ಸರ್ವೆ: ರಸ್ತೆ, ಚರಂಡಿಗೆ ಹಾಕಿದ ಮಣ್ಣು ತೆರವು
Team Udayavani, May 28, 2019, 6:00 AM IST
ಸವಣೂರು: ಸರ್ವೆ ಗ್ರಾಮದ ಸರ್ವೆ ಕಾಡಬಾಗಿಲು ಎಂಬಲ್ಲಿ ಖಾಸಗಿ ಕಾಮಗಾರಿ ಭಾಗವಾಗಿ ರಸ್ತೆ ಹಾಗೂ ಚರಂಡಿಗೆ ಹಾಕಿದ್ದ ಮಣ್ಣನ್ನು ಖಾಸಗಿ ಸಂಸ್ಥೆಯೇ ತೆರವು ಮಾಡಿದೆ. ರಾಜ್ಯ ಹೆದ್ದಾರಿ 100ಕ್ಕೆ ಹೊಂದಿಕೊಂಡಂತಿರುವ 8 ಎಕರೆ ವಿಸ್ತೀರ್ಣದ ಗುಡ್ಡವನ್ನು ವಾಣಿಜ್ಯ ಬಳಕೆಯ ಉದ್ದೇಶಕ್ಕಾಗಿ ಸಮತಟ್ಟುಗೊಳಿಸುವ ಕಾರ್ಯ ನಡೆದಿತ್ತು. ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿಗಳನ್ನು ಮಣ್ಣಿನಿಂದ ಮುಚ್ಚಿದ್ದು, ಅದನ್ನು ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿತ್ತು.
ಈ ಕುರಿತು “ಉದಯವಾಣಿ; ಸುದಿನ ಮೇ 21ರಂದು ಸಚಿತ್ರ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಈ ಸಮಸ್ಯೆಯನ್ನು ಗಮನಿಸಿದ ಲೋಕೋಪಯೋಗಿ ಇಲಾಖೆ, ಖಾಸಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದರಿಂದ ಸೋಮವಾರ ಖಾಸಗಿ ನಿರ್ಮಾಣ ಸಂಸ್ಥೆಯೇ ಚರಂಡಿಗೆ ಹಾಕಿದ್ದ ಮಣ್ಣನ್ನು ತೆರವು ಮಾಡಿ, ಮಳೆ ನೀರು ಹರಿಯಲು ಅನುಕೂಲ ಮಾಡಿಕೊಟ್ಟಿದೆ.
ಕಾಡಬಾಗಿಲು ತಿರುವಿನಲ್ಲಿ ರಸ್ತೆಗೆ ಹೊಂದಿಕೊಂಡಂತೆ ಹಲವಾರು ಅಪಾಯಕಾರಿ ಮರಗಳಿದ್ದು, ಈ ಬಾರಿಯ ಮೊದಲ ಮಳೆಗೆ ಮರವೊಂದು ರಸ್ತೆಗೆ ಬಿದ್ದಿದೆ. ಇನ್ನಷ್ಟು ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ರಸ್ತೆಯತ್ತ ವಾಲಿಕೊಂಡಿದ್ದು, ಗಾಳಿ ಮಳೆ ಬಂದರೆ ಯಾವುದೇ ಕ್ಷಣದಲ್ಲಿ ಧರೆಗುರುಳುವ ಸಾಧ್ಯತೆ ಇದ್ದು, ಅವುಗಳನ್ನೂ ತೆರವುಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ