ಸುಗಮ ಚುನಾವಣೆಗೆ ಸನ್ನದ್ಧ; ಅಚ್ಚುಕಟ್ಟಿಗೆ ಆದ್ಯತೆ


Team Udayavani, Apr 18, 2019, 6:30 AM IST

sugama-chunavane

ಉಡುಪಿ: ಗುರುವಾರ ನಡೆಯುವ ಮತದಾನ ಪ್ರಕ್ರಿಯೆ ನಡೆಸಿಕೊಡಲು ಅಧಿಕಾರಿ, ಸಿಬಂದಿ ಬುಧವಾರದಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರವಾದ ಅಜ್ಜರಕಾಡು ಸೈಂಟ್‌ ಸಿಸಿಲೀಸ್‌ ಶಾಲೆಯಿಂದ ವಿವಿಪ್ಯಾಟ್‌ ಸಹಿತವಾದ ಮತಯಂತ್ರ ಹಾಗೂ ಇತರ ಪರಿಕರಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ ತೆರಳಿದರು.

ಉಡುಪಿ ಜಿಲ್ಲಾಧಿಕಾರಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್‌ಪಿ ನಿಶಾ ಜೇಮ್ಸ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಉಡುಪಿ ವಿ.ಭಾ ಕ್ಷೇತ್ರದ ಚುನಾವಣಾಧಿಕಾರಿ ಕೆಂಪೇಗೌಡ ಅವರ ಮೇಲುಸ್ತುವಾರಿಯಲ್ಲಿ ಮಸ್ಟರಿಂಗ್‌ ಪ್ರಕ್ರಿಯೆ ಬೆಳಗ್ಗೆ ಆರಂಭಗೊಂಡಿತು. ಮಧ್ಯಾಹ್ನ 2.30ರ ವೇಳೆಗೆ ಸುಮಾರು 2,000 ಮಂದಿ ಅಧಿಕಾರಿ,ಸಿಬಂದಿ ಮತದಾನ ಕೇಂದ್ರಗಳಿಗೆ ಬಸ್‌, ಮ್ಯಾಕ್ಸಿಕ್ಯಾಬ್‌ಗಳಲ್ಲಿ ತೆರಳಿದರು.

ಅಚ್ಚುಕಟ್ಟು ವ್ಯವಸ್ಥೆ
ತಮಗೆ ನಿಯೋಜಿತವಾದ ಮತಗಟ್ಟೆಯ ಮಾಹಿತಿ ಪಡೆಯಲು ಈ ಹಿಂದೆ ಕೆಲವೊಮ್ಮೆ ಅಧಿಕಾರಿಗಳು,ಸಿಬಂದಿ ಪರದಾಡುವ ಸ್ಥಿತಿ ಇತ್ತು. ಮತಗಟ್ಟೆಗಳಿಗೆ ತೆರಳುವ ವಾಹನಗಳ ಬಗ್ಗೆಯೂ ಗೊಂದಲ ಉಂಟಾಗುತ್ತಿತ್ತು. ಆದರೆ ಈ ಬಾರಿ ಇಂತಹ ಗೊಂದಲಗಳಿಗೆ ಅವಕಾಶವಿರಲಿಲ್ಲ. ಬಸ್‌ಗಳ ರೂಟ್‌, ಮತಗಟ್ಟೆಯ ವಿವರವನ್ನೊಳಗೊಂಡ ಮಾಹಿತಿ ಫ‌ಲಕವನ್ನು ಕೂಡ ಅಳವಡಿಸಲಾಗಿತ್ತು.

ಬಸ್‌ಗಳು ಮಸ್ಟರಿಂಗ್‌ ಕೇಂದ್ರದ ಎದುರಿನ ಮೈದಾನದಲ್ಲಿ ಒಂದೇ ಕಡೆ ನಿಲುಗಡೆಯಾಗಲು ಅವಕಾಶ ಮಾಡಿಕೊಡಲಾಗಿತ್ತು. ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಿಸಲಾಗಿತ್ತು. ತಹಶೀಲ್ದಾರ್‌ ಅವರು ಸ್ಥಳದಲ್ಲಿದ್ದು ನಿಗಾ ವಹಿಸಿದ್ದರು.

ಒಟ್ಟು 2,250 ಮಂದಿಗೆ ಉಪಾಹಾರ ಹಾಗೂ ಪಾಯಸ ಸಹಿತವಾದ ಊಟ ಒದಗಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿಯವರ ನೇತೃತ್ವದಲ್ಲಿ ಮೂವರು ವೈದ್ಯರು ಮತ್ತು ದಾದಿಯರನ್ನೊಳಗೊಂಡ ವೈದ್ಯಕೀಯ ತಂಡ ಅಗತ್ಯವಿದ್ದ ಸಿಬಂದಿಗೆ ಚಿಕಿತ್ಸೆ ನೀಡಿತು.

ಪ್ರತಿ ಮತಗಟ್ಟೆಗೆ 1,800 ರೂ.
ಪ್ರತಿ ಮತಗಟ್ಟೆಗೂ ಸಿಬಂದಿಗೆ ಉಪಾಹಾರ ಮತ್ತು ಊಟಕ್ಕಾಗಿ ಈಗಾಗಲೇ 1,800 ರೂ.ಗಳನ್ನು ಮತಗಟ್ಟೆ (ಶಾಲೆ) ಮುಖ್ಯೋಪಾಧ್ಯಾಯರಿಗೆ ನೀಡಲಾಗಿದೆ. ಅಲ್ಲದೆ ಪ್ರತಿ ಮತಗಟ್ಟೆಗೆ 20 ಲೀಟರ್‌ನ 2 ಕ್ಯಾನ್‌ ಕುಡಿಯುವ ನೀರು ಒದಗಿಸಲಾಗುತ್ತದೆ. ಅಗತ್ಯಬಿದ್ದರೆ ಹೆಚ್ಚುವರಿ ನೀರು ಒದಗಿಸಲಾಗುತ್ತದೆ. ಸಿಬಂದಿಗೆ ಮೆಡಿಕೆಲ್‌ ಕಿಟ್‌ನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಬ್ಯಾಂಡೇಜ್‌ ಹಾಕಿದರೂ ಕುಗ್ಗದ ಉತ್ಸಾಹ
ಚುನಾವಣಾ ಕರ್ತವ್ಯ ದೃಢಪತ್ರ(ಇಡಿಸಿ) ಪಡೆಯಲು ಮಸ್ಟರಿಂಗ್‌ ಕೇಂದ್ರಕ್ಕೆ ಆಗಮಿಸಿದ್ದ ಶೀರೂರಿನ ಶಾಲೆಯೊಂದರ ಶಿಕ್ಷಕ ಗಿರೀಶ್‌ ಅವರು ಇತ್ತೀಚೆಗೆ ಮನೆ ಸಮೀಪ ಬಿದ್ದು ಕೈ ಮುರಿತವಾಗಿತ್ತು. ಕೈಗೆ ಬ್ಯಾಂಡೇಜ್‌ ಹಾಕಿಕೊಂಡೇ ಚುನಾವಣಾ ಕರ್ತವ್ಯಕ್ಕಾಗಿ ಆಗಮಿಸಿದ್ದರು. “ನನಗೆ ವಿನಾಯಿತಿ ಕೇಳಿದರೆ ಕೊಡುತ್ತಾರೆ. ಆದರೆ ನಾನು ಆಸಕ್ತಿಯಿಂದ ಕರ್ತವ್ಯಕ್ಕೆ ಬಂದಿದ್ದೇನೆ. ನನ್ನಿಂದ ಆಗುವ ಕೆಲಸ ಮಾಡುತ್ತೇನೆ. ಈ ಹಿಂದೆ ಹಲವು ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೆ’ ಎಂದು ಗಿರೀಶ್‌ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.