ಪ್ರತಿ ಮಳೆಗಾಲದಲ್ಲೂ ಸಂಕ ಕಟ್ಟಬೇಕು ಇಲ್ಲಿ !


Team Udayavani, Jun 5, 2019, 6:00 AM IST

E-18

ಕಡಬ: ಮಳೆಗಾಲ ಆರಂಭವಾಗುತ್ತದೆ ಎನ್ನುವಾಗಲೇ ಬಿಳಿನೆಲೆ ಗ್ರಾಮದ ಕಾಡಂಚಿನ ಪುತ್ತಿಲ ಬೈಲಡ್ಕ ಭಾಗದ ಜನರ ಎದೆಯಲ್ಲಿ ನಡುಕ ಶುರುವಾಗುತ್ತದೆ. ಏಕೆಂದರೆ, ಸೇತುವೆ ಇಲ್ಲದ ಇಲ್ಲಿನ ಭಾಗ್ಯ ಹೊಳೆಯನ್ನು ಮಳೆಗಾಲದಲ್ಲಿ ದಾಟುವುದೇ ಸಾಹಸದ ಕೆಲಸ. ಮಳೆಗಾಲದಲ್ಲಿ ಉಕ್ಕಿ ಹರಿಯುವ ಈ ಹೊಳೆಯನ್ನು ದಾಟಲು ಸ್ಥಳೀಯರೇ ನಿರ್ಮಿಸುವ ಅಡಿಕೆ ಮರದ ಕಾಲು ಸಂಕವೇ ಸಂಪರ್ಕ ಸೇತು.

ಬಿಳಿನೆಲೆ ಗ್ರಾಮದದಲ್ಲಿ ಹರಿಯುವ ಭಾಗ್ಯ ಹೊಳೆಗೆ ಉದ್ಮಯ ಎನ್ನುವಲ್ಲಿ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. 50ಕ್ಕೂ ಹೆಚ್ಚು ಮನೆಗಳ ಜನರು, ಶಾಲಾ ವಿದ್ಯಾರ್ಥಿಗಳು ಸೇತುವೆಯಿಲ್ಲದೆ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಹೊಳೆ ದಾಟುತ್ತಿದ್ದಾರೆ.

ಅಡಿಕೆ ಮರದ ಕಾಲು ಸಂಕವೇ ಗತಿ
ವರ್ಷದ ಬೇಸಗೆಯ 3 ತಿಂಗಳು ಹೊರತುಪಡಿಸಿ ಉಳಿದ ದಿನಗಳಲ್ಲಿ ಜನತೆ ಹೊರ ಜಗತ್ತಿನ ಸಂಪರ್ಕಕ್ಕಾಗಿ ತಾವೇ ನಿರ್ಮಿಸುವ ಅಡಿಕೆ ಮರದ ತೂಗು ಸೇತುವೆ ಮಾದರಿಯ ಕಾಲು ಸಂಕವನ್ನೇ ಆಶ್ರಯಿಸಬೇಕಿದೆ. ಅರ್ಗಿನಿ, ಅಮೈ, ಬೈಲು ಪ್ರದೇಶದ ಜನರು ಬಿಳಿನೆಲೆ ಮುಖಾಂತರ ಕಡಬ, ಸುಬ್ರಹ್ಮಣ್ಯ ಸಂಪರ್ಕಿಸಲು ಭಾಗ್ಯ ಹೊಳೆಯನ್ನು ದಾಟಿ ಮುಂದುವರಿಯಬೇಕಾಗಿದೆ.

ದಶಕಗಳ ಬೇಡಿಕೆಗಿಲ್ಲ ಮನ್ನಣೆ
ಇಲ್ಲೊಂದು ಸರ್ವ ಋತು ಸೇತುವೆ ಬೇಕೆಂದು 10 ವಷಗಳಿಂದ ಈ ಭಾಗದ ಸಂಸದರಿಗೆ ಶಾಸಕರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದಾರೆ. ಭರವಸೆ ಮಾತ್ರ ಇದುವರೆಗೂ ಈಡೇರಿಲ್ಲ. ಪ್ರತಿ ವರ್ಷ ಇಲ್ಲಿನ ಜನರು ಹಣ ಹೊಂದಿಸಿ 20 ಸಾವಿರ ರೂ. ವೆಚ್ಚದಲ್ಲಿ ಅಡಿಕೆ ಮರದ ಕಾಲು ಸಂಕ ನಿರ್ಮಿಸುತ್ತಾರೆ. ಹೊಳೆಯ ಎರಡೂ ಬದಿಗಳಲ್ಲಿರುವ ದೊಡ್ಡ ಮರಗಳಿಗೆ ಕಬ್ಬಿಣದ ರೋಪ್‌ ಆಳವಡಿಸಿ ಅಡಿಕೆ ಮರದಿಂದ ಪಾಲ ನಿರ್ಮಿಸಿದರೆ ಅದು ಒಂದು ವರ್ಷ ಮಾತ್ರ ಪ್ರಯೋಜನಕ್ಕೆ ಸಿಗುತ್ತದೆ. ಮಳೆಗಾಲ ಕಳೆದಾಗ ಕಬ್ಬಿಣದ ರೋಪ್‌ ತುಕ್ಕು ಹಿಡಿದು ಅಡಿಕೆ ಮರ ಶಿಥಿಲಗೊಂಡು ಮುಂದಿನ ವರ್ಷ ಹೊಸದಾಗಿ ಸೇತುವೆ ನಿರ್ಮಿಸಬೇಕಾದ ಅನಿವಾರ್ಯತೆ ಇಲ್ಲಿದೆ.

ಸ್ಥಳೀಯರ ಮನವಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್‌. ಅಂಗಾರ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಸೇತುವೆ ನಿರ್ಮಾಣಕ್ಕೆ ಸುಮಾರು 75 ಲಕ್ಷ ರೂ. ಅನುದಾನದ ಅಗತ್ಯವಿರುವುದರಿಂದ ಒಂದಷ್ಟು ಸಮಯ ಬೇಕಾಗಬಹುದು ಎನ್ನುವುದು ಅವರ ಅಭಿಪ್ರಾಯ.

ಕಬ್ಬಿಣದ ರೋಪ್‌ ಅಳವಡಿಸಿ ನಿರ್ಮಿಸಲಾಗಿರುವ ಈ ಕಾಲು ಸಂಕದಲ್ಲಿ ಸಂಚರಿಸುವುದು ಅಪಾಯಕಾರಿಯೇ ಸೈ. ನಡೆದಾಡುವಾಗ ತೂಗುವ ಈ ಕಾಲು ಸಂಕದಲ್ಲಿ ಪರಿಣತರು ಮಾತ್ರ ಸಂಚರಿಸಲು ಸಾಧ್ಯ. ಮಕ್ಕಳು ಹಾಗೂ ವೃದ್ಧರು ದಾಟಬೇಕಾದರೆ ಬೇರೆಯವರ ಸಹಾಯ ಅತ್ಯಗತ್ಯ. ಈ ಹಿಂದೆ ಕೆಲವರು ಹೊಳೆಗೆ ಬಿದ್ದ ಘಟನೆಗಳೂ ವರದಿಯಾಗಿವೆ. ಬೇಸಗೆಯಲ್ಲಿ ವಾಹನಗಳನ್ನು ಪ್ರಯಾಸದಿಂದ ಹೊಳೆ ದಾಟಿಸಿ ಪ್ರಯಾಣಿಸುವ ಸ್ಥಳೀಯರು ಹೊಳೆಯ ಬದಿಯ ಶೆಡ್‌ಗಳಲ್ಲಿ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಮನೆ ತಲುಪುತ್ತಾರೆ.

 ಬೇಡಿಕೆ ಈಡೇರಿಸಿ
ಹಲವು ವರ್ಷಗಳಿಂದ ಭಾಗ್ಯ ಹೊಳಗೆ ಸರ್ವಋತು ನಿರ್ಮಿಸಬೇಕೆಂದು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು, ವೃದ್ಧರು ಈ ಕಾಲು ಸಂಕವನ್ನು ದಾಟಲು ಹರಸಾಹಸ ಪಡಬೇಕಾಗುತ್ತದೆ. ಅನಾರೋಗ್ಯ ಪೀಡಿತರನ್ನು ಕರೆದೊಯ್ಯುವುದೂ ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಇದೆ. ಆದುದರಿಂದ ಜನಪ್ರತಿನಿಧಿಗಳು ಜನರ ಬೇಡಿಕೆಯನ್ನು ಈಡೇರಿಸಬೇಕಿದೆ.
– ವಿಜಯಕುಮಾರ್‌ ಎರ್ಕ, ಸ್ಥಳೀಯ ಮುಂದಾಳು

ಮನವಿ ಬಂದಿಲ್ಲ
ಸೇತುವೆ ಇಲ್ಲದೇ ಇರುವುದರಿಂದ ಈ ಭಾಗದ ಜನರಿಗೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ. ಆದರೆ ಪಂಚಾಯತ್‌ಗೆ ಯಾವುದೇ ಮನವಿ ಸಲ್ಲಿಕೆಯಾಗಿಲ್ಲ. ಮಳೆಗಾಲದಲ್ಲಿ ತುರ್ತು ಸಂದರ್ಭಗಳಲ್ಲಿ ಜನರಿಗೆ ಸುತ್ತುಬಳಸಿ ಬರಲು ಕಚ್ಚಾ ರಸ್ತೆಯ ಸಂಪರ್ಕವಿದೆ. ಸೇತುವೆ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನ ಅಗತ್ಯವಿರುವುದರಿಂದ ಪಂಚಾಯತ್‌ ಮಟ್ಟದಲ್ಲಿ ಅದು ಸಾಧ್ಯವೂ ಇಲ್ಲ. ಜನರ ಬೇಡಿಕೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು.
– ಶೀನ ಎ. ಪ್ರಭಾರ ಪಿಡಿಒ, ಬಿಳಿನೆಲೆ ಗ್ರಾ.ಪಂ.

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.