ಇಂದೋ, ನಾಳೆಯೋ ಎನ್ನುತ್ತಿದೆ ಸಾರಕರೆ ಅಣೆಕಟ್ಟು


Team Udayavani, Jun 12, 2019, 5:50 AM IST

h-19

ಸವಣೂರು: ಕಿಂಡಿ ಅಣೆಕಟ್ಟುಗಳು ಜನತೆಯ ಜೀವನಾಡಿಗಳಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಇಲಾಖೆಗಳ ನಿರ್ವಹಣೆ ಕೊರತೆಯಿಂದ ಜನರಿಗೆ ಪೂರಕವಾಗಿರಬೇಕಾದ ಕಿಂಡಿ ಅಣೆಕಟ್ಟುಗಳು ಉಪಯೋಗ ಶೂನ್ಯವಾಗುತ್ತಿವೆ.

ಸವಣೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣcಪ್ಪಾಡಿ ಗ್ರಾಮದ ಸಾರಕರೆಯಲ್ಲಿರುವ ಕಿಂಡಿ ಅಣೆಕಟ್ಟು ನಿರ್ವಹಣೆ ಕೊರತೆಯಿಂದ ಸಂಪೂರ್ಣವಾಗಿ ನೆಲಕಚ್ಚುವ ಸ್ಥಿತಿಯಲ್ಲಿದೆ. ಸಣ್ಣ ನೀರಾವರಿ ಇಲಾಖೆಯ ಮೂಲಕ ನಿರ್ಮಾಣಗೊಂಡ ಈ ಕಿಂಡಿ ಅಣೆಕಟ್ಟು ಸೂಕ್ತ ನಿರ್ವಹಣೆಯ ಕೊರತೆಯಿಂದ ಉಪಯೋಗ ಶೂನ್ಯವಾಗಿದೆ. ಮಾತ್ರವಲ್ಲದೆ ಸಂಪೂರ್ಣ ನಾದುರಸ್ತಿಯಲ್ಲಿದ್ದು ಕುಸಿದು ಬೀಳುವ ಹಂತದಲ್ಲಿದೆ.

ಗೌರಿ ಹೊಳೆಯಲ್ಲಿ ಈ ಕಿಂಡಿ ಅಣೆಕಟ್ಟಿನ ಮುಂದೆ ಅಜಿಲೋಡಿ ಸೊರಕೆಯ ಕಿಂಡಿ ಅಣೆಕಟ್ಟು ಕೂಡ ನಾದುರಸ್ತಿಯಲ್ಲಿತ್ತು. ಈಗ ಅದರ ದುರಸ್ತಿ ಕಾರ್ಯ ನಡೆದಿದೆ. ಸಾರಕರೆ ಕಿಂಡಿ ಅಣೆಕಟ್ಟಿನ ಅಭಿವೃದ್ಧಿಯ ಕುರಿತೂ ಇಲಾಖೆ ಗಮನಹರಿಸಬೇಕಿದೆ.

ಅನುದಾನ ಬಂದರೆ ಸಾಲದು
ಗ್ರಾಮೀಣ ಭಾಗದ ನೀರಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ದೃಷ್ಟಿಯಿಂದ ನಿರ್ಮಾಣ ಮಾಡಲಾದ ಇಂತಹ ಅಣೆಕಟ್ಟುಗಳ ಸ್ಥಿತಿಯನ್ನು ಸುಧಾರಿಸಲು ಇಲಾಖೆ ಗಮನಹರಿಸಬೇಕಾಗಿದೆ. ಸರಕಾರದಿಂದ ಅನುದಾನ ಬರುತ್ತದೆ. ಅದನ್ನು ಬಳಸಿ ನಿರ್ಮಾಣ ಮಾಡಿದರೆ ಯೋಜನೆಯ ಉದ್ದೇಶ ಈಡೇರುವುದಿಲ್ಲ. ಕಿಂಡಿ ಅಣೆಕಟ್ಟಿನ ಗುಣಮಟ್ಟ ಮತ್ತು ಪ್ರಯೋಜನಗಳ ಕುರಿತು ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಕೃಷಿಕರಿಗೆ ವರದಾನ
ಈ ಭಾಗದ ಜಲಸಂರಕ್ಷಣೆಯ ಮೂಲವಾಗಿದ್ದ ಈ ಕಿಂಡಿ ಅಣೆಕಟ್ಟು ಕೃಷಿಕರಿಗೆ ವರದಾನವಾಗಿತ್ತು. ಈ ಭಾಗದ ಅನೇಕ ಕೃಷಿಕರಿಗೆ ನೀರೊದಗಿಸುತ್ತಿತ್ತು. ಸುತ್ತಮುತ್ತಲಿನ ಕೆರೆ, ಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಿದ್ದ ಈ ಅಣೆಕಟ್ಟಿನ ಈಗಿನ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ.

ಗಮನ ಹರಿಸಲಿ
ಅಂತರ್ಜಲ ಹೆಚ್ಚಳದ ಜತೆಗೆ ಈ ಭಾಗದ ಕೃಷಿಕರಿಗೆ ಬಲು ಉಪಯೋಗಕಾರಿಯಾಗಿದ್ದ ಕಿಂಡಿ ಅಣೆಕಟ್ಟು ದುರಸ್ತಿ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
– ಕರುಣಾಕರ ಸಾರಕರೆ ಸ್ಥಳೀಯರು

ಗಮನಕ್ಕೆ ತರಲಾಗಿದೆ
ಪುಣಪ್ಪಾಡಿ ಗ್ರಾಮದ ಸಾರಕರೆ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಕುಸಿದು ಬೀಳುವ ಹಂತದಲ್ಲಿದೆ. ಕಾಮಗಾರಿ ನಡೆಸುವಾಗ ಗುಣಮಟ್ಟದ ಕುರಿತು ಗಮನಹರಿಸದೇ ಇದ್ದುದೇ ಈ ರೀತಿಯ ಅವ್ಯವಸ್ಥೆಗೆ ಕಾರಣವಾಗಿದೆ. ಈ ಕುರಿತು ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಗಮನಕ್ಕೆ ತರಲಾಗಿದೆ.
– ಗಿರಿಶಂಕರ ಸುಲಾಯ ಸವಣೂರು ಗ್ರಾ.ಪಂ. ಸದಸ್ಯರು

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.