ಬಿಜೆಪಿ ಸೈಕ್ಲೋಥಾನ್ ಸೈಕಲ್ ರಾಲಿ
Team Udayavani, Apr 15, 2019, 6:30 AM IST
ಉಡುಪಿ: ನರೇಂದ್ರ ಮೋದಿಯ ಅಭಿಮಾನಿಗಳು ದೇಶಾದ್ಯಂತ ನಡೆಸುವ “ಮೈ ಭಿ ಚೌಕೀದಾರ್’ ಆಂದೋಲನದ ಅಂಗವಾಗಿ ಉಡುಪಿಯಲ್ಲಿಯೂ ಶುಕ್ರವಾರ ಚೌಕೀದಾರ್ ಸೈಕ್ಲೋಥಾನ್ನ್ನು ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜಿಸಲಾಯಿತು.
ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ಹಾರೈಸಿ ಬಿಜೆಪಿ ಯುವಮೋರ್ಚಾ ವತಿಯಿಂದ ತಾಲೂಕು ಕಚೇರಿ ಬಳಿಯಿಂದ ಅಜ್ಜರಕಾಡು, ಬ್ರಹ್ಮಗಿರಿ, ಜೋಡುಕಟ್ಟೆ, ಡಯನಾ ಸರ್ಕಲ್ದವರೆಗೆ ನಡೆದ ಸೈಕ್ಲೋಥಾನ್ ಸೈಕಲ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕೆ.ರಘುಪತಿ ಭಟ್ ಅವರು, ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ರಥಮ ಬಾರಿಗೆ ಈ ಜಾಥಾ ನಡೆಯುತ್ತಿದೆ ಎಂದರು.
ಮೋದಿಯವರ ಬೆಂಬಲಕ್ಕಾಗಿ ಕಳೆದ ವರ್ಷ ಕಾಶ್ಮೀರದಿಂದ ಕನ್ಯಾಕುಮಾರಿ, ಪಶ್ಚಿಮಬಂಗಾಳದವರೆಗೆ 14,195 ಕಿ.ಮೀ. ಓಡಿ ಯಶಸ್ವಿಯಾದ ಆ್ಯತ್ಲೀಟ್ ಮಧ್ಯಪ್ರದೇಶದ ಸಮೀರ್ ಸಿಂಗ್ ಮಾತನಾಡಿ, ನರೇಂದ್ರ ಮೋದಿ ನಮಗೆ ಎಷ್ಟು ಅಗತ್ಯ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು. ದೇಶಾದ್ಯಂತ 50 ನಗರಗಳಲ್ಲಿ ಮೋದಿ ಪರ ಪ್ರಚಾರ ನಡೆಸುತ್ತಿದ್ದೇವೆ. 19ನೆಯ ದಿನ ಇದಾಗಿದೆ ಎಂದು ಸಮೀರ್ ಸಿಂಗ್ ಹೇಳಿದರು.
ನಟಿ ಸ್ನೇಹಾ ಸಿಂಗ್ ಮಾತನಾಡಿ, ಮಾ. 25ಕ್ಕೆ ದಿಲ್ಲಿಯ ಇಂಡಿಯಾಗೇಟ್ನಿಂದ ಈ ರ್ಯಾಲಿ ಆರಂಭಗೊಂಡಿದು,ª ಮೇ 13ಕ್ಕೆ ಅಮೃತ್ಸರದಲ್ಲಿ ರ್ಯಾಲಿ ಕೊನೆಗೊಳ್ಳಲಿದೆ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದು ನಮ್ಮ ಉದ್ದೇಶ ಎಂದರು.
ಬಿಜೆಪಿ ಮುಖಂಡರಾದ ಯಶ್ಪಾಲ್ ಸುವರ್ಣ, ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಪ್ರತಾಪ್ ಶೆಟ್ಟಿ, ದಿನಕರ ಬಾಬು ಸಹಿತ ಹಲವಾರು ಮಂದಿ ಬಿಜೆಪಿ ಕಾರ್ಯ ಕರ್ತರು ಉಪಸ್ಥಿತರಿದ್ದರು. ಸುಮಾರು 200ರಷ್ಟು ಸೈಕಲ್ಗಳಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ