ಕುಂಭಾಶಿ ಅಪಘಾತ: ಗಾಯಾಳು ಮಹಿಳಾ ಪೊಲೀಸ್ ಪೇದೆ ಸಾವು
Team Udayavani, Aug 2, 2019, 9:06 AM IST
ತೆಕ್ಕಟ್ಟೆ: ರಾ.ಹೆ.66ರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾ ಯಕ ದೇವಸ್ಥಾನದ ಮಹಾದ್ವಾರದ ಸಮೀಪ ಎರಡು ಬೈಕುಗಳು ಮುಖಾಮುಖೀ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಿಬಂದಿ ಹೇಮಾ (32) ಅವರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಬುಧವಾರ ರಾತ್ರಿ ಕುಂಭಾಶಿ ಗಾಯತ್ರಿ ಕಂಫರ್ಟ್ನ ಸಭಾಂಗಣ ದಲ್ಲಿ ಜರಗಿದ್ದ ಕುಂದಾಪುರ ವಲಯದ ಹಿರಿಯ ಅರಣ್ಯ ರಕ್ಷಕರ ಬೀಳ್ಕೊಡುಗೆ ಸಮಾರಂಭ ಮುಗಿಸಿ ಬೈಕಿನಲ್ಲಿ ಪತಿ ಜತೆಗೆ ಮನೆಗೆ ತೆರಳುತ್ತಿದ್ದಾಗ ಅತಿ ವೇಗದಿಂದ ಬಂದ ಬುಲೆಟ್ ಢಿಕ್ಕಿ ಹೊಡೆದಿತ್ತು. ಪರಿಣಾಮ ಬೈಕಿನ ಹಿಂಬದಿ ಸವಾರೆ ಹೇಮಾ ಅವರ ತಲೆಗೆ ತೀವ್ರ ಸ್ವರೂಪದ ಏಟಾಗಿತ್ತು. ಅವರು ಆಸ್ಪತ್ರೆ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದರು.
ಪತಿ ಗಂಭೀರ
ಗಂಭೀರ ಗಾಯಗೊಂಡಿರುವ ಹೇಮಾ ಅವರ ಪತಿ ತೆಗ್ಗರ್ಸೆ ನಿವಾಸಿ, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎರಡನೇ ದರ್ಜೆಯ ಸಹಾಯಕರಾಗಿ ರುವ ನಾಗರಾಜ್ ಕೊತ್ವಾಲ್ (35) ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ