ಮಿನಿ ವಿಧಾನಸೌಧದ ಹಿಂಭಾಗದಲ್ಲಿ ತ್ಯಾಜ್ಯ ರಾಶಿ


Team Udayavani, Jan 16, 2019, 9:26 AM IST

16-january-14.jpg

ನಗರ : ತಾಲೂಕಿನ ಶಕ್ತಿಕೇಂದ್ರ ಪುತ್ತೂರು ಮಿನಿ ವಿಧಾನಸೌಧದ ಹಿಂಭಾಗ ರಾಶಿ ಬಿದ್ದಿದ್ದ ತ್ಯಾಜ್ಯ ರಾಶಿಯನ್ನು ತೆರವು ಮಾಡಲಾಗಿದೆ. ಆದರೆ ಮತ್ತೆ ಇಲ್ಲಿ ತ್ಯಾಜ್ಯ ತಂದು ಸುರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದರತ್ತ ಗಮನ ಹರಿಸುವ ಅಗತ್ಯವಿದೆ.

ಸಹಾಯಕ ಆಯುಕ್ತರ ಕಚೇರಿಯೂ ಮಿನಿ ವಿಧಾನಸೌಧದಲ್ಲಿ ಇರುವುದರಿಂದ ಇದು ಮೂರು ತಾಲೂಕುಗಳ ಶಕ್ತಿ ಕೇಂದ್ರ ಎಂದರೂ ತಪ್ಪಾಗಲಾರದು. ಈ ಮೂರು ತಾಲೂಕುಗಳ ಕಂದಾಯ ಸೇರಿದಂತೆ ಎಲ್ಲ ಕೆಲಸಗಳಿಗೂ ವೇಗ ತುಂಬಬೇಕಾಗಿರುವುದು ಇಲ್ಲಿಂದಲೇ. ಇಂತಹ ಶಕ್ತಿ ಕೇಂದ್ರವೇ ತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ, ಜನಸಾಮಾನ್ಯರಿಗೆ ಬುದ್ಧಿಮಾತು ಹೇಳುವುದು ಹೇಗೆ?

ಒಮ್ಮೆಗೆ ರಾಶಿ ಬಿದ್ದಿದ್ದ ತ್ಯಾಜ್ಯ ರಾಶಿಯನ್ನು ಅಧಿಕಾರಿಗಳೇನೋ ತೆರವು ಮಾಡಿಸಿದ್ದಾರೆ. ಆದರೆ ತೆರವು ಮಾಡಿಸಿದಷ್ಟೇ ವೇಗವಾಗಿ ಮತ್ತೆ ತ್ಯಾಜ್ಯ ಬಂದು ತುಂಬುತ್ತಿದೆ. ಇದೇ ಜಾಗದಲ್ಲಿ ತ್ಯಾಜ್ಯವನ್ನು ತಂದು ಸುರಿಯುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ತ್ಯಾಜ್ಯ ನಿರ್ವಹಣೆ ವಿಷಯವನ್ನು ಪುತ್ತೂರು ಮಿನಿ ವಿಧಾನ ಸೌಧದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇದೆ.

ಪುತ್ತೂರು ಪೇಟೆಯ ಅಂಗಡಿ, ಮನೆಗಳ ತ್ಯಾಜ್ಯವನ್ನು ಪ್ರತಿ ಎರಡು ದಿನಗಳಿಗೊಮ್ಮೆ ವಿಲೇವಾರಿ ಮಾಡಲಾಗುತ್ತಿದೆ. ಇದರಂತೆ ಮಿನಿ ವಿಧಾನಸೌಧದ ತ್ಯಾಜ್ಯವನ್ನು ಪ್ರತಿ ಎರಡು ದಿನಗಳಿಗೊಮ್ಮೆಯಾದರೂ ವಿಲೇ ಮಾಡಬೇಕು. ಹಾಗೆಂದು ಇದು ತ್ಯಾಜ್ಯ ಸಂಗ್ರಹಾಗಾರರ ಜವಾಬ್ದಾರಿ ಎಂದಲ್ಲ. ಸೌಧದ ಕಸವನ್ನು ಒಂದು ಬುಟ್ಟಿಯಲ್ಲಿ ತುಂಬಿಸಿಟ್ಟು, ಅದನ್ನು ತ್ಯಾಜ್ಯ ಸಂಗ್ರಹಕಾರರಿಗೆ ನೀಡುವ ಕೆಲಸವನ್ನು ಅಧಿಕಾರಿಗಳು ಹಾಗೂ ಸಿಬಂದಿಯೇ ನಿರ್ವಹಿಸಬೇಕು.

ತೆರವಿಗೆ ಸೂಚನೆ
ತ್ಯಾಜ್ಯ ರಾಶಿ ಬಿದ್ದಿರುವುದನ್ನು ನೋಡಿ, ತೆರವಿಗೆ ಸೂಚಿಸಿದ್ದೆ. ಮುಂದೆ ಪ್ರತಿ 2 ದಿನಗಳಿಗೊಮ್ಮೆ ತ್ಯಾಜ್ಯ ಕೊಂಡೊಯ್ಯುವಂತೆ ಸೂಚನೆ ನೀಡಿದ್ದೇನೆ.
– ಎಚ್.ಕೆ. ಕೃಷ್ಣಮೂರ್ತಿ
ಸಹಾಯಕ ಆಯುಕ್ತರು, ಪುತ್ತೂರು

ಸುದಿನ ವರದಿ
ಪುತ್ತೂರು ಮಿನಿ ವಿಧಾನಸೌಧದ ಹಿಂಬದಿ ತ್ಯಾಜ್ಯ ರಾಶಿ ಬಿದ್ದಿದ್ದು, ವಿಲೇವಾರಿಗೆ ಹಿನ್ನಡೆಯಾಗುತ್ತಿದೆ ಎನ್ನುವ ವರದಿಯನ್ನು ಜ. 8ರಂದು ‘ಉದಯವಾಣಿ’ ಸುದಿನ ಪ್ರಕಟಿಸಿತ್ತು. ಈ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು, ತತ್‌ಕ್ಷಣವೇ ತ್ಯಾಜ್ಯವನ್ನು ತೆರವು ಮಾಡಿಸಿದ್ದರು. ಆದರೆ ಕೆಲವು ದಿನಗಳಲ್ಲೇ ಮತ್ತದೇ ಸ್ಥಳದಲ್ಲಿ ತ್ಯಾಜ್ಯ ಸುರಿಯಲಾಗುತ್ತಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.