ಸೋರುತ್ತಿದೆ ವೇಣೂರು ನಾಡಕಚೇರಿ

32 ವರ್ಷಗಳಿಂದ ಬಾಡಿಗೆ ಕೋಣೆ ಆಸರೆ

Team Udayavani, Sep 11, 2019, 5:44 AM IST

t-46

ವೇಣೂರು: ಇಪ್ಪತ್ತೂಂಬತ್ತು ಗ್ರಾಮಗಳಿಗೆ ಸಂಬಂಧಿತ ಕಂದಾಯ ಇಲಾಖೆಯ ವೇಣೂರು ನಾಡ ಕಚೇರಿ ಅವ್ಯವಸ್ಥೆಯನ್ನು ನೋಡಿಯೇ ತಿಳಿಯಬೇಕು. ಸೋರುವ ಕಟ್ಟಡ, ಬಿರುಕುಬಿಟ್ಟ ಛಾವಣಿ, ಕೊಠಡಿ ತುಂಬಾ ಮಳೆ ನೀರು. ಈ ಎಲ್ಲದರ ಮಧ್ಯೆ ಕಡತಗಳನ್ನು ಶೇಖರಿಸಿಡಲು ಸಿಬಂದಿ ಪರದಾಡುವ ಕಷ್ಟ ಅಷ್ಟಿಷ್ಟಲ್ಲ.

1987ರಲ್ಲಿ ವೇಣೂರಿನಲ್ಲಿ ಪ್ರಾರಂಭಗೊಂಡ ನಾಡಕಚೇರಿಗೆ ಇನ್ನೂ ಸ್ವಂತ ಕಟ್ಟಡ ಭಾಗ್ಯ ಒದಗಿ ಬಂದಿಲ್ಲ. ಸುಮಾರು 32 ವರ್ಷಗಳಿಂದ ಬಾಡಿಗೆ ಕೋಣೆಯಲ್ಲೇ ದಿನ ಕಳೆಯುತ್ತಿದೆ. ಇಂದೋ ನಾಳೆಯೋ ಬೀಳುವ ಸ್ಥಿತಿ ಯಲ್ಲಿರುವ ಕಟ್ಟಡದಿಂದ ಗ್ರಾಮಸ್ಥರ ಕಡತಗಳಿಗೆ ಸುರಕ್ಷತೆಯೇ ಇಲ್ಲವಾಗಿದೆ.

ಇಲ್ಲಿನ ಕಂದಾಯ ನಿರೀಕ್ಷಕರೇ ಉಪ ತಹಶೀಲ್ದಾರರ ಹುದ್ದೆಯನ್ನು ಪ್ರಭಾರವಾಗಿ ನಿರ್ವಹಿಸುತ್ತಿದ್ದಾರೆ. ಇಲ್ಲಿ ಒಬ್ಬನೇ ಗ್ರಾಮ ಸಹಾಯಕ ಇಡೀ ಕಚೇರಿ ಕೆಲಸವನ್ನು ನಿರ್ವಹಿಸುತ್ತಿದ್ದು, ಅವರು ರಜೆ ಮಾಡಿದರೆ ಆ ದಿನ ಕಚೇರಿ ಬಂದ್‌!

ಮಾಸಾಶನಗಳು, ತಕರಾರು ಕೊಟೇ ಶನ್‌, ಜಾತಿ-ಆದಾಯ ಪ್ರಮಾಣ ಪತ್ರ, ಜನನ-ಮರಣ ಪ್ರಮಾಣ ಪತ್ರ, ಸಹಿತ ಪ್ರಾಕೃತಿಕ ವಿಕೋಪದಡಿ ಪರಿಹಾರ, ಸರಕಾರಿ ಸೌಲಭ್ಯಗಳು ಹೀಗೆ ಹತ್ತಾರು ಸಮಸ್ಯೆಗಳೊಂದಿಗೆ ಹೋಬಳಿ ಮಟ್ಟದ ಜನರು ಬರುತ್ತಿದ್ದು, ನಾಡಕಚೇರಿಯ ಅವ್ಯವಸ್ಥೆಯಿಂದಾಗಿ ಜನ ಸಮರ್ಪಕ ಸೇವೆ ಯಿಂದ ವಂಚಿತರಾಗಿದ್ದಾರೆ.

ಸಂಪೂರ್ಣ ಶಿಥಿಲಾವಸ್ಥೆ
ನಾಡಕಚೇರಿಗೆ ಬಾಡಿಗೆ ಕೋಣೆಯನ್ನು ಪಡೆದುಕೊಂಡಾಗ ಕೊಠಡಿ ವ್ಯವಸ್ಥಿತವಾಗಿಯೇ ಇತ್ತು. ಆದರೆ ಇಂದು ಕಟ್ಟಡದ ಈ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಛಾವಣಿ ಕಾಂಕ್ರಿಟ್ ಬೀಳುತ್ತಿದೆ. ಬಾಡಿಗೆ ನೀಡಿದವರೇ ಕಚೇರಿ ತೆರವಿಗೆ ಹಲವು ಬಾರಿ ಸೂಚಿ ಸಿದ್ದರೂ ಇಲಾಖೆ ಸ್ಥಳಾಂತರಕ್ಕೆ ಮುಂದಾಗುತ್ತಿಲ್ಲ.

ಜಾಗವಿದ್ದರೂ ಕಟ್ಟಡವಿಲ್ಲ
ವೇಣೂರು ಕಂದಾಯ ನಿರೀಕ್ಷಕರ ಕಚೇರಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿ ದಾಗ ದುರಸ್ತಿ ಕಾರ್ಯ ಮಾಡುವ ಬದಲು 2004ಲ್ಲಿ ಬಾಡಿಗೆ ಕೋಣೆಗೆ ಸ್ಥಳಾಂತರ ಮಾಡಲಾಗಿದೆ. ನಾಡ ಕಚೇರಿಗೆ ಸಂಬಂಧಿಸಿ 40 ಸೆಂಟ್ಸ್‌ ಜಾಗವಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣ ಆಗಬೇಕಿದೆ.

ಪ್ರಸ್ತಾವನೆ ಕಳುಹಿಸಿದೆ

ವೇಣೂರು ನಾಡಕಚೇರಿಗೆ ಸ್ವಂತ ಜಾಗವಿದ್ದರೂ ಕಟ್ಟಡವಿಲ್ಲದೆ ಬಾಡಿಗೆ ಕೊಠಡಿಯಲ್ಲಿರಬೇಕಾಗಿದೆ. ಹೊಸ ಕಟ್ಟಡದ ಬಗ್ಗೆ ಕಳೆದ ಬಾರಿಯೂ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಹೊಸ ಕಟ್ಟಡ ಅನುಮೋದನೆ ಗೊಂಡರೆ ಅನುಕೂಲ.
– ಪಾವಡಪ್ಪ ದೊಡ್ಡಮನಿ

ಕಂದಾಯ ನಿರೀಕ್ಷಕರು, ವೇಣೂರು ಹೋಬಳಿ

– ಪದ್ಮನಾಭ ವೇಣೂರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.