ತೆಂಕಿಲ ಗುಡ್ಡ ಕುಸಿತ: 11 ಕುಟುಂಬ ಸ್ಥಳಾಂತರ


Team Udayavani, Aug 14, 2019, 5:00 AM IST

S-15

ಪುತ್ತೂರು: ಭೂಕಂಪನದ ಸಾಧ್ಯತೆ ಇರುವ ಬಗ್ಗೆ ಭೂ ವಿಜ್ಞಾನಿಗಳು ಎಚ್ಚರಿಕೆ ನೀಡಿದ ಬೆನ್ನಲೇ ನಗರದ ತೆಂಕಿಲ ದರ್ಖಾಸು ಪ್ರದೇಶದ 11 ಕುಟುಂಬಗಳನ್ನು ಪುತ್ತೂರು ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ ಅವರ ಸೂಚನೆಯಂತೆ ಸ್ಥಳಾಂತರಿಸಲಾಗಿದೆ.

ತೆಂಕಿಲ ದರ್ಖಾಸು ಪ್ರದೇಶಕ್ಕೆ ಸಹಾಯಕ ಆಯುಕ್ತರು ಭೇಟಿ ನೀಡಿ, ಬಿರುಕು ಬಿಟ್ಟಿರುವ ಜಮೀನಿನ ಆಸುಪಾಸಿನ ಮನೆಗಳನ್ನು ಪರಿಶೀಲನೆ ನಡೆಸಿ, ಮಳೆ ಕಡಿಮೆಯಾಗುವ ತನಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಗರಸಭೆಗೆ ಸೂಚನೆ ನೀಡಿದ್ದರು.

ಇಂದಿರಾ ಕ್ಯಾಂಟೀನ್‌ ಆಹಾರ
ತೆಂಕಿಲ ದರ್ಖಾಸು ಪರಿಸರದ ಮೂರು ಕುಟುಂಬಗಳಿಗೆ ನಗರಸಭೆಯ ಸಮುದಾಯ ಭವನದಲ್ಲಿ ವಸತಿ ಮತ್ತು ಆಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದು ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ತಿಳಿಸಿದ್ದಾರೆ. ಗಂಗಾಧರ, ಮಾಲಿನಿ ಹಾಗೂ ಸುರೇಶ್‌ ಕುಟುಂಬದ 13 ಮಂದಿ ಸಮುದಾಯ ಭವನದಲ್ಲಿ ಆಶ್ರಯ ಪಡೆದಿದ್ದಾರೆ.

ಗುರುವ ಅವರ ಕುಟುಂಬದ ಸದಸ್ಯರು ಮಿತ್ತೂರಿನ ಸಂಬಂಧಿಕರ ಮನೆಗೆ, ಪೂವಪ್ಪ ಅವರ ಕುಟುಂಬ ನಿಡ³ಳ್ಳಿಯಲ್ಲಿನ ಸಂಬಂಧಿಕರ ಮನೆಗೆ, ಸೇಸಪ್ಪ ಗೌಡರ ಕುಟುಂಬ ನಗರದ ಕಮ್ನಾರುನಲ್ಲಿರುವ ಸಂಬಂಧಿಕರ ಮನೆಗೆ, ಶ್ರೀಧರ ನಾಯ್ಕ ಅವರ ಕುಟುಂಬ ತೆಂಕಿಲ ಬೈಪಾಸ್‌ನ ಸಂಬಂಧಿಕರ ಮನೆಗೆ ತೆರಳಿ ಆಶ್ರಯ ಪಡೆದಿವೆ. ನಿವಾಸಿಗಳನ್ನು ನಗರಸಭೆ ವಾಹನದಲ್ಲಿ ಅವರ ಸಂಬಂಧಿಕರ ಮನೆಗೆ ಕಳುಹಿಸಿಕೊಡಲಾಯಿತು.

ಉಪಾಹಾರ ವ್ಯವಸ್ಥೆ
ಸಮುದಾಯ ಭವನಕ್ಕೆ ಸ್ಥಳಾಂತರಗೊಂಡಿರುವ ಕುಟುಂಬದ ಶಾಲಾ ಮಕ್ಕಳು ಶಾಲೆಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಉಪಾಹಾರ ಸಿದ್ಧಪಡಿಸಿ ಬುತ್ತಿಗಳಿಗೆ ಹಾಕಿ ನೀಡಲಾಗಿದೆ. ಮಕ್ಕಳು ಶಾಲಾ ಹಾಜರಾತಿಯಿಂದ ತಪ್ಪಿಸಿಕೊಳ್ಳದಂತೆ ನಗರಸಭೆ ಈ ಕ್ರಮ ಕೈಗೊಂಡಿದೆ.

ತೆಂಕಿಲದಲ್ಲಿ ಗುಡ್ಡ ಬಿರುಕು ಬಿಟ್ಟ ಸ್ಥಳ ಅಪಾಯಕಾರಿ ಹಂತದಲ್ಲಿ ಇರುವುದು ಮೇಲ್ನೋಟಕ್ಕೆ ಕಂಡಿದೆ. ಸುರಕ್ಷತೆ ದೃಷ್ಟಿಯಿಂದ ನಿವಾಸಿಗಳನ್ನು ಸ್ಥಳಾಂತರಿಸಿದ್ದು, ಸ್ಥಳೀಯಾಡಳಿತ ಮೂಲಕ ನಗರದ ಸಮುದಾಯ ಭವನದಲ್ಲಿ ವಸತಿ, ಊಟೋಪಹಾರ ಒದಗಿಸಲಾಗಿದೆ. ಆರೋಗ್ಯದ ಕಡೆಗೂ ಗಮನಹರಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ನಗರದ ಸಮುದಾಯ ಭವನಕ್ಕೆ ಆ. 13ರಂದು ಭೇಟಿ ನೀಡಿದ ಅವರು ನಿವಾಸಿಗಳ ಆರೋಗ್ಯ ಮತ್ತು ಸ್ಥಳದ ಕುರಿತು ಮಾಹಿತಿ ಪಡೆದು ಬಳಿಕ ಮಾತನಾಡಿದರು.

ಶಾಶ್ವತ ವ್ಯವಸ್ಥೆಗೆ ಕ್ರಮ
ಕೆಲವರು ಸಂಬಂಧಿಕರ ಮನೆಯ ಆಶ್ರಯ ಪಡೆದಿದ್ದಾರೆ. ಮಳೆ ಇಳಿಮುಖವಾದ ಬಳಿಕ ಸ್ಥಳದ ವಸ್ತುಸ್ಥಿತಿ ಪರಿಶೀಲಿಸಿ ವಾಸಸ್ಥಳಕ್ಕೆ ಮರಳುವ ಬಗ್ಗೆ ಯೋಚಿಸಲಾಗುವುದು. ಅಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದ್ದಲ್ಲಿ ಕುಟುಂಬಗಳಿಗೆ ಶಾಶ್ವತ ಬದಲಿ ವ್ಯವಸ್ಥೆ ಕಲ್ಪಿಸುವುದಾಗಿ ಶಾಸಕ ಸಂಜೀವ ಮಠಂದೂರು ಭರವಸೆ ನೀಡಿದ್ದಾರೆ.

ಸ್ಥಳಾಂತರಕ್ಕೆ ನಿರಾಕರಣೆ
ಗುಡ್ಡ ಬಿರುಕು ಬಿಟ್ಟು ಆತಂಕದ ಸ್ಥಿತಿಯಲ್ಲಿರುವ ತೆಂಕಿಲ ದರ್ಖಾಸು ಪ್ರದೇಶದಲ್ಲಿ ವಾಸವಾಗಿರುವ 10 ಕುಟುಂಬಗಳ ಸದಸ್ಯರು ಮನೆ ಬಿಟ್ಟು ಸ್ಥಳಾಂತರಗೊಳ್ಳಲು ನಿರಾಕರಿಸಿದರು. ಮನೆಗಳಿಗೆ ಏನೂ ಆಗುವುದಿಲ್ಲ. ನಿಮ್ಮ ಸುರಕ್ಷತೆಗಾಗಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗುವುದು ಎಂದು ಸಹಾಯಕ ಆಯುಕ್ತರು ನಿವಾಸಿಗಳ ಮನವೊಲಿಸಿದರು. ಮುಂದಿನ ವ್ಯವಸ್ಥೆಗಳನ್ನು ಸರಕಾರಿ ಮಟ್ಟದಲ್ಲಿ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ನಿವಾಸಿಗಳು ಸ್ಥಳಾಂತರವಾಗಲು ಒಪ್ಪಿಗೆ ನೀಡಿದರು.

ಸಮುದಾಯ ಭವನದಲ್ಲೇ ಓದು, ಅಭ್ಯಾಸ
ಒಂದು ವಾರದ ಬಳಿಕ ಶಾಲೆಗಳು ಪುನಾರಂಭವಾದ ಹಿನ್ನೆಲೆಯಲ್ಲಿ ಸಮುದಾಯ ಭವನದಲ್ಲಿರುವ ಕುಟುಂಬಗಳ ಮಕ್ಕಳು ಸೋಮವಾರ ರಾತ್ರಿ ಅಲ್ಲೇ ಓದು, ಅಭ್ಯಾಸ ಪ್ರಕ್ರಿಯೆ ನಡೆಸಿದ್ದು ಕಂಡು ಬಂತು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.