ಬಡವ – ಬಲ್ಲಿದ ಭೇದವಿಲ್ಲದ “ಸಪ್ತಪದಿ’: ಕೋಟ
Team Udayavani, Feb 24, 2020, 7:45 AM IST
ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ “ಸಪ್ತಪದಿ’ ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಲು ಅವಕಾಶವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದ.ಕ. ಜಿಲ್ಲಾ ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಯಲಿರುವ “ಸಪ್ತಪದಿ’ ಸಾಮೂಹಿಕ ವಿವಾಹದ ಹಿನ್ನೆಲೆಯಲ್ಲಿ ರವಿವಾರ ಮಂಗಳೂರು ಮತ್ತು ಮತ್ತು ಉಡುಪಿಯ ಪುರಭವನದಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಪ್ತಪದಿ ರಥದ ಮೂಲಕ ಎಲ್ಲೆಡೆ ಸಾಮೂಹಿಕ ವಿವಾಹ ಕಾರ್ಯ ಕ್ರಮದ ಬಗ್ಗೆ ವ್ಯಾಪಕ ಅರಿವು ಮೂಡಿಸ ಲಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ರಾಜ್ಯದ 30 ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸ ಲಾಗಿದೆ ಎಂದರು.
ಪರಿವರ್ತನೆ ಆರಂಭ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, “ಧಾರ್ಮಿಕ ದತ್ತಿ ಇಲಾಖೆಯಿಂದ ಈಗ ಸಮಾಜಮುಖೀ ಚಟುವಟಿಕೆಗಳು ನಡೆಯುತ್ತಿವೆ. ಡಾ| ವಿ.ಎಸ್. ಆಚಾರ್ಯ ಅವರು ಸಾಮಾನ್ಯ ದೇವಸ್ಥಾನಗಳಿಗೂ ಅನುದಾನ ಕೊಡುವ ನಿಯಮ ತಂದು ಮೊದಲ ಪರಿವರ್ತನೆ ಮಾಡಿದರು. ಶ್ರೀನಿವಾಸ ಪೂಜಾರಿ ಅವರು ದೈವಸ್ಥಾನಗಳಿಗೂ ಅನುದಾನ ದೊರೆಯುವಂತೆ ಮಾಡಿದರಲ್ಲದೇ ಸರಳ ಸಾಮೂಹಿಕ ವಿವಾಹದ ಮೂಲಕ ಮತ್ತೂಂದು ಕ್ರಾಂತಿಕಾರಿ ಪರಿವರ್ತನೆಯಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ