ಶಿಸ್ತು, ದೃಢತೆ ಬೆಳೆಸಿಕೊಂಡರೆ ಯಶಸ್ಸು: ದಿನಕರ ಶೆಟ್ಟಿ
ಕೊಂಬೆಟ್ಟು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಉದ್ಘಾಟಿಸಿ ಡಿವೈಎಸ್ಪಿ
Team Udayavani, Aug 3, 2019, 5:38 AM IST
ಪುತ್ತೂರು: ಜೀವನದಲ್ಲಿ ಶಿಸ್ತು ಹಾಗೂ ದೃಢತೆಯನ್ನು ಬೆಳೆಸಿಕೊಂಡರೆ ಯಶಸ್ಸು ಸಾಧಿಸಬಹುದು. ಇಂದಿನ ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ರೂಪುಗೊಂಡು ದೇಶ ಸೇವೆಯಲ್ಲಿ ತೊಡಗಿಕೊಳ್ಳಲು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಸಹಕಾರಿಯಾಗಬಲ್ಲದು ಎಂದು ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಹೇಳಿದರು.
ಶನಿವಾರ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಪೀಳಿಗೆಯನ್ನು ಉತ್ತಮ ನಾಗರಿಕರನ್ನಾಗಿ ರೂಪುಗೊಳಿಸುವುದೇ ಸ್ಟೂಡೆಂಟ್ ಕೆಡೆಟ್ನ ಮುಖ್ಯ ಉದ್ದೇಶ. ಡಾ| ಎಪಿಜೆ ಅಬ್ದುಲ್ ಕಲಾಂ ಅವರ ಕನಸಿನ ಸಂಸ್ಥೆ ಇದಾಗಿದೆ. ಜತೆಗೆ ದೇಶ ಕಟ್ಟಲು ಬಹಳಷ್ಟು ಕೊಡುಗೆಗಳನ್ನು ನೀಡಿದ ಸಂಸ್ಥೆಯಾಗಿದೆ ಎಂದ ಅವರು, ಪ್ರತಿಯೊಬ್ಬ ತನ್ನ ಗುರಿಯನ್ನು ಮೊದಲೇ ನಿರ್ಧಾರ ಮಾಡಬೇಕು. ಅದು ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದರು.
ವಿವೇಚಿಸುವ ಗುಣ
ಮುಖ್ಯ ಅತಿಥಿಯಾಗಿದ್ದ ಪುತ್ತೂರು ನಗರ ಠಾಣಾ ಮಹಿಳಾ ಎಸ್ಐ ಓಮನಾ ಮಾತನಾಡಿ, ಶಿಸ್ತನ್ನು ಅಳವಡಿಸಿಕೊಂಡು ಬೆಳೆಯುವ ವಿದ್ಯಾರ್ಥಿಗಳಲ್ಲಿ ತಪ್ಪು, ಸರಿಗಳನ್ನು ವಿವೇಚಿಸುವ ಗುಣ ಇರುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಧೈರ್ಯ, ಸಾಹಸ ಪ್ರವೃತ್ತಿ, ಶಿಸ್ತು ಅಳವಡಿಸಿಕೊಂಡು ದೇಶ ಕಟ್ಟುವಲ್ಲಿ ತಮ್ಮದೇ ಪಾಲು ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಕಾರ್ಯಾಧ್ಯಕ್ಷ, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಮಾತನಾಡಿ, ತಮ್ಮ ಮಕ್ಕಳು ಎಂಜಿನಿಯರ್, ಡಾಕ್ಟರ್ ಆಗಬೇಕೆನ್ನುವ ಕನಸನ್ನು ಹೆತ್ತವರು ಬದಿಗಿಟ್ಟು, ಸ್ಟೂಡೆಂಟ್ ಪೊಲೀಸ್ ವ್ಯವಸ್ಥೆಗಳ ಮೂಲಕ ದೇಶ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹ ನೀಡಿ ಎಂದರು.
ನಗರ ಠಾಣಾ ಪ್ರೊಬೆಷನರಿ ಪಿಎಸ್ಐ ರಾಜ್ಕುಮಾರ್, ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎಂ. ಮಾಮಚ್ಚನ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್, ಎನ್ಸಿಸಿ ಅಧಿಕಾರಿ, ಎಸ್ಪಿಸಿಯ ಎಡಿ ವಸಂತ, ಶಾಲಾ ಎನ್ಸಿಸಿ ಅಧಿಕಾರಿ ಗ್ರೆಗೋರಿ ಶುಭಹಾರೈಸಿದರು.
ಉಪ ಪ್ರಾಂಶುಪಾಲೆ ಮರ್ಸಿ ಮಮತಾ, ಲೋನಿ ಪಾಯಸ್ ಉಪಸ್ಥಿತರಿದ್ದರು. ಸ್ಟೂಡೆಂಟ್ ಪೊಲೀಸ್ ಕೆಡೆಟ್ನ ಸಿಪಿಒ ಗೀತಾಮಣಿ ಸ್ವಾಗತಿಸಿ, ಚಿತ್ರಕಲಾ ಶಿಕ್ಷಕ ಜಗನ್ನಾಥ ವಂದಿಸಿದರು. ಮಮತಾ ರೈ ನಿರೂಪಿಸಿದರು.
ಕಿಟ್ ವಿತರಣೆ
ಉಪ ಪ್ರಾಂಶುಪಾಲೆ ಮರ್ಸಿ ಮಮತಾ ಹಾಗೂ ಎಸ್ಪಿಸಿ ಸಿಪಿಒ ಗೀತಾಮಣಿ ಅವರಿಗೆ ಪೊಲೀಸ್ ಇಲಾಖೆಯಿಂದ ನೀಡಿದ ಕಿಟ್ ಅನ್ನು ವಿತರಿಸಲಾಯಿತು.
ಆಕರ್ಷಕ ಪಥ ಸಂಚಲನ
ಕಾರ್ಯಕ್ರಮದ ಮೊದಲು ಸ್ಟೂಡೆಂಟ್ ಪೊಲೀಸ್ ಕೆಡೆಟ್ನ ಸದಸ್ಯರು ಸಮವಸ್ತ್ರ ಧರಿಸಿ ಶಾಲಾ ಆವರಣದಿಂದ ಅತಿಥಿಗಳನ್ನು ಆಕರ್ಷಕ ಪಥಸಂಚಲನದ ಮೂಲಕ ಸ್ವಾಗತಿಸಿ ಕರೆತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ