ಅಭಿವೃದ್ಧಿಯಲ್ಲಿ ಸಹಕರಿಸುವಂತೆ ಸಂಸದೆಗೆ ಮನವಿ
ಕಟಪಾಡಿ : ವಿಶ್ವನಾಥ ಕ್ಷೇತ್ರ
Team Udayavani, Jun 11, 2019, 6:00 AM IST
ಕಟಪಾಡಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ನೀಡಿ ಸಹಕರಿಸುವಂತೆ ಕೋರಿ ಕ್ಷೇತ್ರಾಡಳಿತ ಮಂಡಳಿಯು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿಯನ್ನು ನೀಡಿತು.
ಕ್ಷೇತ್ರದ ಒಳಾಂಗಣ ಮತ್ತು ಹೊರಾಂಗಣಕ್ಕೆ ತಗಡು ಚಪ್ಪರ ನಿರ್ಮಿಸಲು ಸುಮಾರು 15 ಲಕ್ಷ ಹಾಗೂ 10 ಶೌಚಾಲಯಗಳ ನಿರ್ಮಾಣಕ್ಕೆ ಸುಮಾರು 5 ಲಕ್ಷ ಅನುದಾನವನ್ನು ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿಯಲ್ಲಿ ಉಲ್ಲೇಖೀಸಲಾಗಿದೆ.
ಈ ಸಂದರ್ಭ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಗೌ|ಪ್ರ|ಕಾರ್ಯದರ್ಶಿ ಶಿವಾನಂದ ಯು. ಕೋಶಾಧಿಕಾರಿ ವೀರೇಶ್ ಸುವರ್ಣ, ಆಡಳಿತ ಮಂಡಳಿಯ ಕಾಮ್ರಾಜ್ ಸುವರ್ಣ, ಪ್ರಮೋದ್ ಸುವರ್ಣ, ಸತೀಶ್ ಅಂಬಾಡಿ, ಶಿಲ್ಪಾ ಜಿ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್