ವಿಟ್ಲ: ಗ್ರಾಮಸ್ಥರಿಂದ ಇತಿಹಾಸ ಪ್ರಸಿದ್ಧ ಕೋಟಿಕೆರೆ ದುರಸ್ತಿ
Team Udayavani, Jun 16, 2019, 5:00 AM IST
ವಿಟ್ಲ: ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದ್ದ ವಿಟ್ಲದ ಇತಿಹಾಸ ಪ್ರಸಿದ್ಧ ಕೋಟಿಕೆರೆಯ ತಡೆಗೋಡೆಯನ್ನು ಗ್ರಾಮಸ್ಥರು ಶ್ರಮದಾನದ ಮೂಲಕ ದುರಸ್ತಿ ಮಾಡಿದರು.
ನೂರು ವರ್ಷಗಿಂತಲೂ ಅಧಿಕ ಇತಿಹಾಸ ಹೊಂದಿರುವ, ವಿಟ್ಲದ ಅರಮನೆಗೆ ಸಂಬಂಧಿಸಿದ ಕೋಟಿಕೆರೆಯಲ್ಲಿ ಹೂಳು ತುಂಬಿದ್ದು, ಕೆರೆಯ ತಡೆಗೋಡೆ ಆಗಾಗ ಅಲ್ಲಲ್ಲಿ ಕುಸಿಯುತ್ತಿತ್ತು. ಈ ಬಗ್ಗೆ ಗಮನಹರಿಸಿದ ಕಾಶಿಮಠ ಸುತ್ತಮುತ್ತಲಿನ ಗ್ರಾಮಸ್ಥರು ದುರಸ್ತಿ ಕಾರ್ಯಕ್ಕೆ ಮುಂದಾದರು.
ಕಾಶಿ ಯುವಕ ಮಂಡಲದ ಗೌರವಾಧ್ಯಕ್ಷ ಬಾಬು ಕೆ.ವಿ. ನೇತೃತ್ವದಲ್ಲಿ 25ಕ್ಕಿಂತಲೂ ಅಧಿಕ ಗ್ರಾಮಸ್ಥರು ಶ್ರಮದಾನ ನಡೆಸಿದರು. ವಿಟ್ಲದ ಕೆಲವು ದಾನಿಗಳು ವಿವಿಧ ರೀತಿಯ ಸಹಕಾರ ನೀಡಿದರು. ಇದೀಗ ಬಿರುಕು ಬಿಟ್ಟ ತಡೆಗೋಡೆಗೆ ಕಲ್ಲು ಹಾಗೂ ಸಿಮೆಂಟ್ ಹಾಕುವ ಮೂಲಕ ಭದ್ರಪಡಿಸಲಾಗಿದೆ.
ಈಜುಪಟು ಕಾಶಿಮಠ ಈಶ್ವರ್ ಭಟ್, ಕಾಶಿ ಯುವಕ ಮಂಡಲದ ಅಧ್ಯಕ್ಷ ಕೇಶವ, ಮಾಜಿ ಅಧ್ಯಕ್ಷ ಪ್ರತಾಪ್, ವಿಟ್ಲ ಜೇಸಿಐ ಅಧ್ಯಕ್ಷ ಬಾಲಕೃಷ್ಣ, ವಿಶ್ವನಾಥ ಕೊಪ್ಪಳ, ವಿಶ್ವನಾಥ ಕಬ್ಬಿನಹಿತ್ತಿಲು, ಪ್ರವೀಣ್ ಪುಚ್ಚೆಗುತ್ತು, ಮಿಥುನ್, ಲಕ್ಷ್ಮಣ ಆರ್.ಎಸ್. ಮತ್ತಿತರರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ