ಇದು ರಸ್ತೆಯೋ ಮಳೆ ನೀರಿನ ಹೊಳೆಯೋ?


Team Udayavani, Jun 14, 2019, 5:00 AM IST

q-13

ಸುಬ್ರಹ್ಮಣ್ಯ: ಜಿಲ್ಲೆಯ ವಿವಿಧೆಡೆ ಮಳೆಗಾಲದ ತಯಾರಿಯನ್ನು ಇಲಾಖೆಗಳು ನಡೆಸಿಲ್ಲ ಎಂಬ ಅಂಶ ಆರಂಭದ ಮಳೆಗೇ ಮನದಟ್ಟಾಗಿದೆ. ಬಹುತೇಕ ರಸ್ತೆಗಳು ಚರಂಡಿ ಕಾಣದೆ ಮಳೆನೀರು ರಸ್ತೆಯಲ್ಲಿ ಹರಿಯುತ್ತಿದೆ. ಅಲ್ಲಲ್ಲಿ ರಸ್ತೆ ಬದಿ ಮರ ಉರುಳಿ ಸಂಚಾರಕ್ಕೂ ಅಡಚಣೆ ಉಂಟು ಆಗುತ್ತಿದೆ.

ಎಲ್ಲ ರಾಜ್ಯ ಹೆದ್ದಾರಿ ಸಹಿತ ಬಹುತೇಕ ರಸ್ತೆಗಳ ನಿರ್ವಹಣೆಯನ್ನು ಲೊಕೋಪಯೋಗಿ ಇಲಾಖೆ ಸಂಪೂರ್ಣ ನಿರ್ಲಕ್ಷಿಸಿದೆ. ಮಾನ್ಸೂನ್‌ ಪೂರ್ವ ಮಳೆ ಆರಂಭಗೊಂಡು ಮಳೆಗಾಲದ ಮುನ್ಸೂಚನೆ ನೀಡಿ ಮಳೆ ಬಿರುಸು ಪಡೆದು ಸುರಿದರೂ ಇಲಾಖೆ ಇನ್ನೂ ಎಚ್ಚರವಾದಂತಿಲ್ಲ.

ಮೈಸೂರು- ಸುಳ್ಯ- ಮಡಿಕೇರಿ, ಜಾಲೂರು- ಸುಬ್ರಹ್ಮಣ್ಯ, ಸುಳ್ಯ- ಗುತ್ತಿಗಾರು- ಸುಬ್ರಹ್ಮಣ್ಯ, ಬೆಳ್ಳಾರೆ- ಪಂಜ- ಸುಬ್ರಹ್ಮಣ್ಯ, ಸುಬ್ರಹ್ಮಣ್ಯ- ಪಂಜ- ಕಾಣಿಯೂರು ಇತ್ಯಾದಿ ರಾಜ್ಯ ಹೆದ್ದಾರಿಗಳಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೇ ದಾಸ್ತಾನು ಆಗುವುದರ ಜತೆಗೆ ರಸ್ತೆ ಎರಡೂ ಬದಿ ಮರದ ರೆಂಬೆಗಳನ್ನು ಕತ್ತರಿಸದೆ ಅಪಾಯ ಆಹ್ವಾನಿಸುವಂತಿದೆ.

ಸುಳ್ಯ – ಸುಬ್ರಹ್ಮಣ್ಯ ರಸ್ತೆ ಹೆದ್ದಾರಿಯ ಬಹುತೇಕ ಕಡೆಗಳಲ್ಲಿ ರಸ್ತೆಗೆ ಗುಡ್ಡದ ನೀರು ಹರಿದು ರಸ್ತೆಯಲ್ಲೆ ಹೂಳು ತುಂಬಿಕೊಂಡಿದೆ. ಅಲ್ಲಲ್ಲಿ ಮರಗಳು ರಸ್ತೆಗೆ ಬಾಗಿಕೊಂಡು ಅಪಾಯದ ಸ್ಥಿತಿ ಇದೆ. ವಾಹನ ಸಂಚಾರರರಲ್ಲಿ ಭೀತಿ ಹುಟ್ಟಿಸುತ್ತಿದೆ.

ಈ ಹಿಂದೆ ರಸ್ತೆ ನಿರ್ವಹಣೆಗೆ ಗ್ಯಾಂಗ್‌ಮನ್‌ಗಳನ್ನು ನೇಮಿಸುತ್ತಿದ್ದ ಲೋಕೋಪಯೋಗಿ ಇಲಾಖೆ ಈ ವ್ಯವಸ್ಥೆಯನ್ನು ಸಂಪೂರ್ಣ ಕೈಬಿಟ್ಟಿದೆ. ಇಲಾಖೆಯೂ ರಸ್ತೆ ನಿರ್ವಹಣೆ ಕಾರ್ಯ ನಡೆಸುತ್ತಿಲ್ಲ. ರಸ್ತೆ ನಿರ್ವಹಣೆಗೆ ಸ್ಥಳಿಯ ಆಡಳಿತವನ್ನು ಆಶ್ರಯಿಸಬೇಕಾದ ದುರ್ಗತಿ ಒದಗಿ ಬಂದಿದೆ. ಸಮಸ್ಯೆ ಬಂದಾಗ ಲೋಕೋಪಯೋಗಿ ಇಲಾಖೆ ಸ್ಥಳೀಯಾಡಳಿತದ ಕಡೆ ಸ್ಥಳೀಯಾಡಳಿತ ಪಿಡಬ್ಲ್ಯುಡಿ ಕಡೆಗೆ ಬೆರಳು ತೋರಿಸುತ್ತಿದ್ದಾರೆ.

ಗುಡ್ಡ ಪ್ರದೇಶದಿಂದ ಮಳೆ ನೀರಿನ ಜತೆ ಕಲ್ಲು, ಮಣ್ಣುಗಳು ರಸ್ತೆಗೆ ಹರಿಯುತ್ತವೆ. ರಸ್ತೆ ಮಧ್ಯೆ ಅಲ್ಲಲ್ಲಿ ಕೆಸರು ಮಣ್ಣು ಸಂಗ್ರಹಗೊಳ್ಳುತ್ತದೆ. ಮಳೆಗೆ ತಗ್ಗು ಪ್ರದೇಶಗಳತ್ತ ನೀರು ಹರಿದು ರಸ್ತೆಗಳು ಕೆರೆಗಳಾಗಿ ಪರಿವರ್ತನೆ ಆಗುತ್ತಿದೆ. ರಸ್ತೆ ಎರಡು ಬದಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಸಂಚಾರದಲ್ಲಿ ಭಾರೀ ವ್ಯತ್ಯಯ ಜತೆಗೆ ಅಪಾಯಕ್ಕೂ ಆಹ್ವಾನ ನೀಡುತ್ತದೆ. ರಸ್ತೆ, ಹೊಳೆ ಯಾವುದು ಎನ್ನುವ ಅನುಮಾನ ಬರುತ್ತದೆ.

ಇಲಾಖೆ ಚರಂಡಿ ನಿರ್ವಹಣೆ, ರೆಂಬೆ ತೆರವಿಗೆ ಪ್ರತ್ಯೇಕ ಫ‌ಂಡ್‌ ಲಭ್ಯವಾಗುತ್ತಿಲ್ಲ ಎಂಬ ನೆಪವೊಡ್ಡಿ ನುಣುಚಿಕೊಳ್ಳುತ್ತಿದೆ. ಒಟ್ಟಿನಲ್ಲಿ ಚಾಲಕರು ಹಾಗೂ ಪ್ರಯಾಣಿಕರ ಸ್ಥಿತಿ ಅತಂತ್ರವಾಗಿದೆ. ಕೆಲವು ಕಡೆ ರಸ್ತೆ ಕಿರಿದಾಗಿದ್ದು ಕೆಲವೊಂದು ಕಡೆ ರಸ್ತೆ ತೀರಾ ತಿರುವಿನಿಂದ ಕೂಡಿದೆ. ರಸ್ತೆಯ ಡಾಮರು ಎದ್ದು ಹೋಗಿ ರಸ್ತೆಯಲ್ಲಿ ಹೂಳು ತುಂಬಿಕೊಂಡಿದೆ. ರಸ್ತೆಯಲ್ಲೆ ಮಳೆ ನೀರು ಹರಿದು ಡಾಮರು ಕೊಚ್ಚಿಕೊಂಡು ಹೋಗಿ ಸುಸ್ತಿಯ ರಸ್ತೆ ಕೂಡ ಕೆಟ್ಟು ಹೋಗುತ್ತಿದೆ.

ಕೆಂಪು ನೀರಿನ ಅಭಿಷೇಕ ಭಾಗ್ಯ
ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕುತ್ತ ರಸ್ತೆ ಬದಿ ತೆರಳುವಾಗ ರಸ್ತೆಯಲ್ಲಿ ವಾಹನಗಳು ಸಂಚರಿಸುವ ವೇಳೆ ರಸ್ತೆಯಲ್ಲಿ ನಿಂತ ಕೊಳಚೆ ನೀರು ಮಕ್ಕಳ ಬಟ್ಟೆ ಹಾಗೂ ಶರೀರಗಳಿಗೆ ಚಿಮ್ಮುತ್ತಿದೆ. ಮಕ್ಕಳಿಗೆ ಮಳೆಗಾಲ ಕೆಂಪು ನೀರಿನ ಅಭಿಷೇಕ ಆಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳು ಸನಿಹದಲ್ಲಿದ್ದರೂ ಇಲಾಖೆಗಳು ಮಾತ್ರ ಮೌನಕ್ಕೆ ಶರಣಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಪಾಯದ ಕರೆಗಂಟೆ
ಸಮರ್ಪಕ ಚರಂಡಿ ಕೊರತೆಯಿಂದ ರಸ್ತೆ ಮಧ್ಯೆ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಹೊಂಡದಲ್ಲಿ ನೀರು ನಿಂತ ಪರಿಣಾಮ ಆಳ ತಿಳಿಯದೆ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಳ್ಳುವಂತಾದರೆ ಬೇರೆ ವಾಹನಗಳ ತಳ ಭಾಗಕ್ಕೆ ಬಲವಾದ ಏಟು ಬಿದ್ದು ವಾಹನ ಜಖಂಗೊಳ್ಳುತ್ತಿದೆ. ಜತೆಗೆ ಅಪಘಾತಗಳು ಸಂಭವಿಸುತ್ತಿವೆ.

ಗುತ್ತಿಗೆದಾರರಿಗೆ ಸೂಚನೆ
ಮಳೆಗಾಲದ ಮುನ್ನಚ್ಚರಿಕೆ ಕ್ರಮವಾಗಿ ಚರಂಡಿಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಿದ್ದೇವೆ. ಈ ಸಂಬಂಧ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಶೀಘ್ರ ತಾಲೂಕಿನ ವಿವಿಧೆಡೆ ಹೂಳು ತೆಗೆಯುವ ಕೆಲಸ ನಡೆಯುತ್ತದೆ.
– ಎಸ್‌. ಸಣ್ಣೇಗೌಡ, ಕಾ.ನಿ. ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

 ಮುಂಜಾಗ್ರತೆ ವಹಿಸಿಲ್ಲ
ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆ ಆಗಿದೆ. ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿರುವುದರಿಂದ ರಸ್ತೆಗಳು ಹಾಳಾಗುತ್ತಿವೆ. ನಗರ ಮತ್ತು ಹಳ್ಳಿ ಎಲ್ಲೆಡೆಯೂ ಚರಂಡಿ ಇಲ್ಲದಿರುವುದೇ ದೊಡ್ಡ ಸಮಸ್ಯೆ. ಇಲಾಖೆಗಳು ಕಾರೊನ್ಮುಖವಾಗಬೇಕು.
– ಶಿವಪ್ರಸಾದ್‌ ಪೆರಾಲು, ನಾಗರಿಕ

- ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.