ಬಜೆಟ್‌ನಲ್ಲಿ ಸಿಗುವುದೇ ಕಡಬ ತಾಲೂಕಿಗೆ ಅನುದಾನ?

ಇನ್ನೂ ತೆರೆದುಕೊಂಡಿಲ್ಲ ಕಚೇರಿ; ಉದ್ಘಾಟನೆಗೆ ಅತ್ಯುತ್ಸಾಹ, ಅನುಷ್ಠಾನಕ್ಕೆ ನಿರ್ಲಕ್ಷ್ಯ

Team Udayavani, Feb 23, 2020, 5:34 AM IST

ram-34

ಕಡಬ: ರಾಜ್ಯದಲ್ಲಿ ಘೋಷಣೆಯಾಗಿರುವ ಎಲ್ಲ 50 ನೂತನ ತಾಲೂಕುಗಳು ಅನುದಾನದ ಕೊರತೆಯಿಂದ ಕಾರ್ಯಾರಂಭ ಮಾಡಿಲ್ಲ. ಆರು ದಶಕಗಳ ಹೋರಾಟದ ಫಲವಾಗಿ ಘೋಷಣೆಯಾದ ಕಡಬ ತಾಲೂಕಿನ ಕಥೆಯೂ ಇದಕ್ಕೆ ಭಿನ್ನವಾಗಿಲ್ಲ. ಹೊಸ ತಾಲೂಕುಗಳ ಉದ್ಘಾಟನೆಗೆ ತೋರಿದ ಉತ್ಸಾಹ ಅನುಷ್ಠಾನಕ್ಕೆ ತೋರದೇ ಇರುವುದರಿಂದ ಹೆಸರಿಗೆ ಮಾತ್ರ ಹೊಸ ತಾಲೂಕು ಎನ್ನುವಂತಾಗಿದೆ. ರಾಜ್ಯ ಸರಕಾರದ ಬಜೆಟ್‌ ಅಧಿವೇಶನ ಇದೇ ತಿಂಗಳಲ್ಲಿ ಪ್ರಾರಂಭವಾಗಲಿದ್ದು, ಅಧಿವೇಶನದಲ್ಲಿ ನೂತನ ತಾಲೂಕು ಅನುಷ್ಠಾನಕ್ಕೆ ಅಗತ್ಯ ಅನುದಾನ ಸಿಗಬಹುದೇ ಎನ್ನುವ ನಿರೀಕ್ಷೆಯಲ್ಲಿ ಕಡಬ ಜನರು ಇದ್ದಾರೆ.

ಈ ಹಿಂದೆ ತನ್ನ ಆಡಳಿತಾವಧಿಯ ಕೊನೆಯಲ್ಲಿ ಕಡಬವನ್ನು ತಾಲೂಕು ಎಂದು ಘೋಷಣೆ ಮಾಡಿದ್ದ ಬಿಜೆಪಿ ಸರಕಾರ ಈಗ ಮತ್ತೆ ಅಧಿಕಾರದಲ್ಲಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಾಗ ಆಡಳಿತಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರವೂ ಹೊಸ ತಾಲೂಕುಗಳ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಕೊನೆ ಗಳಿಗೆಯಲ್ಲಿ ಮತ್ತೂಮ್ಮೆ ಹೊಸ ತಾಲೂಕು ಗಳನ್ನು ಘೋಷಿಸಿ ಕೈ ತೊಳೆದು ಕೊಂಡಿತ್ತು. ಬಳಿಕ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರಕಾರ ಹೊಸ ತಾಲೂಕುಗಳ ಉದ್ಘಾಟನೆ ನೆರವೇರಿಸುವಲ್ಲಿ ಯಶಸ್ವಿಯಾಯಿತು. ಇದೀಗ ಮತ್ತೆ ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿದೆ. ಮುಂದಿನ ಬಜೆಟ್‌ನಲ್ಲಿಯಾದರೂ ಹೊಸ ತಾಲೂಕುಗಳ ಕಾರ್ಯಾರಂಭಕ್ಕೆ ಅನುದಾನ ಸಿಗುವುದೇ ಎನ್ನುವುದು ಜನರ ನಿರೀಕ್ಷೆ.

ಮಿನಿ ವಿಧಾನಸೌಧ: ಶಂಕುಸ್ಥಾಪನೆಗೆ ಸೀಮಿತ
ಪಕ್ಷಗಳ ಮೇಲಾಟ, ರಾಜಕೀಯ ಪ್ರಹಸನದ ಮಧ್ಯೆ ಹೇಗೋ ಹೊಸ ತಾಲೂಕು ಉದ್ಘಾಟನೆ ಭಾಗ್ಯ ಕಂಡಾಗ ಇನ್ನು ಕಡಬದ ಪಾಲಿಗೆ ಶುಕ್ರ ದೆಸೆ ಪ್ರಾರಂಭವಾಯಿತು ಎಂದು ಜನರು ನಂಬಿದ್ದರು. ಆದರೆ ತಾಲೂಕು ಉದ್ಘಾಟನೆಗೊಂಡು ವರ್ಷವಾದರೂ ಪೂರ್ಣ ಪ್ರಮಾಣದ ತಾಲೂಕು ಆಗಲೇ ಇಲ್ಲ. ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಘೋಷಿತ ಮಿನಿ ವಿಧಾನಸೌಧಕ್ಕೆ ಅಡಿಗಲ್ಲು ಹಾಕಿ ವರ್ಷ ಕಳೆದರೂ ತಾಂತ್ರಿಕ ತೊಂದರೆಗಳ ನೆಪದಲ್ಲಿ ಅದು ಇನ್ನೂ ಕನಸಾಗಿಯೇ ಉಳಿದಿದೆ. ಕಡಬದ ತಹಶೀಲ್ದಾರ್‌ ಕಚೇರಿ ಬಳಿ ಕಾದಿರಿಸಿರುವ 1.60 ಎಕ್ರೆ ಜಮೀನಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅಂದಿನ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಶಿಲಾನ್ಯಾಸ ನೆರವೇರಿಸಿದ್ದರು. ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಪ್ರಕಟಿಸಲಾಯಿತು. ಬಳಿಕ ಬಿಡುಗಡೆಯಾಗಿರುವುದು 2 ಕೋಟಿ ರೂ. ಮಾತ್ರ ಎಂದು ತಿಳಿದುಬಂತು. ತಹಶೀಲ್ದಾರರ ಕಚೇರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಶಾಸಕರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಸರ್ವೆ ಇಲಾಖೆ ಕಚೇರಿಗಳನ್ನೊಳಗೊಂಡ ಮಿನಿ ವಿಧಾನಸೌಧದ ನಿರ್ಮಾಣದ ಕನಸು ಸದ್ಯ ಈಡೇರುವ ಮಾತು ದೂರವಿದೆ.

11.40 ಎಕ್ರೆ ಜಮೀನು ಇದೆ
ಪ್ರತ್ಯೇಕ ಕಡಬ ತಾ.ಪಂ. ಅನುಷ್ಠಾನಕ್ಕೆ ಸರಕಾರ ಸಿಬಂದಿ ಮಂಜೂರಾತಿ ಆದೇಶ ನೀಡಿದರೂ ಕಾರ್ಯರೂಪಕ್ಕೆ ಬಂದಿಲ್ಲ. ಕಡಬದಲ್ಲಿ ನ್ಯಾಯಾಲಯ ಕಾರ್ಯಾರಂಭಿಸಲು ನಿರ್ಧರಿಸಲಾಗಿದ್ದರೂ ಕಟ್ಟಡದ ಕೊರತೆಯಿಂದ ಅದೂ ಸಾಧ್ಯವಾಗಿಲ್ಲ. ಇತರ ಸರಕಾರಿ ಕಚೇರಿಗಳನ್ನು ತೆರೆಯುವ ಕುರಿತು ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲ.

ವಿವಿಧ ಇಲಾಖೆಗಳಿಗೆ ತಾಲೂಕು ಮಟ್ಟದ ಕಚೇರಿ ತೆರೆಯಲು ಬಂಟ್ರ ಗ್ರಾಮದ ಮುಂಚಿಕಾಪು ಎಂಬಲ್ಲಿ ಒಟ್ಟು 11.40 ಎಕ್ರೆ ಜಮೀನನ್ನು ಕಾದಿರಿಸಲಾಗಿದೆ. ಈ ನಡುವೆ ಕಡಬ ಹಾಗೂ ಕೋಡಿಂಬಾಳ ಗ್ರಾಮಗಳನ್ನೊಳಗೊಂಡ ಕಡಬ ಗ್ರಾ.ಪಂ. ಅನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಸರಕಾರದ ಆದೇಶ ಹೊರಬಿದ್ದಿದೆ.

42 ಗ್ರಾಮಗಳ ಕಡಬ ತಾಲೂಕು
ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿದ್ದ ಒಟ್ಟು 35 ಗ್ರಾಮಗಳಾದ ಕಡಬ, ಕೋಡಿಂಬಾಳ, ಬಂಟ್ರ, 102 ನೆಕ್ಕಿಲಾಡಿ, ಐತ್ತೂರು, ಬಿಳಿನೆಲೆ, ಕೊಂಬಾರು, ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ಪೆರಾಬೆ, ಕುಂತೂರು, ಆಲಂಕಾರು, ರಾಮಕುಂಜ, ಹಳೆನೇರೆಂಕಿ, ಕೊçಲ, ದೋಳ್ಪಾಡಿ, ಕಾಣಿಯೂರು, ಚಾರ್ವಾಕ, ಬೆಳಂದೂರು, ಕಾçಮಣ, ಕುದ್ಮಾರು, ಸವಣೂರು, ಪುಣcಪ್ಪಾಡಿ, ಪಾಲ್ತಾಡಿ, ಕೊಣಾಜೆ, ಶಿರಿಬಾಗಿಲು, ಗೊಳಿತೊಟ್ಟು, ಕೊಣಾಲು, ಆಲಂತಾಯ, ನೆಲ್ಯಾಡಿ, ಕೌಕ್ರಾಡಿ, ಇಚ್ಲಂಪಾಡಿ, ಶಿರಾಡಿ ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳಾದ ಏನೆಕಲ್‌, ಸುಬ್ರಹ್ಮಣ್ಯ, ಐನೆಕಿದು, ಬಳ್ಪ, ಕೇನ್ಯ, ಎಣ್ಮೂರು ಹಾಗೂ ಎಡಮಂಗಲ ಹೀಗೆ ಒಟ್ಟು 42 ಗ್ರಾಮಗಳ ನೂತನ ಕಡಬ ತಾಲೂಕು ರೂಪುಗೊಂಡಿದೆ.

ಅಗತ್ಯ ಅನುದಾನ ಬರುವ ವಿಶ್ವಾಸವಿದೆ
ಕಡಬ ತಾಲೂಕು ಅನುಷ್ಠಾನಕ್ಕೆ ಸರಕಾರ ಬದ್ಧವಾಗಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪೂರಕ ಅನುದಾನ ಒದಗಿಸಲಾಗುವುದು. ಹಂತ ಹಂತವಾಗಿ ತಾಲೂಕು ಮಟ್ಟದ ಇಲಾಖಾ ಕಚೇರಿಗಳನ್ನು ಪ್ರಾರಂಭಿಸುವ ಪ್ರಕ್ರಿಯೆಗೆ ಅಗತ್ಯ ಸಿದ್ಧತೆಗಳು ಸರಕಾರದ ಮಟ್ಟದಲ್ಲಿ ನಡೆಯುತ್ತಿವೆ. ಮುಂಬರುವ ಬಜೆಟ್‌ ಅಧಿವೇಶನದಲ್ಲಿ ತಾಲೂಕು ಅನುಷ್ಠಾನಕ್ಕೆ ಅಗತ್ಯ ಅನುದಾನ ಘೋಷಣೆಯಾಗಲಿದೆ ಎನ್ನುವ ಭರವಸೆ ಇದೆ.
– ಎಸ್‌. ಅಂಗಾರ, ಶಾಸಕ, ಸುಳ್ಯ ವಿಧಾನಸಭಾ ಕ್ಷೇತ್ರ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.