ಕಲ್ಲುಗಳ ನಾಡು ಕಾರ್ಕಳದಲ್ಲಿ  ಉತ್ತಮವಾಗಿದೆ ನೀರ ಸೆಲೆ


Team Udayavani, Feb 4, 2019, 5:11 AM IST

karkal-w.jpg

ಕಾರ್ಕಳ: ಕರಿಗಲ್ಲಿನ ನಾಡು ಕಾರ್ಕಳದಲ್ಲಿ ಜೀವ ಜಲದ ಸೆಲೆ(ಒರತೆ)ಗೆ ಕೊರತೆಯಾಗದೇ ಸದ್ಯ ಬಾವಿಗಳಲ್ಲಿ ನೀರಿನ ಮಟ್ಟವು ಉತ್ತಮ ಸ್ಥಿತಿಯಲ್ಲಿದೆ.

ತಾಲೂಕಿನ ಸ್ವರ್ಣಾ ನದಿ ಹೊರತುಪಡಿಸಿದಲ್ಲಿ ಬೇರೆ ನದಿಗಳ ನೀರಿನ ಮೂಲವಿಲ್ಲ. ರಾಮಸಮುದ್ರ, ಆನೆಕೆರೆ, ಸಿಗಡಿಕೆರೆ ಇವು ಕಾರ್ಕಳಕ್ಕೆ ಪ್ರಕೃತಿಯೇ ನೀಡಿದ ವರದಾನ. ಉಳಿದಂತೆ ಕೆರೆ, ಬಾವಿ, ಕೊಳವೆ ಬಾವಿಗಳೇ ನೀರಿನ ಆಸರೆ. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಬೀಳುವ ಪ್ರದೇಶವಾಗಿರುವ ಕಾರ್ಕಳ ತಾಲೂಕಿನಲ್ಲಿ 2017ರಲ್ಲಿ 4,800 ಮೀ.ಮೀ. ಮಳೆಯಾಗಿದ್ದು, 2018ರಲ್ಲಿ 4,003 ಮೀ.ಮೀ. ಮಳೆ ಸುರಿದಿದೆ.

ಪುರಸಭಾ ವ್ಯಾಪ್ತಿಯ ಚಿತ್ರಣ
ಸ್ವರ್ಣಾ ನದಿ ನೀರನ್ನು ಮುಂಡ್ಲಿಯಿಂದ 125 ಎಚ್‌ಪಿ ಪಂಪ್‌ಸೆಟ್‌ ಬಳಸಿ ರಾಮ ಸಮುದ್ರ ಬಳಿಯಿರುವ ನೀರು
ಶುದ್ಧೀಕರಣ ಘಟಕಕ್ಕೆ ಪ್ರತಿದಿನ 3 ಎಂಎಲ್‌ಡಿ (ಮೆಗಾ ಲೀಟರ್‌ ಪರ್‌ ಡೇ. 1 ಎಂಎಲ್‌ಡಿ =10 ಲಕ್ಷ ಲೀ.) ನೀರು ಪೂರೈಸಲಾಗುತ್ತಿದ್ದು, ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳ 4,558 ಕುಟುಂಬಗಳು ನೀರಿನ ಸಂಪರ್ಕ ಪಡೆದಿವೆ.
ಮುಂಡ್ಲಿ ಯೋಜನೆಯಲ್ಲದೇ ಪುರಸಭಾ ವ್ಯಾಪ್ತಿಯಲ್ಲಿ 13 ಕೊಳವೆ ಬಾವಿ ಇವೆ. ಅನೇಕ ಖಾಸಗಿ ಬಾವಿ, ಕೊಳವೆ ಬಾವಿಗಳಿವೆ. 5 ಎಕರೆ ವಿಸ್ತೀರ್ಣದ ಆನೆಕೆರೆಯ ಅಲ್ಪ ಭಾಗದ ಹೂಳನ್ನು ಮತ್ತು 3 ಎಕರೆ ವಿಸ್ತೀರ್ಣದ ಸಿಗಡಿ ಕೆರೆಯಲ್ಲಿ ತುಂಬಿದ್ದ ಪೂರ್ತಿ ಹೂಳನ್ನು ತೆಗೆದು ನೀರು ಸಮೃದ್ಧವಾಗಿ ತುಂಬುವಂತೆ ಮಾಡಲಾಗಿದೆ. ಇದರಿಂದ ಈ ಭಾಗದ ಬಾವಿಗಳಲ್ಲಿನ ನೀರಿನ ಮಟ್ಟ ಗಣನೀಯವಾಗಿ ವೃದ್ಧಿಸಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಸ ಯೋಜನೆಗಳು
2018ರಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಬವಣೆ ಅಷ್ಟಾಗಿ ಕಂಡು ಬರದಿದ್ದರೂ ಮುಂಜಾಗ್ರತೆ ನಿಟ್ಟಿನಲ್ಲಿ ಹಿರಿಯಂಗಡಿಯಲ್ಲಿ 20 ಲಕ್ಷ ರೂ., ಹವಾಲ್ದಾರ್‌ ಬೆಟ್ಟಿನಲ್ಲಿ 10.25 ಲಕ್ಷ ರೂ., ತೆಳ್ಳಾರು 19ನೇ ಅಡ್ಡರಸ್ತೆಯಲ್ಲಿ 19.6 ಲಕ್ಷ ರೂ,ಕಾಬೆಟ್ಟು ನೇತ್ರಾವತಿ ರಸ್ತೆಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಬಾವಿ ನಿರ್ಮಿಸಲಾಗಿದೆ. ಜೋಗಲ್‌ ಬೆಟ್ಟಿನಲ್ಲಿಒಂದು ಬಾವಿ, ಕಲ್ಲೊಟ್ಟೆ ರಸ್ತೆಯಲ್ಲಿ 2 ಕೊಳವೆ ಬಾವಿ ಕೊರೆಯಲಾಗಿದೆ.

ಶಾಶ್ವತ ನೀರು ಪೂರೈಕೆಗೆ ಯೋಜನೆಗಳು
ಎಂವಿಎಸ್‌ ಅನುಷ್ಠಾನದಲ್ಲಿ  ಸರಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯು ಕಾರ್ಕಳ ತಾಲೂಕಿನ ಹೆಬ್ರಿ ಹಾಗೂ ನಿಟ್ಟೆಯಲ್ಲಿ ಸ್ಥಾಪನೆಯಾಗುತ್ತಿದೆ. ಹೆಬ್ರಿ ಯೋಜನೆಗೆ 7.5 ಕೋ.ರೂ. ಹಾಗೂ ನಿಟ್ಟೆ ಯೋಜನೆಗೆ 5.91 ಕೋ.ರೂ. ಮಂಜೂರಾಗಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಹೆಬ್ರಿ ಪರಿಸರದ 4 ಗ್ರಾ.ಪಂ. ಗಳಿಗೆ ಹಾಗೂ ನಿಟ್ಟೆಯ 1 ಗ್ರಾ.ಪಂ.ಗೆ ನೀರು ಪೂರೈಕೆಯಾಗಲಿದ್ದು, ಇಲ್ಲಿನ ಸಮಸ್ಯೆ ಶಾಶ್ವತವಾಗಿ ಪರಿಹಾರವಾಗಲಿದೆ.

ಅಂತರ್ಜಲ ಮಟ್ಟ ಅಲ್ಪ ಏರಿಕೆ 


2017ರ ಎಪ್ರಿಲ್‌ನಲ್ಲಿ ನೀರಿನ ಅಭಾವವಿದ್ದ ಕಾರಣ ಎತ್ತರ ಪ್ರದೇಶದಲ್ಲಿರುವ ಕೆಲವೊಂದು ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಈ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿದೆ. 2018ರಲ್ಲಿ ನೀರಿನ ಬವಣೆ ಪುರಸಭಾ  ವ್ಯಾಪ್ತಿಯಲ್ಲಿ ತಲೆದೋರಿಲ್ಲ. ಈ ವರ್ಷ ಕುಡಿಯುವ ನೀರಿಗಾಗಿ ಜನತೆ ಪರಿತಪಿಸಬಾರದೆನ್ನುವ ನಿಟ್ಟಿನಲ್ಲಿ ಪುರಸಭೆಯ ವತಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪದ್ಮನಾಭ ಎನ್‌. ಕೆ., ಕಿರಿಯ ಅಭಿಯಂತರು, ಪುರಸಭೆ ಕಾರ್ಕಳ

ಗ್ರಾ.ಪಂ.ಗಳು 14ನೇ ನಿಧಿ ಅನುದಾನವನ್ನು ಗರಿಷ್ಠ ಪ್ರಮಾಣದಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ಬಳಸುತ್ತಿವೆ. ತುರ್ತು ನೀರಿನ ಯೋಜನೆಗಾಗಿ ಬಿಡುಗಡೆಗೊಂಡ 50 ಲಕ್ಷ ರೂ. ವೆಚ್ಚದಲ್ಲಿ ನಾನಾ ಕಾಮಗಾರಿಗಳು ನಡೆಯುತ್ತಿದ್ದು, ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.
 ಶ್ರೀಧರ್‌ ನಾಯಕ್‌, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಾರ್ಕಳ

ಗ್ರಾಮಾಂತರ ಭಾಗದಲ್ಲಿ  ಸಮಸ್ಯೆ
ಕಾರ್ಕಳ ನಗರ ಪ್ರದೇಶಗಳಲ್ಲಿ ನೀರಿನ ಅಭಾವ ಅಷ್ಟಾಗಿ ಎದುರಾಗದಿದ್ದರೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮಸ್ಯೆ ಇದೆ. ಕಳೆದ ವರ್ಷ ಹೆಬ್ರಿ, ಚಾರಾ, ಶಿವಪುರ, ಮರ್ಣೆ, ವರಂಗ, ನಿಟ್ಟೆ, ಕುಚ್ಚಾರು, ಪಳ್ಳಿ, ಕಲ್ಯಾ, ನೀರೆ, ಶಿರ್ಲಾಲು ಗ್ರಾ.ಪಂ. ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜುಗೊಳಿಸಲಾಗಿತ್ತು. ತಹಶೀಲ್ದಾರ್‌ ಅವರ ಸೂಚನೆ ಮೇರೆಗೆ ತಾ.ಪಂ. ಟ್ಯಾಂಕರ್‌ ಮೂಲಕ ಈ ಭಾಗಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುತ್ತಿತ್ತು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.