ಗಾಯಗೊಂಡ ಕಡವೆಗೆ ಚಿಕಿತ್ಸೆ


Team Udayavani, Jun 26, 2019, 5:00 AM IST

23

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಅರಣ್ಯ ಇಲಾಖೆ ವಿಭಾಗಕ್ಕೆ ಸೇರಿದ ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪದೇಲ ಬಳಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾದ ಕಡವೆ ಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿದ್ದು, ಮಂಗಳವಾರ ಚಿಕಿತ್ಸೆ ನೀಡಿದೆ.

ಇಲ್ಲಿನ ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಲುಕಿತ್ತು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಕಡವೆಯ ಕಾಲಿಗೆ ಸಿಕ್ಕಿಕೊಂಡಿದ್ದ ಬೇಲಿ ಪರದೆಗಳನ್ನು ಬಿಡಿಸಿದ್ದರು. ಅದು ಮಲಗಿದಲ್ಲಿಂದ ತನ್ನ ಪಾಡಿಗೆ ಎದ್ದು ಹೋಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಮಂಗಳವಾರ ಬೆಳಗ್ಗೆ ನೋಡಿದಾಗಲೂ ಕಡವೆ ಅಲ್ಲಿಯೇ ಮಲಗಿದ್ದುದನ್ನು ಕಂಡ ಸ್ಥಳೀಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ.

ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿ ಕಡವೆಯನ್ನು ಅರಣ್ಯ ಇಲಾಖೆಯ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಪಿಕಪ್‌ ವಾಹನದಲ್ಲಿ ಕರೆತಂದು, ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಕೇಂದ್ರದ ಪಶು ವೈದ್ಯಾಧಿಕಾರಿ ಡಾ| ವೆಂಕಟಾಚಲಪತಿ ಕಡವೆಗೆ ಚಿಕಿತ್ಸೆ ನೀಡಿದರು. ಕಡವೆ ದೇಹದ ಮೇಲೆ ಆಗಿರುವ ಗಾಯಗಳಿಗೆ ಔಷಧ ಹಚ್ಚಿ, ಚುಚ್ಚುಮದ್ದು ನೀಡಿದ್ದಾರೆ. ಕಡವೆ ಬಳಲಿದ್ದು, ಓಡಾಡಲು ಶಕ್ತವಾಗಿಲ್ಲ. ಈಗ ಅದು ಚೇತರಿಸಿಕೊಳ್ಳುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗಾಯಗೊಂಡು ಪತ್ತೆಯಾದ ಕಡವೆ ಗರ್ಭ ಧರಿಸಿರುವ ಸಾಧ್ಯತೆ ಇದೆ ಎನ್ನುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದು, ಸ್ಕ್ಯಾನಿಂಗ್‌ ಇತ್ಯಾದಿ ಪರೀಕ್ಷೆಗಳ ಬಳಿಕವಷ್ಟೇ ಖಚಿತವಾಗಿ ಹೇಳಲು ಸಾಧ್ಯ ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.