ಬೋಟ್ ನಾಪತ್ತೆ: ಗೃಹ ಸಚಿವರಿಗೆ ಮನವಿ
Team Udayavani, Jan 4, 2019, 5:32 AM IST
ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟನ್ನು ಶೀಘ್ರ ಪತ್ತೆಹಚ್ಚುವಂತೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಗುರುವಾರ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.
ಮನವಿಗೆ ಸ್ಪಂದಿಸಿದ ಗೃಹಸಚಿವರು ಕೂಡಲೇ ರಕ್ಷಣಾ ಕಾರ್ಯದರ್ಶಿಗಳಿಗೆ ಕೇಂದ್ರ ಸರಕಾರದಿಂದಲೇ ಎಲ್ಲಾ ರೀತಿಯ ತನಿಖೆ ನಡೆಸಿ ಕಾಣೆಯಾದ ಬೋಟ್ ಮತ್ತು ಮೀನುಗಾರರನ್ನು ಪತ್ತೆಹಚ್ಚುವಂತೆ ಸೂಚಿಸಿದರು. ಮಹಾರಾಷ್ಟ್ರ, ಗೋವಾ ಗಡಿ ಮತ್ತು ಗುಜರಾತ್ ಗಡಿಯಲ್ಲೂ ಮತ್ತು ಸಮುದ್ರ ಸೇರಿದಂತೆ ಸಂಶಯಾಸ್ಪದವಾಗಿರುವ ಪ್ರತಿ ಕಡೆಗಳಲ್ಲೂ ಪತ್ತೆಹಚ್ಚುವ ಕಾರ್ಯ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದರು.
ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆ ಅಧ್ಯಕ್ಷ ವಿನಯ್ ಕರ್ಕೇರ, ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬೆಂಗಳೂರಿನ ಶಿವಲಿಂಗಪ್ಪ, ಮೊಗವೀರ ಸಂಘಟನೆಯ ಮುಂದಾಳು ರಾಘವೇಂದ್ರ ಮೊದಲಾದವರು ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?