಿಡಿ ನೀಡಲಾಗುತ್ತಿದೆ. ಹಾಲು ಕರೆಯಲು ಸಾಧ್ಯವಾಗುತ್ತಿಲ್ಲ ಎಂದು ಸಣ್ಣ ಹೈನುಗಾರರಿಂದ ಯಂತ್ರಕ್ಕೆ ಬೇಡಿಕೆ ಬರುತ್ತಿರುವುದರಿಂದ ಪಶುಸಂಗೋಪನೆ ಇಲಾಖೆಯಿಂದ ಸಹಾಯಕ ನಿರ್ದೇಶಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಅದಕ್ಕೆ ಪೂರಕ ಸ್ಪಂದನೆ ನೀಡಿರುವ ಸರಕಾರದ ಪ್ರಿನ್ಸಿಪಲ್‌ ಸೆಕ್ರೆಟರಿ ಅವರು, ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಲಭ್ಯವಿದ್ದರೆ ಆ ಕುರಿತು ಯೋಚಿಸಲಾಗುತ್ತದೆ. ಇಲ್ಲದೇ ಇದ್ದರೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗುತ್ತದೆ ಎಂದು ಬಂಟ್ವಾಳ ಸಹಾಯಕ ನಿರ್ದೇಶಕರಿಗೆ ಭರವಸೆ ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲಿ ಒಟ್ಟು 7,810 ಹೈನುಗಾರರಿದ್ದು, ಅದರಲ್ಲಿ ಸುಮಾರು 550 ಮಂದಿ ಹಾಲು ಕರೆಯುವ ಯಂತ್ರವನ್ನು ಉಪಯೋಗಿಸುತ್ತಿದ್ದಾರೆ. ಅಂದರೆ ದಿನವೊಂದಕ್ಕೆ ಕನಿಷ್ಠ 25 ಲೀ. ಹಾಲು ಪೂರೈಕೆ ಮಾಡುವ ಹೈನುಗಾರರಿಗೆ ಕೆಎಂಎಫ್‌ನಿಂದ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ ನೀಡಲಾಗುತ್ತಿದೆ ಎಂದು ಕೆಎಂಎಫ್‌ ವಿಸ್ತರಣಾಧಿಕಾರಿ ಜಗದೀಶ್‌ ತಿಳಿಸಿದ್ದಾರೆ.

ಆರ್ಥಿಕ ವರ್ಷದ ಅರ್ಧದಲ್ಲಿ ಪ್ರಸ್ತಾವನೆ
ಬಂಟ್ವಾಳ ಪಶುಸಂಗೋಪನ ಇಲಾಖೆ ಆರ್ಥಿಕ ವರ್ಷದ ಅರ್ಧ ಭಾಗದಲ್ಲಿ ಹಾಲು ಕರೆಯುವ ಯಂತ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವು ದರಿಂದ ಈ ಬಾರಿಯ ಬಜೆಟ್‌ನಲ್ಲಿ ಅದು ಕಷ್ಟಸಾಧ್ಯ. ಆದರೆ ಮುಂದಿನ ಬಾರಿಯ ಬಜೆಟ್‌ನಲ್ಲಿ ಅದಕ್ಕೆ ಅನುದಾನ ಹೊಂದಾಣಿಕೆ ಮಾಡಿಕೊಂಡು ಬಜೆಟ್‌ನಲ್ಲೇ ಸೇರಿಸಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಇಲಾಖೆಯ ಪ್ರಕಾರ ಸಾಮಾನ್ಯವಾಗಿ ಹಾಲು ಕರೆಯುವ ಯಂತ್ರಕ್ಕೆ 70 ಸಾವಿರ ರೂ.ವರೆಗೆ ತಗಲುತ್ತದೆ. ಆದರೆ ಪುತ್ತೂರಿನವರೊಬ್ಬರು ತಯಾರಿಸುವ ಯಂತ್ರವು 30 ಸಾವಿರ ರೂ.ಗೆ ಲಭ್ಯವಾಗಲಿದ್ದು, ಅದು ಸಣ್ಣ ಹೈನುಗಾರರಿಗೂ ಅನುಕೂಲವಾಗಲಿದೆ. ಹೀಗಾಗಿ ಸರಕಾರ ಸಬ್ಸಿಡಿಗೆ ಅವಕಾಶ ನೀಡಿದ್ದಲ್ಲಿ ಸಣ್ಣ ಹೈನುಗಾರರು ಹಾಲು ಕರೆಯುವ ಯಂತ್ರ ಖರೀದಿಸಬಹುದಾಗಿದೆ ಎಂದು ಇಲಾಖೆ ಹೇಳುತ್ತಿದೆ.

ಬಜೆಟ್‌ನಲ್ಲಿ ಸೇರಿಸುವ ಭರವಸೆ
ಸಣ್ಣ ಹೈನುಗಾರರಿಂದ ಹಾಲು ಕರೆಯುವ ಯಂತ್ರಕ್ಕೆ ಬೇಡಿಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಸರಕಾರದ ಕಾರ್ಯದರ್ಶಿಗಳಿಂದ ಸಕಾರಾತ್ಮಕ ಸ್ಪಂದನೆ ದೊರಕಿದ್ದು, ಈ ಬಾರಿ ಸಾಧ್ಯವಾಗದಿದ್ದರೆ ಮುಂದಿನ ಬಜೆಟ್‌ನಲ್ಲಿ ಸೇರಿಸುವ ಕುರಿತು ಭರವಸೆ ನೀಡಿದ್ದಾರೆ. ಈ ಹಿಂದೆ ಇಲಾಖೆಯು ಹಾಲು ಕರೆಯುವ ಯಂತ್ರಕ್ಕೆ ಸಬ್ಸಿಡಿ ನೀಡುತ್ತಿರಲಿಲ್ಲ.
 - ಡಾ| ಹೆನ್ರಿ, ಸ. ನಿರ್ದೇಶಕರು, ಪಶುಸಂಗೋಪನ , ಇಲಾಖೆ, ಬಂಟ್ವಾಳ

- ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.