ಹನಿ ನೀರೂ ಬರಲ್ಲ; ಕಾಮಗಾರಿ ಬಿಲ್‌ ಪಾವತಿ!


Team Udayavani, May 28, 2019, 6:00 AM IST

w-5

ಉಪ್ಪಿನಂಗಡಿ: ಕುಡಿಯುವ ನೀರಿನ ಅಭಾವ ನೀಗಿಸಲು ಸರಕಾರ ಶುದ್ಧ ನೀರಿನ ಘಟಕಗಳ ಸ್ಥಾಪನೆಗೆ ಯೋಜನೆ ಜಾರಿಗೊಳಿಸಿದ್ದು, ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ತುಕ್ಕು ಹಿಡಿದು ಗುಜರಿಗೆ ಸೇರುವಂತಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಆರಂಭಿಸಿ, ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ನೀರು ಪ್ರಯಾಣಿಕರಿಗೆ ಸಿಗಲೆಂದು ಉಪ್ಪಿನಂಗಡಿಯಲ್ಲೂ ಯೋಜನೆ ಜಾರಿ ಗೊಳಿಸಲಾಗಿತ್ತು. ಎರಡು ವರ್ಷಗಳ ಹಿಂದೆ ಹೊರ ರಾಜ್ಯದ ಗುತ್ತಿಗೆದಾರರೊಬ್ಬರು ಕಾಟಾಚಾರಕ್ಕೆ ಎಂಬಂತೆ ಕಳಪೆ ಕಾಮಗಾರಿ ನಿರ್ವಹಿಸಿ, ಅದರ ಭಾವಚಿತ್ರಗಳನ್ನು ಸರಕಾರಕ್ಕೆ ಸಲ್ಲಿಸಿ, ಬಿಲ್‌ ಪಡೆದಿದ್ದಾರೆ. ಅಧಿಕಾರಿಗಳು ಕಾಮಗಾರಿಯನ್ನು ಪರಿಶೀ ಲಿಸದೆ ಮಂಜೂರಾತಿ ನೀಡಿದ್ದಾರೆ. ಇದೇ ಅವಾಂತರಕ್ಕೆ ಕಾರಣ ಎಂಬುದು ಸ್ಥಳೀಯರ ಆರೋಪ.

ಘಟಕ ರಚಿಸಿ ಎರಡು ವರ್ಷಗಳೇ ಆದರೂ ಪ್ರವಾಸಿಗರಿಗೆ ಅಥವಾ ಗ್ರಾಮಸ್ಥರಿಗೆ ಒಂದು ಹನಿ ನೀರೂ ಸಿಕ್ಕಿಲ್ಲ. ಹೆದ್ದಾರಿ ಸನಿಹದಲ್ಲಿ ಯಾರೋ ಅಪರಿಚಿತರು ಘಟಕ ನಿರ್ಮಿಸಿ ತೆರಳಿದ್ದಾರೆ. ಇದು 1 ರೂ. ನಾಣ್ಯವನ್ನೂ ಸ್ವೀಕರಿಸುವುದಿಲ್ಲ, ಹನಿ ನೀರೂ ಇದರಿಂದ ಬರುವುದಿಲ್ಲ. ಹೊಸ ಯೋಜನೆಗಳು ಪುಸ್ತಕಗಳಿಗೆ ಸೀಮಿತವೇ ಅಥವಾ ಜನರಿಗೂ ಏನಾದರೂ ಉಪಯೋಗ ಸಿಗುತ್ತದೆಯೇ ಎಂದು ಸ್ಥಳೀಯ ರಿಕ್ಷಾ ಚಾಲಕ ಖಲಂಧರ್‌ ಶಾಫಿ ಪ್ರಶ್ನಿಸಿದ್ದಾರೆ.

 ಸ್ಥಳೀಯರಿಗೆ ಕೊಡಿ
ಸರಕಾರದ ಎಲ್ಲ ಯೋಜನೆಗಳಿಗೆ ಆನ್‌ಲೈನ್‌ನಲ್ಲೇ ಅರ್ಜಿ ಸ್ವೀಕಾರ ಮಾಡಿ, ಟೆಂಡರ್‌ ನೀಡುವುದರಿಂದ ಇಂತಹ ಯೋಜನೆಗಳು ಸಮಸ್ಯೆಗಳ ಆಗರವಾಗಿ ಹಣ ಪೋಲಾಗುತ್ತಿದೆ. ಪ್ರತಿಯೊಂದು ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬರಲು ಸ್ಥಳೀಯರಿಗೆ ಗುತ್ತಿಗೆ ನೀಡಿದರೆ ಒಳಿತು.
– ಅಬ್ದುಲ್‌ ರಹಿಮಾನ್‌, ಗ್ರಾ.ಪಂ. ಅಧ್ಯಕ್ಷ, ಉಪ್ಪಿನಂಗಡಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.