ಕಾಮಗಾರಿಗಳ ಉದ್ಘಾಟನೆ, ಶೌಚಾಲಯಕ್ಕೆ ಶಂಕು


Team Udayavani, Oct 7, 2018, 3:11 PM IST

7-october-14.gif

ವಿಟ್ಲ: ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಪ.ಪಂ. ಅಧ್ಯಕ್ಷ ಅರುಣ ಎಂ. ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಕೆ. ಚಂದ್ರಕಾಂತಿ ಶೆಟ್ಟಿ, ಪ.ಪಂ. ಸದಸ್ಯರಾದ ಶ್ರೀಕೃಷ್ಣ ವಿಟ್ಲ, ವಿ. ರಾಮದಾಸ ಶೆಣೈ, ಉಷಾ ಕೃಷ್ಣಪ್ಪ ಕೆ., ಲೋಕನಾಥ ಶೆಟ್ಟಿ ಕೊಲ್ಯ, ಮಂಜುನಾಥ ಕಲ್ಲಕಟ್ಟ, ಇಂದಿರಾ ಅಡ್ಡಾಳಿ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ್‌ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಜಗದೀಶ್‌ ಪಾಣೆಮಜಲು ಮತ್ತಿತರರು ಉಪಸ್ಥಿತರಿದ್ದರು.

ಉದ್ಘಾಟನೆ
ವಿಟ್ಲ ಪ.ಪಂ.ಗೆ 2015-16ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಹಣಕಾಸು ಹಂಚಿಕೆ ಅನುದಾನದಡಿ ಮಂಜೂರಾದ 4 ಲಕ್ಷ ರೂ. ವೆಚ್ಚದ ವಿಟ್ಲ ಪ.ಪಂ. ವ್ಯಾಪ್ತಿಯ ನೆಲ್ಲಿಗುಡ್ಡೆ ಪಳೇರಿ ರಸ್ತೆ ಅಭಿವೃದ್ಧಿ, 4.18 ಲಕ್ಷ ರೂ. ವೆಚ್ಚದ ಪಳಿಕೆ ಜನತಾ ಕಾಲನಿ, ಚಂದಳಿಕೆ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ಧಿ, 1 ಲಕ್ಷ ರೂ. ವೆಚ್ಚದ ಉಕ್ಕುಡ ಬುಳೇರಿಕಟ್ಟೆಯಲ್ಲಿ ಹೈಮಾಸ್ಟ್‌ ಬೀದಿದೀಪ, 2017-18ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಹಣಕಾಸು ಉಳಿಕೆ ಅನುದಾನ ದಡಿ ಮಂಜೂರಾದ 5 ಲಕ್ಷ ರೂ. ವೆಚ್ಚದ ಮಾಮೇಶ್ವರ ಮತ್ತು ನೆಲ್ಲಿಗುಡ್ಡೆ ರಸ್ತೆ ಅಭಿವೃದ್ಧಿ, 2017-18ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಡಿ 3.10 ಲಕ್ಷ ರೂ. ವೆಚ್ಚದ 5ನೇ ವಾರ್ಡ್‌ನ ಪುಚ್ಚೆಗುತ್ತು ಕೆರೆ ಬಳಿ ರಸ್ತೆ ಅಭಿವೃದ್ಧಿ ಮುಂದುವರಿದ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಶಂಕುಸ್ಥಾಪನೆ 
ವಿಟ್ಲ ಪ.ಪಂ.ಗೆ 2017-18ನೇ ಸಾಲಿನ 14ನೇ ಹಣಕಾಸು ಯೋಜನೆ ಸಾಮಾನ್ಯ ಮೂಲ ಅನುದಾನದಡಿ ಮಂಜೂರಾದ 5.58 ಲಕ್ಷ ರೂ. ವೆಚ್ಚದ ಸಾರ್ವಜನಿಕ ಶೌಚಾಲಯಕ್ಕೆ ಮೇಗಿನಪೇಟೆಯಲ್ಲಿ ಶಂಕುಸ್ಥಾಪನೆ ಮಾಡಲಾಯಿತು. 5 ಲಕ್ಷ ರೂ. ವೆಚ್ಚದ ಮಾಮೇಶ್ವರ ಮತ್ತು ನೆಲ್ಲಿಗುಡ್ಡೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಲಾಯಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.