ತುಳುನಾಡಿನ ಸಂಸ್ಕೃತಿಯ ಪ್ರತೀಕ ಕೆಸರು ಗದ್ದೆ ಕ್ರೀಡಾಕೂಟ

- ಕೃಷಿ ಸಂಬಂಧಿತ ಆಚಾರ, ವಿಚಾರಗಳಿಗೆ ವೇದಿಕೆ; ಎಲ್ಲ ವಯೋಮಾನದವರು ಭಾಗಿ

Team Udayavani, Oct 16, 2019, 5:00 AM IST

u-26

ಕಲ್ಲುಗುಡ್ಡೆ: ತುಳುನಾಡು ತನ್ನ ಆಚಾರ- ವಿಚಾರಗಳಲ್ಲಿ ವಿಶೇಷತೆಯನ್ನು ಹೊಂದಿದೆ. ಮಳೆಗಾಲದ ಅವಧಿಯಲ್ಲಿ ಹಲವು ಕಡೆಗಳಲ್ಲಿ ಕೆಸರುಗದ್ದೆ ಕ್ರೀಡಾಕೂಟಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಗೊಳ್ಳುತ್ತಿದ್ದು, ತುಳುನಾಡಿನ ಕೃಷಿ, ಸಂಸ್ಕೃತಿ, ಆಚಾರ-ವಿಚಾರಗಳಿಗೆ ವೇದಿಕೆಯನ್ನು ಕಲ್ಪಿಸಿದಂತಾಗಿದೆ.

ಎಲ್ಲ ವಯೋಮಾನದ ಜನರು ಕೆಸರುಗದ್ದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಬೇಸಾಯ ಮಾಡದ ಖಾಲಿ ಗದ್ದೆಯಲ್ಲಿ ಅಥವಾ ಕೊಯ್ಲಿನ ಬಳಿಕ ಈ ಕ್ರೀಡೆಗಳು ನಡೆಯುತ್ತಿದ್ದು, ಕ್ರೀಡಾಕೂಟ ನಡೆದ ಬಳಿಕ ಇದರಲ್ಲಿ ಕೃಷಿ ಕಾರ್ಯ ಮುಂದುವರಿಸಲಾಗುತ್ತಿದೆ.

ಕೆಸರು ಗದ್ದೆಯಲ್ಲಿ
“ಕೆಸರು ಗದ್ದೆ ಕ್ರೀಡಾಕೂಟ’ ಮಳೆಗಾಲದಲ್ಲಿ ಕೆಸರು ತುಂಬಿರುವ ಗದ್ದೆಗಳಲ್ಲಿ ಆಯೋಜನೆಗೊಳ್ಳುತ್ತಿದ್ದು, ಗ್ರಾಮಸ್ಥರು ಮಣ್ಣಿನ ಮಕ್ಕಳಾಗಿ ತಮ್ಮ ದೈನಂದಿನ ಜಂಜಾಟಗಳನ್ನು ಮರೆಯುತ್ತಾರೆ. ಈ ಕ್ರೀಡಾಕೂಟ ಆಟಗಾರರ ಜತೆ ವೀಕ್ಷಕರಿಗೂ ಮನೋರಂಜನೆಯನ್ನು ನೀಡುತ್ತದೆ. ಕೆಸರುಗದ್ದೆ ಕ್ರೀಡಾಕೂಟ ಮೇ ತಿಂಗಳಿನಿಂದ ಡಿಸಂಬರ್‌ ತಿಂಗಳೊಳಗೆ ನಡೆಯುತ್ತಿದ್ದು, ದಕ್ಷಿಣ ಕನ್ನಡದಲ್ಲಿಯೇ ವಾರ್ಷಿಕ 300ಕ್ಕೂ ಅಧಿಕ ಕ್ರೀಡಾಕೂಟಗಳು ಆಯೋಜನೆಗೊಳ್ಳುತ್ತಿವೆ. ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಎನ್ನುತ್ತಾರೆ ಕ್ರೀಡಾಪಟುಗಳು.

ಆಯೋಜನೆ
ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಟಗಳು ಮಾತ್ರವಲ್ಲದೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು, ವಸ್ತು ಪ್ರದರ್ಶನಗಳು, ಕೃಷಿ ಸಂಸ್ಕೃತಿ ಪರಂಪರೆಯನ್ನು ತಿಳಿ ಹೇಳುವ ಕಾರ್ಯಕ್ರಮಗಳು ಇರುತ್ತವೆ. ಸಭಾ ಕಾರ್ಯಕ್ರಮದಲ್ಲಿ ತುಳುನಾಡಿನ ಸಂಸ್ಕೃತಿ, ಆರಾಧನೆಗಳ ಸೊಬಗನ್ನು ಬಣ್ಣಿಸಲು ಉಪನ್ಯಾಸವನ್ನೂ ಏರ್ಪಡಿಸಲಾಗುತ್ತದೆ. ಸ್ಥಳೀಯ ಸಾಧಕರನ್ನು ಗುರುತಿಸಿ, ಗೌರವಿಸಲಾಗುತ್ತದೆ.

ವಿವಿಧ ಕ್ರೀಡೆಗಳು
ತುಳುನಾಡಿನ ಕ್ರೀಡೆಗಳು ವಿಶಿಷ್ಟವಾಗಿವೆ. ಅಳಿವಿನಂಚಿನಲ್ಲಿರುವ ಹಲವು ಕ್ರೀಡೆಗಳಿಗೂ ಉತ್ತೇಜನ ದೊರೆಯುತ್ತಿದೆ. ಕೆಸರುಗದ್ದೆ ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ಕಬಡ್ಡಿ, ಜಾರು ಕಂಬ ಏರುವುದು, ಕೆಸರುಗದ್ದೆ ಓಟ, ಹಿಮ್ಮುಖ ಓಟ, ಒಂಟಿ ಕಾಲು ಓಟ, ಜನ ಕಂಬಳ, ಮೂರು ಕಾಲಿನ ಓಟ (ಇಬ್ಬರು ಜತೆಯಾಗಿ), ಕೆಸರು ಈಜು, ಪಾಸಿಂಗ್‌ ಬಾಲ್‌, ನಿಧಿ ಶೋಧನೆ, ರಿಲೇ, ಮಡಿಕೆ ಒಡೆಯುವುದು, ಹಾಳೆ ಎಳೆಯುವುದು, ಗೋಣಿ ಚೀಲ ಓಟ, ಉಪ್ಪು ಮೂಟೆ ಸಹಿತ ವಿವಿಧ ಬಗೆಯ ವೈಯಕ್ತಿಕ ಹಾಗೂ ಗುಂಪು ಕ್ರೀಡೆಗಳು ಇರುತ್ತವೆ.

ಕೃಷಿಗೆ ಪೂರಕ
ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭತ್ತನಾಟಿಯಂತಹ ತರಬೇತಿ ಕಾರ್ಯಗಳು ಕೆಲವೆಡೆ ನಡೆಯುತ್ತಿದ್ದು, ಜತೆಗೆ ಪಾಡªನ ಹೇಳುವ ಪದ್ಧತಿಯೂ ಇದೆ. ಗದ್ದೆಯಲ್ಲಿ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಬಹುದು, ಮುಂತಾದ ಕೃಷಿ ಪೂರಕ ವಾತವರಣಕ್ಕೆ ಇಲ್ಲಿ ವೇದಿಕೆಯಾಗುತ್ತದೆ.

ಮನೋರಂಜನೀಯ
ನಾನು 4 ವರ್ಷಗಳಿಂದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದೇನೆ. ಈ ಕ್ರೀಡೆಯಿಂದ ಮಾನಸಿಕ ನೆಮ್ಮದಿಯ ಜತೆಗೆ ಮನೋರಂಜನೆ ಸಿಗುತ್ತಿದೆ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳ ಉಳಿವಿಗೆ ಇಂತಹ ಕ್ರೀಡಾಕೂಟಗಳು ಸಹಕಾರಿ.
– ತಿರುಮಲೇಶ್ವರ ಸಾಕೋಟೆ ಕೆಸರುಗದ್ದೆ ಕ್ರೀಡಾಪಟು

ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.