ಇನ್ನು ದೇಶಾದ್ಯಂತ ತಿಂಗಳಲ್ಲಿ ಒಂದೇ ದಿನ ವೇತನ ನೀಡಿಕೆ?
ಹೊಸ ಕಾಯ್ದೆ ಜಾರಿಗೆ ಮೋದಿ ಸರಕಾರದ ಪ್ಲ್ಯಾನ್ ; ಒಂದು ದೇಶ, ಒಂದೇ ದಿನ ವೇತನ ಕಾಯ್ದೆಗೆ ಚಿಂತನೆ
Team Udayavani, Nov 15, 2019, 8:10 PM IST
ಹೊಸದಿಲ್ಲಿ: ಹಲವು ಕಾನೂನು ಕಟ್ಟಳೆಗಳು, ಯೋಜನೆಗಳಲ್ಲಿ ಬದಲಾವಣೆಗಳನ್ನು ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಇನ್ನೊಂದು ಮಹತ್ವದ ಬದಲಾವಣೆಗೆ ಉದ್ದೇಶಿಸಿದೆ. ಒಂದು ವೇಳೆ ಈ ನಿಯಮ ಜಾರಿ ಯಾಗಿದ್ದೇ ಆದಲ್ಲಿ ದೇಶಾದ್ಯಂತ ಸಂಘಟಿತ ವಲಯದ ಎಲ್ಲ ಕಾರ್ಮಿಕರು ಒಂದೇ ದಿನ ವೇತನ ಪಡೆದುಕೊಳ್ಳಲಿದ್ದಾರೆ. ಹೀಗೆ ತಿಂಗಳ ನಿರ್ದಿಷ್ಟ ದಿನದಂದು ದೇಶಾದ್ಯಂತ ವೇತನ ನೀಡುವ “ಒಂದು ದೇಶ ಒಂದೇ ದಿನ ವೇತನ’ ಕಾಯ್ದೆಯನ್ನು ಜಾರಿಗೆ ತರಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಕಾಮಿರ್ಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತ, ಎಲ್ಲಾ ವಲಯಗಳು ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ನೀಡುವಂತೆ ಮಾಡುವುದು ಇದರ ಉದ್ದೇಶ. ಶೀಘ್ರ ಈ ಕಾಯ್ದೆ ಜಾರಿಗೊಳಿಸಲು ಪ್ರಧಾನಿ ಉತ್ಸುಕರಾಗಿದ್ದಾರೆ. ಇದೇ ರೀತಿ ಎಲ್ಲ ಕಾರ್ಮಿಕರಿಗೆ ಅನ್ವಯವಾಗುವಂತೆ ಎಲ್ಲ ವಲಯಗಳು ಅಡಕಗೊಳ್ಳುವಂತೆ ಕನಿಷ್ಠ ವೇತನವನ್ನೂ ಜಾರಿಗೊಳಿಸಲಾಗುವುದು ಎಂದವರು ಹೇಳಿದರು.
ಇದರೊಂದಿಗೆ ಔದ್ಯೋಗಿಕ ಸುರಕ್ಷೆ, ಆರೋಗ್ಯ ಮತ್ತು ಕೆಲಸದ ಕುರಿತ ಕಾಯ್ದೆ, ವೇತನ ಕಾಯ್ದೆ ಕೂಡ ಜಾರಿಗೊಳಿಸಲಾಗುವುದು ಎಂದರು. ವೇತನ ಬಗ್ಗೆ ಕಾಯ್ದೆ ಈಗಾಗಲೇ ಸಂಸತ್ತಿನಲ್ಲಿ ಪಾಸು ಮಾಡಲಾಗಿದೆ. ಇದನ್ನು ಜಾರಿಗೊಳಿಸುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!