ಕೊರೆತ ತಡೆಗೆ ಗೇಬಿಯನ್‌ ಗೋಡೆ ಪ್ರಸ್ತಾವ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್

Team Udayavani, Jul 19, 2019, 5:00 AM IST

t-53

ಪಡುಬಿದ್ರಿ: ಪ್ರವಾಸೀ ಆದ್ಯತೆಯ ಬ್ಲೂ ಫ್ಲ್ಯಾಗ್ ಬೀಚ್ಗಾಗಿ ಶೇ. 64ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಸಮುದ್ರ ಕೊರೆತದಿಂದ ರಕ್ಷಿಸಿಕೊಳ್ಳಲು ಇದುವರೆಗೆ ಪ್ರಸ್ತಾವಿಸಿರದ ಗೇಬಿಯನ್‌ ಗೋಡೆಯ ರಚನೆ ಇನ್ನಷ್ಟೇ ಆಗಬೇಕಿದೆ.

ಪ್ರವಾಸೋದ್ಯಮ ಇಲಾಖೆಯ ಸುಪರ್ದಿಯಲ್ಲಿ ಕೇಂದ್ರ ಸರಕಾರದ ಸುಮಾರು 8 ಕೋಟಿ ರೂ. ವೆಚ್ಚದ ಬ್ಲೂ ಫ್ಲ್ಯಾಗ್ ಬೀಚ್ ಯೋಜನೆಗೆ ರಾಜ್ಯ ಸರಕಾರವು ಹಸಿರು ನಿಶಾನೆಯನ್ನು ಈಗಾಗಲೇ ತೋರಿದೆ. ಗುತ್ತಿಗೆದಾರ ಕಂಪೆನಿಯು ಈ ಬಾರಿಯ ಮಳೆಗಾಲದಲ್ಲಿ ಸತತವಾಗಿ ಸಂಭವಿಸುತ್ತಿರುವ ಸಮುದ್ರ ಕೊರೆತ, ರಸ್ತೆಗೆ ಆಗುತ್ತಿರುವ ಹಾನಿಯನ್ನು ಗಮನಿಸಿ ಗೇಬಿಯನ್‌ ಗೋಡೆಗೆ ಪ್ರಾಶಸ್ತ್ಯ ನೀಡಿದೆ. ಈ ಕುರಿತ ಪ್ರಸ್ತಾವನೆಗೆ ಸರಕಾರದ ಅನುಮೋದನೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಇಲಾಖೆಯ ಅನುಮೋದನೆಯೊಂದಿಗೆ ಸೀಕಾಮ್‌(ಸೊಸೈಟಿ ಫಾರ್‌ ಇಂಟಗ್ರೇಟೆಡ್‌ ಕೋಸ್ಟಲ್ ಮ್ಯಾನೇಜ್‌ಮೆಂಟ್) ಮೂಲಕ ಈ ಯೋಜನೆಯನ್ನು ಪಡುಬಿದ್ರಿ ಬೀಚ್‌ನ ಎಂಡ್‌ ಪಾಯಿಂಟ್‌ನಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಗುರ್ಗಾಂವ್‌ನ ಎ ಟುಝಡ್‌ ಕಂಪೆನಿಯು ಬ್ಲೂ ಫ್ಲ್ಯಾಗ್ಬೀಚ್‌ನ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಉಸ್ತುವಾರಿ ವಹಿಸಿಕೊಂಡಿದೆ.

ಮಳೆಗಾಲವಾಗಿರುವುದರಿಂದ ಕಾಮಗಾರಿಗಳು ನಿಧಾನ ವಾಗಿವೆ. ಮಣ್ಣು ತುಂಬಿಸುವಿಕೆ, ಬಿದಿರಿನ ಕಾಯಕಗಳು, ವಾಕಿಂಗ್‌ ಬೇ, ಮಕ್ಕಳ ಆಟದ ಅಂಗಣ ಕಾಮಗಾರಿಗಳು ಇನ್ನಷ್ಟೇ ಆಗಬೇಕಿವೆ.

ವಾಕಿಂಗ್‌ ಬೇ ಸಮುದ್ರಪಾಲು
ಸಮುದ್ರ ತೀರದಲ್ಲಿದ್ದ ಕಾಂಡ್ಲಾ ಸಸ್ಯಗಳನ್ನು ಕೀಳಲಾಗಿದ್ದು ಯೋಜನಾ ಪ್ರದೇಶಕ್ಕೆ ಸಮುದ್ರ ತೀರದ ಪೂರ್ಣ ನೋಟ ಲಭ್ಯವಾಗುವಂತೆ ಮಾಡಲಾಗಿತ್ತು. ‘ವಾಕಿಂಗ್‌ ಬೇ’ಗಾಗಿ ಪ್ರಾಥಮಿಕ ಹಂತದ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಇದು ಸಮುದ್ರ ಕೊರೆತಕ್ಕೆ ನಾಶವಾಗಿದೆ.

ಏನಿದು ಗೇಬಿಯನ್‌ ಗೋಡೆ?
ಗೇಬಿಯನ್‌ ಗೋಡೆ ಅಗತ್ಯ ಎಂಬುದನ್ನು ಜಿಲ್ಲಾಡಳಿತವೂ ಮನಗಂಡಿದೆ. ಹೆದ್ದಾರಿ ಇಕ್ಕೆಲಗಳ ಗುಡ್ಡಗಳು ಜರಿಯದಂತೆ ಕಬ್ಬಿಣದ ಜಾಲರಿ ಅಳವಡಿಸುವ ಮಾದರಿಯಲ್ಲೇ ಸಮುದ್ರದಲೆಗಳಿಂದ ಬೀಚನ್ನು ರಕ್ಷಿಸುವ ನಿಟ್ಟಿನಲ್ಲಿ ಕಬ್ಬಿಣದ ಜಾಲರಿಯೊಳಕ್ಕೆ ಕಲ್ಲುಬಂಡೆಗಳನ್ನು ಅಳವಡಿಸಿ ರಚಿಸಲಾಗುವ ಗೋಡೆಯನ್ನು ಗೇಬಿಯನ್‌ ಗೋಡೆ ಎನ್ನಲಾಗುತ್ತದೆ.

ಗೇಬಿಯನ್‌ ಗೋಡೆಗೆ 10 ಲಕ್ಷ ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿಕೊಡಲಾಗಿದೆ. ಅನುಮತಿ ಇನ್ನಷ್ಟೇ ಸಿಗಬೇಕಿದೆ. ಕೆಆರ್‌ಐಡಿಎಲ್ ಪ್ರವಾಸೋದ್ಯಮ ಇಲಾಖೆಯ 80 ಲಕ್ಷ ರೂ.ಗಳ ವಿವಿಧ ಕಾಮಗಾರಿಗಳನ್ನು ಈಗಾಗಲೇ ಬ್ಲೂ ಫ್ಲ್ಯಾಗ್ ಬೀಚ್ ಪ್ರದೇಶದಲ್ಲಿ ಕೈಗೆತ್ತಿಕೊಂಡಿದೆ.
– ಕೃಷ್ಣ ಹೆಬ್ಸೂರ್‌,ಕೆಆರ್‌ಐಡಿಎಲ್ ಕಾರ್ಯಕಾರಿ ಎಂಜಿನಿಯರ್‌

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.