ಉಡುಪಿಯಲ್ಲಿ ಮಂಡೂಕ ಕಲ್ಯಾಣೋತ್ಸವ ಸಂಪನ್ನ
ಮಳೆ ತರಲಿದೆಯೇ ಹೊಸ ಜೋಡಿ ...
Team Udayavani, Jun 8, 2019, 12:25 PM IST
ಉಡುಪಿ: ಮೆರವಣಿಗೆ ವಾದ್ಯ ಘೋಷಗಳೊಂದಿಗೆಆಗಮಿಸಿದ ಮಂಡೂಕಜೋಡಿಗೆ ಕಲ್ಯಾಣ ಶನಿವಾರ ಮಧ್ಯಾಹ್ನ12.05ಕ್ಕೆ ಕಿದಿಯೂರು ಹೊಟೇಲ್ ವಾಹನ ನಿಲುಗಡೆ ಪ್ರಾಂಗಣದಲ್ಲಿ ಸಂಪನ್ನಗೊಂಡಿದೆ.
ಬೆಳಗ್ಗೆ 11ಕ್ಕೆ ಮಾರುತಿ ವೀಥಿಕಾದಲ್ಲಿರುವ ನಾಗರಿಕ ಸಮಿತಿಯ ಕಚೇರಿಯಿಂದ ಹೊರಟ ದಿಬ್ಬಣ ಹಳೆ ಡಯಾನ ವೃತ್ತ, ಕವಿ ಮುದ್ದಣ ಮಾರ್ಗದ ಮೂಲಕ ಕಲ್ಯಾಣ ಮಂಟಪಕ್ಕೆ ಸಾಗಿ ಬಂದಿತು.
ಮಳೆಯ ಕೊರತೆ ಎದುರಿಸುತ್ತಿರುವ ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದೇವಸ್ಥಾನಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಅದರೊಂದಿಗೆ ಶನಿವಾರ ‘ಮಂಡೂಕ ಪರಿಣಯ'(ಕಪ್ಪೆ ಮದುವೆ) ನಡೆಸಲಾಗಿದೆ.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಮತ್ತು ಪಂಚರತ್ನಾ ಸೇವಾ ಟ್ರಸ್ಟ್ ಈ ಬಾರಿಯ ಕಪ್ಪೆ ಮದುವೆ ಆಯೋಜನೆ ಮಾಡಿತ್ತು.
ಹೆಣ್ಣು ಕಪ್ಪೆಯನ್ನು ಕೊಳಲಗಿರಿ ಕೀಳಿಂಜೆಯಿಂದ ಹಾಗೂ ಗಂಡು ಕಪ್ಪೆಯನ್ನು ಉಡುಪಿ ಕಲ್ಸಂಕದಿಂದ ತರಲಾಗಿತ್ತು. ಹೆಣ್ಣು ಕಪ್ಪೆಗೆ ವರ್ಷಾ ಎಂದೂ, ಗಂಡು ಕಪ್ಪೆಗೆ ವರುಣ ಎಂದೂ ನಾಮಕರಣ ಮಾಡಲಾಗಿತ್ತು. ಮಳೆಗಾಗಿ ಪ್ರಾರ್ಥನೆಯೇ ಉಡುಗೊರೆ ಎಂಬ ಒಕ್ಕಣೆ ಮದುವೆ ಆಮಂತ್ರಣ ಪತ್ರಿಕೆಯಲ್ಲಿತ್ತು.
ಕಪ್ಪೆಗಾಗಿ ಹುಡುಕಾಟ
ಕಪ್ಪೆಗಳ ಸಂತತಿ ಕಡಿಮೆಯಾಗಿರುವುದರಿಂದ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಅವರು ಕಪ್ಪೆಗಳನ್ನು ತರಲು ಒಂದು ವಾರಗಳ ಕಾಲ ಹುಡುಕಾಟ ನಡೆಸಿದ್ದಾರೆ. ಅನಂತರ ಅವುಗಳನ್ನು ಪ್ರಸಿದ್ಧ ಆಸ್ಪತ್ರೆಯ ಲ್ಯಾಬ್ನಲ್ಲಿ ಪರೀಕ್ಷೆಗೊಳಪಡಿಸಿ ಗಂಡು ಯಾವುದು, ಹೆಣ್ಣು ಯಾವುದು ಎಂಬುದನ್ನು ಗುರುತಿಸಿದ್ದಾರೆ.
ಈ ಹಿಂದೆಯೂ ನಿತ್ಯಾನಂದ ಒಳಕಾಡು ಅವರು ಮಳೆ ಕೊರತೆ ಕಾಣಿಸಿಕೊಂಡಾಗ ಕಪ್ಪೆಗಳಿಗೆ ಮದುವೆ ಮಾಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?