ನದಿಯಲ್ಲಿ ಮುಳುಗಿ ಬಾಲಕ ಸಾವು
Team Udayavani, Jun 13, 2019, 5:00 AM IST
ಸವಣೂರು: ಇಲ್ಲಿನ ಶಾಂತಿ ಮೊಗರು ಸೇತುವೆಯ ಬಳಿ ಗೆಳೆಯರೊಂದಿಗೆ ಸ್ನಾನಕ್ಕೆಂದು ಇಳಿದ ಬಾಲಕನೊಬ್ಬ ಮೃತಪಟ್ಟ ಘಟನೆ ಜೂ.12ರಂದು ಸಂಜೆ ಸಂಭವಿಸಿದೆ.
ವಿಟ್ಲ ಮೂಲದ, ಪ್ರಸ್ತುತ ಪರಣೆಯ ಬಾಡಿಗೆ ಮನೆಯಲ್ಲಿದ್ದ ಹಮೀದ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲಾ 9ನೇ ವಿದ್ಯಾರ್ಥಿ ಮಹಮ್ಮದ್ ಅಶ್ಪಾನ್ (15) ಮೃತ ಬಾಲಕ. ಈತ 6 ಮಂದಿ ಸ್ನೇಹಿತರ ಜತೆ ಸ್ನಾನಕ್ಕೆಂದು ಕುಮಾರ ಧಾರಾಕ್ಕಿಳಿದು ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದ. ಬಳಿಕ ಹುಡುಕಾಡಿದಾಗ ಮುಳುಗಿದ ಸ್ಥಳದಲ್ಲೇ ಶವ ಪತ್ತೆಯಾಗಿದೆ. ಅಗ್ನಿ ಶಾಮಕ ದಳದವರು ಆಗಮಿಸುವ ಮೊದಲೇ ಸ್ಥಳೀಯರು ಮೃತದೇಹವನ್ನು ಹೊರತೆಗೆದಿದ್ದರು. ದೇಹವನ್ನು ಕಡಬ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಅಶ್ಪಾನ್ ತಂದೆ ಹಮೀದ್ ಅವರು ವಿದೇಶದಲ್ಲಿದ್ದಾರೆ. ತಾಯಿ ಅವ್ವಮ್ಮ ತವರು ಮನೆಯೂ ಪರಣೆ ಸಮೀಪದ ಕೊಳಿ ಎಂಬಲ್ಲಿದ್ದು, ಸಮೀಪದಲ್ಲೇ ಇವರ ಬಾಡಿಗೆ ಇದೆ. ಅಶ್ಪಾನ್ ಉತ್ತಮ ಕಬಡ್ಡಿ ಆಟಗಾರನಾಗಿದ್ದು, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾನೆ.
ಕಡಬ ಎಸ್ಐ ಪ್ರಕಾಶ್ ದೇವಾಡಿಗ, ಬೆಳ್ಳಾರೆ ಎಸ್ಐ ಡಿ. ಎನ್. ಈರಯ್ಯ ಹಾಗೂ ಸಿಬಂದಿ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ಘಟನ ಸ್ಥಳಕ್ಕೆ ಪುತ್ತೂರು ಉಪವಿಭಾಗ ಡಿವೈಎಸ್ಪಿ ದಿನಕರ ಶೆಟ್ಟಿ ಭೇಟಿ ನೀಡಿದರು.
ಉದಯವಾಣಿ ಎಚ್ಚರಿಸಿತ್ತು
ಕುಮಾರಧಾರಾ ನದಿಯಲ್ಲಿ ಅಪಾಯವನ್ನರಿಯದೆ ಈಜಾಡುವ ಕುರಿತು ಉದಯವಾಣಿ ಸುದಿನದಲ್ಲಿ ಮೇ 5ರಂದು ವರದಿ ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು