“ನೀರಿನ ಶುಲ್ಕ ವಸೂಲಿ ಕಡ್ಡಾಯ’
Team Udayavani, Jun 8, 2019, 5:50 AM IST
ಇಡ್ಕಿದು: ಇಡ್ಕಿದು ಗ್ರಾ.ಪಂ.ನ ಸಾಮಾನ್ಯ ಸಭೆ ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು. ಗ್ರಾ.ಪಂ. ವ್ಯಾಪ್ತಿಯಲ್ಲಿ ವೈಯಕ್ತಿಕ ನಳ್ಳಿ ನೀರಿನ ಮೀಟರ್ ಅಳವಡಿಸಿದ್ದು, ಮುಂದಿನ ತಿಂಗಳಿನಿಂದ ಕಡ್ಡಾಯವಾಗಿ ಮೀಟರ್ ರೀಡಿಂಗ್ ಮಾಡಿ ಕರ ವಸೂಲಿ ಮಾಡುವಂತೆ ನೀರಿನ ಕರ ವಸೂಲಿಗಾರರಿಗೆ ಸೂಚಿಸಲಾಯಿತು. ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳ ಚರಂಡಿಗಳನ್ನು ತುರ್ತಾಗಿ ದುರಸ್ತಿ ಮಾಡುವಂತೆ ನಿರ್ಣಯ ಕೈಗೊಳ್ಳಲಾಯಿತು.
ಆರೋಗ್ಯ ನೈರ್ಮಲ್ಯ ಸಮಿತಿಯನ್ನು ಆರೋಗ್ಯ ಇಲಾಖೆ ಮತ್ತು ಗ್ರಾ.ಪಂ. ಸದಸ್ಯರನ್ನು ಒಳಗೊಂಡಂತೆ ರಚಿಸಿ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ಜಿಲ್ಲಾ ಶುಶ್ರೂಷಣಾಧಿಕಾರಿ ಮಿಸ್ಸಿ ಅವರು ನೀಡಿದರು. ಮಳೆಗಾಲದಲ್ಲಿ ಬರಬಹುದಾದ ಡೆಂಗ್ಯೂ, ಚಿಕೂನ್ ಗುನ್ಯಾ ಮತ್ತು ಅತಿಸಾರ ಭೇದಿ ರೋಗಗಳ ಮುಂಜಾಗ್ರತಾ ಕ್ರಮಗಳನ್ನು ಆಶಾ ಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ತಿಳಿಹೇಳುವಂತೆ ಸೂಚಿಸಿದರು.
ಗ್ರಾ.ಪಂ. ಉಪಾಧ್ಯಕ್ಷ ಎಂ. ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರು, ಪಂ. ಸದಸ್ಯರಾದ ಜಯರಾಮ ಕಾರ್ಯಾಡಿಗುತ್ತು, ಚಿದಾನಂದ ಪೆಲತ್ತಿಂಜ, ಸತೀಶ್ ಕೆಂರ್ದೆಲು, ಕೇಶವ ಉರಿಮಜಲು, ರಮೇಶ ಪೂಜಾರಿ ಸೂರ್ಯ, ಜನಾರ್ದನ ಕಂಪ, ಕರುಣಾಕರ ಅಡ್ಯಾಲು, ವಸಂತಿ ಒಡ್ಯಪೆì, ಜಗದೀಶ್ವರಿ ಕುವೆತ್ತಿಲ, ಬೇಬಿ ಸೂರ್ಯ, ಪ್ರೇಮಾ ಅರ್ಕೆಚ್ಚಾರು, ರಸಿಕಾ ಕಂಬಳದಡ್ಡ, ರತ್ನಾ ಸೇಕೆಹಿತ್ಲು, ಶಾರದಾ ಅಡ್ಯಾಲು ಉಪಸ್ಥಿತರಿದ್ದರು.
ಪಿಡಿಒ ಗೋಕುಲ್ದಾಸ್ ಭಕ್ತ ಸ್ವಾಗತಿಸಿದರು. ಕಾರ್ಯದರ್ಶಿ ಎ.ಬಿ. ಅಜಿತ್ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ