ಮಳೆ ಆರಂಭ: ಜಲ ಸಂಕಟ ನೀಗುವ ನಿರೀಕ್ಷೆ
Team Udayavani, Jun 12, 2019, 12:15 PM IST
ಉಡುಪಿ: ಉಡುಪಿ ನಗರಕ್ಕೆ ನೀರು ಪೂರೈಕೆಯಾಗುವ ಸ್ವರ್ಣಾ ನದಿ ಪಾತ್ರದ ಪ್ರದೇಶಗಳಲ್ಲಿ ಕೂಡ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಸಂಜೆಯ ಬಳಿಕ ಮಳೆ ಬಿರುಸಾಗಿದ್ದು, ನಗರದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಮುಕ್ತಿ ದೊರೆಯಲಿದೆ ಎಂಬ ಆಶಾಭಾವನೆ ಬಲವಾಗಿದೆ.
ಸೋಮವಾರ ಮತ್ತು ಮಂಗಳವಾರದ ಮಳೆಯಿಂದ ನೀರಿನ ಹರಿವು ಆರಂಭವಾಗಿಲ್ಲ. ಆದರೆ ಕೆಲವು ಹೊಂಡಗಳಿಗೆ ನೀರು ಸೇರಿದೆ. ನಿರಂತರ ಮಳೆಯಾದರೆ ಒಂದೆರಡು ದಿನಗಳಲ್ಲಿ ನದಿಯಲ್ಲಿ ನೀರಿನ ಹರಿವು ಆರಂಭವಾಗಬಹುದು ಎಂಬ ಅಂದಾಜು ಅಧಿಕಾರಿಗಳದ್ದು.
ಸ್ವರ್ಣಾ ನದಿಯ ಹೆಚ್ಚಿನ ಗುಂಡಿಗಳಲ್ಲಿದ್ದ ನೀರನ್ನು ಪಂಪಿಂಗ್ ಮಾಡಿ ಜೂ.9ರ ವರೆಗೆ ಸರಬರಾಜು ಮಾಡಲಾಗಿತ್ತು. ಆದರೆ ಎರಡು ದಿನಗಳಿಂದ ನೀರಿನ ಮಟ್ಟ ತೀರಾ ಕುಸಿದಿದೆ. ಮಂಗಳವಾರ 1 ಮೀ.ನಷ್ಟು ಮಾತ್ರ ನೀರಿತ್ತು. ಮಂಗಳವಾರ ನೀರು ಸರಬರಾಜಾಗಬೇಕಿದ್ದ ಪ್ರದೇಶಗಳ ಪೈಕಿ ಹೆಚ್ಚಿನ ಪ್ರದೇಶಗಳಿಗೆ ನೀರಿನ ಕೊರತೆಯಾಯಿತು. ಜತೆಗೆ ಮಣಿಪಾಲ ಈಶ್ವರನಗರದಲ್ಲಿ ನೀರಿನ ಪೈಪ್ ಒಡೆದು ಮತ್ತಷ್ಟು ತೊಂದರೆಯಾಯಿತು.
ತುಂಬೆ: ನೀರಿನ ಮಟ್ಟ ತುಸು ಏರಿಕೆ
ಮಂಗಳೂರು: ಮಂಗಳವಾರ ನೇತ್ರಾವತಿ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಮಂಗಳವಾರ 10 ಸೆಂ.ಮೀ.ನಷ್ಟು ಏರಿಕೆಯಾಗಿದೆ.
ಸೋಮವಾರ ಸಂಜೆ ವೇಳೆಗೆ ನೀರಿನ ಮಟ್ಟ 2.10 ಮೀ. ಇತ್ತು. ಮಂಗಳವಾರ ದಿನಪೂರ್ಣ ಪಂಪಿಂಗ್ ಮಾಡಿದ ಬಳಿಕ ಸಂಜೆಯ ವೇಳೆಗೂ ಡ್ಯಾಂನಲ್ಲಿ ನೀರಿನ ಮಟ್ಟ 2.20 ಮೀ. ಇದ್ದ ಹಿನ್ನೆಲೆಯಲ್ಲಿ ನೀರು ಡ್ಯಾಂಗೆ ಹರಿದುಬಂದಿದೆ ಎಂದು ಲೆಕ್ಕ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ