ಸುಳ್ಯ ತಾ| ಕ್ರೀಡಾಂಗಣಕ್ಕೆ 1 ಕೋಟಿ ರೂ. ಮಂಜೂರು


Team Udayavani, Feb 5, 2020, 12:14 AM IST

feb-29

ಸುಳ್ಯ : ಹದಿಮೂರು ವರ್ಷಗಳ ಹಿಂದೆ ಬರೋಬ್ಬರಿ 60 ಲಕ್ಷ ರೂ. ವ್ಯಯಿಸಿ ಕಾಮಗಾರಿ ಆರಂಭಿಸಿ ಅರ್ಧದಲ್ಲೇ ಮೊಟಕುಗೊಂಡು ಪಾಳುಬಿದ್ದ ಸ್ಥಿತಿಯಲ್ಲೇ ಇರುವ ಶಾಂತಿನಗರದಲ್ಲಿರುವ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಮಂಜೂರಾಗಿದೆ. ಮಂಜೂರಾಗಿರುವ 1 ಕೋಟಿ ರೂ. ಜತೆಗೆ ಅಗತ್ಯ ಇರುವ ಮೂಲ ಸೌಕರ್ಯ ಜೋಡಣೆಗೆ ಬೇಕಾಗ ಬಹುದಾದ ಹೆಚ್ಚುವರಿ ಅನು ದಾನಕ್ಕೂ ಪ್ರಸ್ತಾವನೆ ಸಲ್ಲಿಸುವಂತೆ ಶಾಸಕರು ಸೂಚಿಸಿದ್ದಾರೆ ಎಂದು ಯುವಜನ ಕ್ರೀಡಾ ಇಲಾಖಾಧಿಕಾರಿಗಳು ತಿಳಿಸಿದ್ದು, ದಶಕದ ಪಾಳುಸ್ಥಿತಿಗೆ ಮುಕ್ತಿ ಸಿಗುವ ಲಕ್ಷಣವೊಂದು ಗೋಚರಿಸಿದೆ.

ಕ್ರೀಡಾಂಗಣದ ಕಥೆ
2006-07ರಲ್ಲಿ ರಾಜ್ಯ ಸರಕಾರ ತಾಲೂಕು ಕ್ರೀಡಾಂಗಣ ನಿರ್ಮಾಣ ಕ್ಕೆಂದು 60 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿತ್ತು. ನಗರದಿಂದ 4 ಕಿ.ಮೀ. ದೂರದಲ್ಲಿರುವ ಶಾಂತಿನಗರದಲ್ಲಿ 5.85 ಎಕ್ರೆ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಲಾಯಿತು. 60 ಲಕ್ಷ ರೂ. ವೆಚ್ಚದಲ್ಲಿ ಭೂಮಿ ಸಮತಟ್ಟು, ಕ್ರೀಡಾ ಪಟುಗಳ ವಿಶ್ರಾಂತಿ ಗೆಂದು ಎರಡು ಕಟ್ಟಡ ಗಳನ್ನು ನಿರ್ಮಿಸ ಲಾಯಿತು. ಅನಂತರ ಅನುದಾನ ಬಾರದೆ ಕಾಮಗಾರಿ ಮುಂದು ವರಿಯಲಿಲ್ಲ. 2 ಆರ್‌ಸಿಸಿ ಕಟ್ಟಡಗಳ ಕಿಟಕಿ ಗಾಜು, ಶೌಚಾಲಯದ ಬಾಗಿಲು ಒಡೆದು ಹೋಗಿವೆ. ಸೂಕ್ತ ರಕ್ಷಣೆ ಇಲ್ಲದ ಕಾರಣ ಅನೈತಿಕ ಚಟುವಟಿಕೆ ತಾಣವಾಗಿ ಮಾರ್ಪಟ್ಟಿದೆ ಎಂಬ ಆರೋಪಗಳಿವೆ.

ಸುಸಜ್ಜಿತ ಕ್ರೀಡಾಂಗಣದ ಬೇಡಿಕೆ
ಮಲೆನಾಡಿನ ಸುಳ್ಯದಲ್ಲಿ ಕ್ರೀಡಾ ಪಟುಗಳಿಗೆ ಬರವಿಲ್ಲ. ಆದರೆ ತರಬೇತಿಗೆ ಕ್ರೀಡಾಂಗಣದ ಕೊರತೆ ಇದೆ. ತಾತ್ಕಾಲಿಕ ನೆಲೆಯಲ್ಲಿ ಸ.ಪ.ಪೂ. ಕಾಲೇಜಿನ 200 ಮೀಟರ್‌ ಮೈದಾನದಲ್ಲಿ ತಾಲೂಕಿಗೆ ಸಂಬಂಧಿಸಿದ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ. ಕೊನೆಗೂ ದಶಕಗಳ ಹಿಂದೆ ಹೊಸ ತಾಲೂಕು ಕ್ರೀಡಾಂಗಣಕ್ಕೆ ಯುವಜನ ಇಲಾಖೆ ಮುಖಾಂತರ ಅನುದಾನ ಬಿಡುಗಡೆ ಗೊಳಿಸಲಾಯಿತು. ಅನುದಾನದಲ್ಲಿ ಮೈದಾನವನ್ನು 200 ಮೀ. ಮಾತ್ರ ವಿಸ್ತರಿಸಲು ಪ್ರಯತ್ನಿಸಲಾಯಿತಾದರೂ ಅದೂ ವ್ಯವಸ್ಥಿತವಾಗಿ ಪೂರ್ಣಗೊಂಡಿಲ್ಲ.

ತಡೆಗೋಡೆ ನಿರ್ಮಿಸಬೇಕಿದೆ
ಏರು-ತಗ್ಗಿನ ಗುಡ್ಡದಂತಿರುವ ಈ ಸ್ಥಳವನ್ನು ಸಮತಟ್ಟುಗೊಳಿಸಿ, ಕ್ರೀಡಾಂಗಣದ ಸುತ್ತಲೂ ತಡೆಗೋಡೆ ನಿರ್ಮಿಸ ಬೇಕಿದೆ. ಗ್ಯಾಲರಿ, ರಸ್ತೆ, ಇತರ ಮೂಲ ಸೌಕರ್ಯ ಒದಗಿಸಲು ಕನಿಷ್ಠ 2ರಿಂದ 3 ಕೋಟಿ ರೂ. ಅಗತ್ಯವಿದೆ.

ಅನುದಾನ ಮಂಜೂರು
ತಾಲೂಕು ಕ್ರೀಡಾಂಗಣಕ್ಕೆ 1 ಕೋಟಿ ರೂ. ಅನುದಾನ ಮಂಜೂ ರಾಗಿದೆ. ಉಳಿದ ಅನುದಾನಕ್ಕಾಗಿ ಮೈದಾನದ ಮೂಲ ಅಗತ್ಯ ಹಾಗೂ ಸಂಪರ್ಕ ರಸ್ತೆ ಸಹಿತ ಅಗತ್ಯ ಇರುವ ಕಾಮಗಾರಿ ಬಗ್ಗೆ ಪಟ್ಟಿ ತಯಾರಿಸಿ ನೀಡುವಂತೆ ಶಾಸಕರು ಸೂಚಿಸಿದ್ದಾರೆ. ಆ ಪಟ್ಟಿ ತಯಾರಿ ಪ್ರಗತಿಯಲ್ಲಿದೆ.
– ದೇವರಾಜ್‌ ಮುತ್ಲಾಜೆ , ಸ.ಯುವ ಸಬಲೀಕರಣ ಕ್ರೀಡಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.