ಉದ್ಯೋಗ ಚೀಟಿ ಹೆಚ್ಚಿಸಿ ಕೆಲಸ ನೀಡಿ: ಮೋಹನ್‌ರಾಜ್‌


Team Udayavani, Jun 26, 2019, 5:13 AM IST

udyoga-cheeti

ಪಡುಬಿದ್ರಿ: ಗ್ರಾ.ಪಂ.ನ ಉದ್ಯೋಗ ಚೀಟಿ ಹೆಚ್ಚಿಸಿ ಕೆಲಸ ನೀಡ
ಬೇಕು. ಆ ಮೂಲಕ ಜಿಲ್ಲೆಯಲ್ಲಿ ಉದ್ಯೋಗ ಖಾತರಿಯ ಪ್ರಗತಿ ಸಾಧಿಸುವಂತಾಗ ಬೇಕು. ಸಾಮುದಾಯಿಕ ಕೆಲಸ ಕಾರ್ಯ ಹೆಚ್ಚಾಗಬೇಕು. ಕೆರೆಗಳ ಹೂಳೆತ್ತುವ ಕೆಲಸಗಳನ್ನು ಸಾಮೂಹಿಕವಾಗಿ ದುಡಿಯುವ ಕೈಗಳು ನಿರ್ವಹಿಸುವಂತಾಗಬೇಕು ಎಂದು ಕೃಷಿ ಇಲಾಖಾ ಸಹಾಯಕ ನಿರ್ದೇಶಕ ಮೋಹನ್‌ರಾಜ್‌ ಹೇಳಿದರು.

ಅವರು ಜೂ. 25ರಂದು ಪಡುಬಿದ್ರಿ ಗ್ರಾ. ಪಂ. ಸಭಾಭವನದಲ್ಲಿ ನಡೆದ 2019 –
20ನೇ ಸಾಲಿನ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿದರು.

ನಿಯಮ ಸಡಿಲಿಸಿ
ಉದ್ಯೋಗ ಖಾತರಿ ಯೋಜನೆಯಡಿ ಮೀನುಗಾರಿಕೆಯಲ್ಲಿ ಕೈರಂಪಣಿ, ನಾಡ ದೋಣಿ ಮೀನುಗಾರಿಕೆಯ ಸಹಿತ ಭತ್ತದ ಕೃಷಿಯನ್ನು ಸೇರಿಸುವಂತೆಯೂ ಬಾವಿ ತೋಡುವಂತಹ ಕೆಲಸಕ್ಕೆ ಸಣ್ಣ ಹಾಗೂ ಅತಿ ಸಣ್ಣ ರೈತರು ಭಾಗಿಯಾಗುವುದಕ್ಕೆ ಯಾವುದೇ ನಿರ್ದಿಷ್ಟ ಅಧಿಸೂಚನೆ ಇಲ್ಲದಿ
ದ್ದರೂ ಕನಿಷ್ಠ 50 ಸೆಂಟ್ಸ್‌ ಭೂಮಿಯನ್ನು ಹೊಂದಿರಬೇಕೆಂಬ ನಿಯಮ ಅನುಸರಿಸು ತ್ತಿರುವುದನ್ನು ಸಡಿಲಿಸಿ 10 ಅಥವಾ 15 ಸೆಂಟ್ಸ್‌ಗಳಿಗೆ ಇಳಿಸಬೇಕೆಂದು ಸಭೆಯಲ್ಲಿ ಆಗ್ರಹಿಸಿ ಠರಾವು ಮಂಡಿಸಲಾಯಿತು.

ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ರಾಜು ಮೂಲ್ಯ,
ಸಭೆಯಲ್ಲಿ ಪರಿಶೋಧನೆಯ ವೇಳೆ ಗಮನಿಸಲಾದ ಆಕ್ಷೇಪಣೆ ತಿಳಿಸಿ ಪಡುಬಿದ್ರಿ ಗ್ರಾ.ಪಂ.ನಲ್ಲಿ 732 ಉದ್ಯೋಗ ಚೀಟಿಗಳಿದ್ದು ಪ್ರಥಮ ಹಂತದಲ್ಲಿ 2,44,496 ರೂ.ಗಳನ್ನು ಕೂಲಿಯಾಗಿ ಪಾವತಿಸಲಾಗಿದೆ. ಇದು ಪಡುಬಿದ್ರಿ ಯಂತಹ ಪಂಚಾಯತ್‌ನಲ್ಲಿ ಕನಿಷ್ಠ 15 ಲಕ್ಷಗಳವರೆಗಾದರೂ ಆಗಬೇಕಾಗಿರು ವುದು ಪ್ರಗತಿಯ ದೃಷ್ಟಿಯಲ್ಲಿ ಅತ್ಯವಶ್ಯಕ ಎಂದವರು ತಿಳಿಸಿದರು.

ಕಾಮಿನಿ ನದಿಗೆ ಕಲ್ಲಿದ್ದಲು ನೀರು : ಆಕ್ಷೇಪ
ಕೃಷಿ ಅಧಿಕಾರಿಯಾಗಿ ಸಭೆಯಲ್ಲಿದ್ದ ಸಹಾಯಕ ನಿರ್ದೇಶಕ ಮೋಹನ್‌ರಾಜ್‌ ಕಾಮಿನಿ ನದಿಗೆ ಯುಪಿಸಿಎಲ್‌ ಕಲ್ಲಿದ್ದಲು ನೀರನ್ನು ಬಿಡಲಾಗಿದ್ದು ಒಂದೇ ದಿನದಲ್ಲಿ ಸಹಸ್ರಾರು ಮೀನುಗಳ ಮಾರಣ ಹೋಮವಾಗಿದೆ. ಕೃಷಿಕರು ಬಿತ್ತಿದ ಬಿತ್ತನೆ ಬೀಜ ನಾಶ ಹೊಂದಿದೆ ಎಂಬ ಪಡುಹಿತ್ಲುವಿನ ಲೋಹಿತಾಶ್ವ ಎಂಬವರ ಪ್ರಶ್ನೆಗೆ ಉತ್ತರಿಸಿ ಮೊದಲಾಗಿ ನೀರು ಕಲುಷಿತಗೊಂಡಿರುವುದನ್ನು ಪರಿಸರ ಇಲಾಖೆಯ ಪರಿಶೀಲನೆಗೊಳಪಡಿಸಿ ದೃಢೀಕರಿಸಿಕೊಳ್ಳಬೇಕು. ಆ ಬಳಿಕ ರೈತರು ತಮ್ಮ ಗ್ರಾ.ಪಂ. ಮೂಲಕ ಯೋಜನಾ ಕಂಪೆನಿಗೂ ನೋಟಿಸ್‌ ನೀಡಬೇಕು. ಎಲ್ಲವೂ ಖಾತರಿಗೊಂಡಾಗ ರೈತರ ಪ್ರತೀ ಹೆಕ್ಟೇರ್‌ ಕೃಷಿ ಭೂಮಿಗೆ 7,000 ರೂ. ಪರಿಹಾರವನ್ನು ಇಲಾಖೆಯಿಂದ ನೀಡಬಹುದಾದ ಸೌಲಭ್ಯಗಳಿವೆ ಎಂದವರು ತಿಳಿಸಿದರು.

ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷೆ ದಮಯಂತಿ ವಿ. ಅಮೀನ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವೈ. ಸುಕುಮಾರ್‌ ಉಪಸ್ಥಿತರಿದ್ದರು. ಗ್ರಾ. ಪಂ.
ಪಿಡಿಒ ಪಂಚಾಕ್ಷರೀ ಸ್ವಾಮಿ ಕೆರಿಮಠ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.