ದಿಲ್ಲಿ ವರೆಗೆ ಶೋಭಾ ಪಯಣ


Team Udayavani, May 24, 2019, 6:05 AM IST

shobha–2

ಉಡುಪಿ: ದ್ವಿತೀಯ ಬಾರಿಗೆ ಪುನರಾಯ್ಕೆಯಾದ ಶೋಭಾ ಕರಂದ್ಲಾಜೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಮೂಲದವರು. ಬೆಂಗಳೂರು ಮತ್ತು ಮಣಿಪಾಲದಲ್ಲಿ ಉದ್ಯೋಗಿಯಾಗಿದ್ದರು. ಬಿಜೆಪಿ ಉಡುಪಿ ನಗರ, ಬಳಿಕ ಜಿಲ್ಲಾ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದರು, ಪ್ರಸ್ತುತ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಸುನಾಮಿ ಸಂದರ್ಭ
ಸುನಾಮಿ ದುರಂತ ಸಂದರ್ಭ ತಮಿಳುನಾಡಿನ ನಾಗಪಟ್ಟಣಂಗೆ ಧಾವಿಸಿ ನೆರವು ಕಾರ್ಯಗಳಲ್ಲಿ ಭಾಗಿಯಾಗಿದ್ದರು. ರಾಜ್ಯ 2009ರಲ್ಲಿ ಭೀಕರ ನೆರೆ ಹಾವಳಿಗೆ ತುತ್ತಾದಾಗ ಮಂತ್ರಾಲಯ, ರಾಯಚೂರು ಜಿಲ್ಲೆಗಳಿಗೆ ಧಾವಿಸಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದರು. ಶಬರಿಮಲೆಯಲ್ಲಿ 2010ರಲ್ಲಿ ಕಾಲು¤ಳಿತ ನಡೆದಾಗಲೂ ಧಾವಿಸಿ ಸೇವೆಗಳಲ್ಲಿ ತೊಡಗಿದ್ದರು.

ಎಂಡೋ ಪೀಡಿತರ ಸೇವೆ
ಅಧಿಕಾರ ಇಲ್ಲದಾಗಲೂ ಎಂಡೋಪೀಡಿತ ಪ್ರದೇಶಗಳಲ್ಲಿ ಅಂಗವಿಕಲರ ಸಂಕಷ್ಟಗಳನ್ನು ಸರಕಾರದ ಗಮನಕ್ಕೆ ತಂದು ಪರಿಹಾರ ಮತ್ತು ಮಾಸಾಶನ ಕೊಡಿಸುವಲ್ಲಿ ಯಶಸ್ವಿಯಾದರು.

ಮೈಸೂರಿನ ಉಸ್ತುವಾರಿ ಸಚಿವೆಯಾಗಿ ಅವರು ನಡೆಸಿದ ಅದ್ದೂರಿ ದಸರಾ ವಿಶ್ವದ ಗಮನ ಸೆಳೆದಿತ್ತು. ಮೈಸೂರು, ತಲಕಾಡಿನ ಅಭಿವೃದ್ಧಿಗಾಗಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ಮಾಡಿದರು.

ಪಂ.ರಾಜ್‌ ಇಲಾಖೆ ನಂ. 1
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಸಚಿವೆಯಾಗಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಆ ವರ್ಷದಲ್ಲಿ ನಮ್ಮ ರಾಜ್ಯ ನಂ. 1 ಆಗುವ ಅದ್ಭುತ ಸಾಧನೆ ಮಾಡಿದರು. ಇಂಧನ ಸಚಿವೆಯಾಗಿ ವಿದ್ಯುತ್‌ ಉತ್ಪಾದನೆ ಮತ್ತು ವಿತರಣೆ ಕಡೆಗೆ ವಿಶೇಷ ಗಮನ ನೀಡಿದರು.

ನಕಲಿ ಪಡಿತರ ಚೀಟಿ ಪತ್ತೆ
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆಯಾಗಿ ಇಲಾಖೆಯಲ್ಲಿ ಪಾರದರ್ಶಕತೆ ತಂದರು. ಇದು ಮುಂದೆ ದೇಶಕ್ಕೆ ಮಾದರಿಯಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆಯಲ್ಲಿ ಕಡಿಮೆ ಅವಧಿಯಲ್ಲಿ ಕೂಡ ಆ ಇಲಾಖೆಗಳಿಗೆ ಹೊಸ ಕಾಯಕಲ್ಪ ನೀಡಿದ್ದರು.

ಸಂಸದೆಯಾಗಿ ಸಾಧನೆ
ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಿದ್ದು, ರಾ. ಹೆದ್ದಾರಿಗಳ ಉನ್ನತೀಕರಣ, ವಿವಿಧ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ
ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆ ಗೇರಿಸುವ ಕೆಲಸ ಮಾಡಿದರು. ಕೇಂದ್ರ ಪುರಸ್ಕೃತ ಅಭಿವೃದ್ಧಿ ಯೋಜನೆಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷೆಯಾಗಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಕೊನೆಯ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿಯೇ  ಮೊದಲ ಸ್ಥಾನಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.