ತಾಲೂಕಾದರೂ ಕಡಬ ಜನತೆಗೆ ತಪ್ಪಿಲ್ಲ ಅಲೆದಾಟ


Team Udayavani, Jun 26, 2019, 5:00 AM IST

19

ತಾಲೂಕು ಕೇಂದ್ರವಾಗಿರುವ ಕಡಬ ಪೇಟೆಯ ನೋಟ.

ಕಡಬ: ಪದೇ ಪದೇ ವಿಘ್ನಗಳು ಎದುರಾದರೂ 4 ತಿಂಗಳ ಹಿಂದೆ ಕಡಬ ನೂತನ ತಾಲೂಕು ಉದ್ಘಾ ಟನೆ ಯಾಗಿದೆ. ನೂತನ ತಾಲೂಕಿನ ಜತೆ ಜತೆಗೆಯೇ ಕಡಬದಲ್ಲಿ ವಿವಿಧ ಇಲಾಖೆ ಗಳ ತಾಲೂಕುಮಟ್ಟದ ಕಚೇರಿಗಳು ತೆರೆದುಕೊಳ್ಳಲಿವೆ ಎಂದು ಹೇಳಲಾಗಿ ದ್ದರೂ ಕಂದಾಯ ಇಲಾಖೆಯನ್ನು ಹೊರ ತುಪಡಿಸಿ ಉಳಿದ ಯಾವುದೇ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಕಡಬದಲ್ಲಿ ಇದುವರೆಗೆ ತೆರೆದುಕೊಂಡಿಲ್ಲ.

ಕಂದಾಯ ಇಲಾಖೆಯ ಬಹುತೇಕ ಕೆಲಸಗಳ ಕಡಬದಲ್ಲಿಯೇ ಆಗುತ್ತಿ ದ್ದರೂ ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ (ಟ್ರೆಜರಿ), ಆಹಾರ ಇಲಾಖೆ ಮುಂತಾದ ಕಂದಾಯ ಇಲಾಖೆಗೆ ಸಂಬಂಧಿಸಿದ ತಾಲೂಕು ಮಟ್ಟದ ಕಚೇರಿಗಳು ಆರಂಭವಾಗದಿರುವು ದರಿಂದಾಗಿ ಜನರು ತಮ್ಮ ಅಗತ್ಯಗಳಿಗೆ ಈ ಹಿಂದಿನಂತೆಯೇ ಪುತ್ತೂರಿಗೆ ಹೋಗ ಬೇಕಿದೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿಗೆ ಅಲೆಯುವುದು ತಪ್ಪಿಲ್ಲ. ಕೆಲ ಸಂದರ್ಭಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಕಡಬ ತಾಲೂಕಿನ ವ್ಯಾಪ್ತಿಯ ಶಾಲೆಗಳ ದಾಖಲೆ ಪತ್ರಗಳಿಗೆ ಕಡಬ ತಾಲೂಕಿನ ಬದಲು ಪುತ್ತೂರು ತಾಲೂಕು ಎಂದು ಹಳೆಯ ಮೊಹರು (ಸೀಲ್) ಹಾಕಿಸಿಕೊಂಡು ಬನ್ನಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಿಂದಕ್ಕೆ ಕಳುಹಿಸಿದ ಘಟನೆಗಳೂ ನಡೆದಿವೆ.

ಡಿಸಿ ಆದೇಶಕ್ಕೂ ಬೆಲೆ ಇಲ್ಲ
ತಾಲೂಕು ಉದ್ಘಾಟನೆಗೆ ಮೊದಲೇ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸಿದ್ಧತೆ ನಡೆಸಬೇಕು ಎಂದು ಕಳೆದ ವರ್ಷ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜರಗಿದ್ದ ತಾಲೂಕು ಉದ್ಘಾಟನೆಯ ಸಮಾಲೋಚನ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.

ತಾಲೂಕು ಉದ್ಘಾಟನೆಯ ಸಂದರ್ಭದ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಆರಂಭಗೊಳ್ಳಬೇಕು ಎಂದು ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಸರಕಾರಿ ಕಟ್ಟಡಗಳು ಲಭ್ಯವಿಲ್ಲದೇ ಹೋದರೆ ತಾತ್ಕಾಲಿಕ ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಕಚೇರಿ ಕಟ್ಟಡ ನಿರ್ಮಿಸಲು ಸೂಕ್ತ ಭೂಮಿ ಗುರುತಿಸಬೇಕು. ಆಯಾ ಕಚೇರಿಗೆ ಅಧಿಕಾರಿ ಮತ್ತು ಸಿಬಂದಿಗಳನ್ನು ನಿಯೋಜಿಸಬೇಕು. ಪೂರ್ಣಪ್ರಮಾಣದ ಅಧಿಕಾರಿ ಇಲ್ಲದಿದ್ದರೆ ಪ್ರಭಾರ ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದರು. ಆದರೆ ಕಂದಾಯ ಇಲಾಖೆಯನ್ನು ಹೊರತುಪಡಿಸಿದರೆ ಉಳಿದ ಯಾವುದೇ ಕಚೇರಿಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಆಸಕ್ತಿ ತೋರಿಸುತ್ತಿಲ್ಲ. ಒತ್ತಡ ಹೇರಬೇಕಾದ ಜನಪ್ರತಿನಿಧಿಗಳು ಕೂಡ ತೆಪ್ಪಗೆ ಕುಳಿತಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.

ತೆರೆಯಬೇಕಿರುವ ಕಚೇರಿಗಳು
ಆಹಾರ ಇಲಾಖೆ, ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಪಂಚಾಯತ್‌, ಕೃಷಿ ಇಲಾಖೆ, ತೋಟಗಾರಿಕ ಇಲಾಖೆ, ಪಶು ಸಂಗೋಪನ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಗ್ರಂಥಾಲಯ ಹಾಗೂ ಅಗ್ನಿಶಾಮಕ ದಳ ತಾಲೂಕು ಮಟ್ಟದ ಕಚೇರಿಗಳು ಕಡಬದಲ್ಲಿ ತೆರೆಯಬೇಕಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಉನ್ನತಾಧಿಕಾರಿಗಳು ಈ ಕುರಿತು ಗಮನಹರಿಸುವ ಅಗತ್ಯವಿದೆ.

ಸರಕಾರ ಆದೇಶ ನೀಡಿದೆ
ನೂತನ ಕಡಬ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕೆಲಸಗಳು ಕಡಬದಲ್ಲಿಯೇ ಆಗುತ್ತಿದೆ. ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ ಇತ್ಯಾದಿ ತೆರೆಯಲು ಸ್ವಲ್ಪ ಕಾಲಾವಕಾಶದ ಅಗತ್ಯವಿದೆ. ಇತರ ಸರಕಾರಿ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸರಕಾರದ ಆದೇಶವಿದೆ. ತಾಲೂಕು ಮಟ್ಟದ ಕಚೇರಿ ತೆರೆಯದ ಇಲಾಖೆಗಳಿಗೆ ಜ್ಞಾಪನ ಪತ್ರ ಕಳುಹಿಸಲಾಗುವುದು.
– ಕೃಷ್ಣಮೂರ್ತಿ ಎಚ್.ಕೆ. ಸಹಾಯಕ ಆಯುಕ್ತರು, ಪುತ್ತೂರು

•ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.