ಮಿಯ್ನಾರು: ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸಾವು
Team Udayavani, Jun 14, 2019, 5:00 AM IST
ಕಾರ್ಕಳ: ಕಾರ್ಕಳ – ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ, ಎಲ್ಲೂರು ಬೆಳ್ಳಿಬೆಟ್ಟು ನಿವಾಸಿ ರಾಕೇಶ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ನಾರು ಗ್ರಾಮದ ಕರಿಯಕಲ್ಲು ಎಂಬಲ್ಲಿ ಜೂ. 12ರ ಮಧ್ಯಾಹ್ನ ಸಂಭವಿಸಿದೆ.
ಟಿಪ್ಪರ್ ಚಾಲಕರಾಗಿದ್ದ ರಾಕೇಶ್ ದೇವಾಡಿಗ ಮತ್ತು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಸಿಬಂದಿ ಪರಶುರಾಮ ಅವರು ಬಜಗೋಳಿಯಿಂದ ಕಾರ್ಕಳ ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಕಾರ್ಕಳ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಬಂದ ಕಾರು ಢಿಕ್ಕಿ ಹೊಡೆದಿದೆ. ಸಹಸವಾರ ಪರಶುರಾಮ ಅವರನ್ನು ಮಣಿ ಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸಿರಿಕುಮಾರ ಭಜನ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ರಾಕೇಶ್ ಸ್ನೇಹಜೀವಿಯಾಗಿದ್ದರು. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ