ಕುಸಿತ ಭೀತಿಯ ಶಾಲೆಗೆ ಬೇಕಿದೆ ಮೂಲ ಸೌಕರ್ಯದ ಆಧಾರ


Team Udayavani, Jun 15, 2019, 5:00 AM IST

q-4

ಬೆಳ್ತಂಗಡಿ: ಸರಕಾರಿ ಶಾಲೆ ಬಗ್ಗೆ ನಿರ್ಲಕ್ಷ್ಯಕ್ಕೆ ಸರಕಾರಿ ವ್ಯವಸ್ಥೆಯೇ ಕಾರಣ ಎಂಬುದಕ್ಕೆ ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಮುಂಡ್ರುಪ್ಪಾಡಿ ದ.ಕ. ಜಿ.ಪಂ. ಕಿ.ಪ್ರಾ. ಶಾಲೆ ಸ್ಪಷ್ಟ ಉದಾಹರಣೆಯಾಗಿ ಕಣ್ಮುಂದೆ ಕಾಣಸಿಗುತ್ತದೆ. ಧರ್ಮಸ್ಥಳದಿಂದ 3 ಕಿ.ಮೀ ದೂರದ ಮಲೆಕುಡಿಯ ಜನಾಂಗದ ಮಕ್ಕಳೇ ಹೆಚ್ಚು ಅವಲಂಬಿಸಿರುವ ಇಲ್ಲಿನ ಶಾಲೆಯಲ್ಲಿ ಮೂಲ ಸೌಕರ್ಯದ್ದೇ ಕೊರತೆ. 1961ರಲ್ಲಿ ಮಣ್ಣಿನಿಂದ ನಿರ್ಮಿತ ಕಟ್ಟಡದಲ್ಲಿರುವ ಶಾಲೆ 2011ರಲ್ಲಿ ಸುವರ್ಣ ಮಹೋತ್ಸವ ಕಂಡಿತ್ತು. ಈವರೆಗೂ ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಕೊಠಡಿ ನಿರ್ಮಿಸಲು ಸಾಧ್ಯವಾಗಿಲ್ಲ ಎಂಬುದು ವಿಪರ್ಯಾಸವೇ ಸರಿ.

ಗೆದ್ದಲು ಹಿಡಿದ ಅಡ್ಡಹಲಗೆ
1ರಿಂದ 5ನೇ ತರಗತಿವರೆಗೆ 21 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿರುವ ಶಾಲೆಯಲ್ಲಿ ಇಬ್ಬರು ಶಿಕ್ಷಕಿಯರಿದ್ದಾರೆ. ಹಿಂದೆ 51 ಮಕ್ಕಳ ಸಂಖ್ಯೆ ಇದ್ದು, ಸೂಕ್ತ ವ್ಯವಸ್ಥೆ ಇಲ್ಲದೆ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಗೆದ್ದಲು ಹಿಡಿದ ಮೇಲ್ಛಾವಣಿ ಅಡ್ಡಹಾಸು ದುರಸ್ತಿಪಡಿ ಸುವಂತೆ ಕಳೆದ ಹಲವು ವರ್ಷಗಳಿಂದ ಶಿಕ್ಷಣ ಇಲಾಖೆ, ಜಿ.ಪಂ. ಅಧಿಕಾರಿ ಗಳ ಗಮನ ಸೆಳೆದರೂ ಯಾರೊಬ್ಬರೂ ಗಮನ ಹರಿ ಸಿಲ್ಲ. ಮಳೆಗಾಲ ಆರಂಭ ಗೊಂಡಿದ್ದು, ಗಾಳಿ – ಮಳೆಗೆ ಅನಾಹುತ ಸಂಭವಿಸುವ ಭೀತಿಯಿದೆ.

ಬಾಗಿಲುಗಳಿಲ್ಲದ ಶೌಚಾಲಯ
ಶೌಚಾಲಯ ದುರ್ನಾತ ಬೀರುತ್ತಿದ್ದು, ಬಾಗಿಲು ಮುರಿದು ಬಿದ್ದಿದೆ. ಸಣ್ಣಪುಟ್ಟ ಮಕ್ಕಳು ಸಂಕಷ್ಟಕ್ಕೊಳಗಾಗಿದ್ದಾರೆ. ಸ್ಥಳೀಯ ದಾನಿಗಳು ಹಾಗೂ ಊರವರು ಎಸ್‌.ಡಿ. ಎಂ.ಸಿ ಒಟ್ಟಾಗಿ ಶಾಲೆಯ ದುರಸ್ತಿಗೆ ಸಹಕರಿಸಿದಲ್ಲಿ ಅನುಕೂಲವಾಗಲಿದೆ ಎಂಬುವುದು ಹೆತ್ತವರ ಕೂಗು.

ಮಣ್ಣಿನ ಗೋಡೆ
51 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಮಣ್ಣಿನ ಗೋಡೆ ಈಗಲೋ ಆಗಲೋ ಎಂಬಂತಿದೆ. ಸೂಕ್ತ ನಿರ್ವಹಣೆ ಇಲ್ಲದೆ ಅಲ್ಲಲ್ಲಿ ಮಣ್ಣು ಎದ್ದು ಹೋಗಿದೆ. 2016-17ರಲ್ಲಿ ತಾ.ಪಂ.ನ 75 ಸಾವಿರ ರೂ. ಅನುದಾನದಲ್ಲಿ ಕೊಠಡಿ ದುರಸ್ತಿಪಡಿಸಲಾಗಿರುವುದು ಹೊರತುಪಡಿಸಿ ಇನ್ನಾವುದೇ ಅನುದಾನ ನಿರೀಕ್ಷಿಸುವಂತಿಲ್ಲ ಎಂಬಂತಾಗಿದೆ. ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಸಾಧ್ಯವಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ. ಇದರ ಹೊರತಾಗಿ ಇರುವ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳದಿರು ವುದು ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ.

 ಮನವಿ ಸಲ್ಲಿಸಿದೆ
ಶಾಲೆಗೆ ಬೇಕಿರುವ ಅಗತ್ಯಗಳ ಕುರಿತು ಪಟ್ಟಿ ಸಿದ್ಧಪಡಿಸಿ ಸಮಾಜಕಲ್ಯಾಣ ಇಲಾಖೆ ಸಹಿತ ಬಿಇಒ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಶಾಶ್ವತ ಕುಡಿಯುವ ನೀರಿಗಾಗಿ ಗ್ರಾ.ಪಂ. ನಿಂದ ಕ್ರಿಯಾಯೋಜನೆ ರಚಿಸಿ 2 ಲಕ್ಷ ರೂ. ಮೀಸಲಿರಿಸಲಾಗಿದೆ.
– ಚಂದನ್‌ ಕಾಮತ್‌, ಅಧ್ಯಕ್ಷ ರು, ಧರ್ಮಸ್ಥಳ ಗ್ರಾ.ಪಂ.

 ಜಿ.ಪಂ. ಗಮನಕ್ಕೆ ತರಲಾಗಿದೆ
ಶಾಲೆಗೆ ಮೂಲ ಸೌಕರ್ಯ ಒದಗಿಸುವಂತೆ ಜಿಲ್ಲಾ ಪಂಚಾಯತ್‌ ಗಮನಕ್ಕೆ ತರಲಾಗಿದೆ. ತಾಲೂಕು ಪಂಚಾಯತ್‌ ಅನುದಾನದಲ್ಲಿ ಈ ಹಿಂದೆ ನಲಿಕಲಿ ಕೊಠಡಿ ದುರಸ್ತಿ ಪಡಿಸಲಾಗಿತ್ತು. ಸವಲತ್ತು ನೀಡಲು ಮಕ್ಕಳ ಸಂಖ್ಯೆ  ಕೊರತೆ ನೆಪ ಒಡ್ಡುತ್ತಾರೆ. ಇರುವ ಮಕ್ಕಳ ರಕ್ಷಣೆ ಸವಾಲಾಗಿದೆ.
– ಎಂ.ಬಿ. ಕರಿಯ
ಅಧ್ಯಕ್ಷರು, ಎಸ್‌ಡಿಎಂಸಿ

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.